ಬ್ರೇಕಿಂಗ್ ನ್ಯೂಸ್
13-05-26 12:39 pm HK News Staffer ಕ್ರೈಂ
ಉಳ್ಳಾಲ, ಮೇ 13: ಕುತ್ತಾರು ಜಂಕ್ಷನ್ ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣದ ವಿಚಾರದಲ್ಲಿ ಭದ್ರತಾ ಸಿಬ್ಬಂದಿಯನ್ನ ತಳ್ಳಿ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಘೇರಾವ್ ಹಾಕಿ ತರಾಟೆಗೈದ ಮದನಿ ನಗರದ ಜುನೈದ್ ಮತ್ತು ಆತನ ಹತ್ತು ಜನ ಸಹಚರರ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಸ್ಪೀಕರ್ ಯು.ಟಿ.ಖಾದರ್ ಅವರ ಅಂಗ ರಕ್ಷಕ ಸಿಎಸ್ ಆರ್ ಘಟಕದ ಸಿಬ್ಬಂದಿ ಮೊಹಮ್ಮದ್ ಯಾಸೀನ್ ಇನಾಮದಾರ ನೀಡಿರುವ ದೂರಿನ ಆಧಾರದಡಿ ಉಳ್ಳಾಲ ಠಾಣೆಯಲ್ಲಿ ಹನ್ನೊಂದು ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಕಳೆದ ಮೇ 7 ರ ಗುರುವಾರ ರಾತ್ರಿ 10 ಗಂಟೆ ವೇಳೆ ಸ್ಪೀಕರ್ ಯು.ಟಿ.ಖಾದರ್ ಅವರು ಉಳ್ಳಾಲ ಮಾಸ್ತಿಕಟ್ಟೆಯ ರೆಸಾರ್ಟ್ ಒಂದರಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಿಂತಿರುಗುವ ವೇಳೆ ಮದನಿ ನಗರದ ಜುನೈದ್ ಹಾಗೂ ಇತರ ಹತ್ತು ಮಂದಿ ಏಕಾಏಕಿ ಸ್ಪೀಕರ್ ಬಳಿ ಹೋಗುವಾಗ ಅಂಗರಕ್ಷಕರಾದ ಮೊಹಮ್ಮದ್ ಯಾಸೀನ ಅವರನ್ನು ತಡೆದಿದ್ದು , ಈಗಾಗಲೇ ಬಹಳ ತಡವಾಗಿದೆ ಎಂದು ಹೇಳಿ ಸ್ಪೀಕರ್ ಭೇಟಿಗೆ ಅವಕಾಶ ನಿರಾಕರಿಸಿದ್ದರು. ಈ ವೇಳೆ ಜುನೈದ್ ಹಾಗೂ ಸಹಚರರು ಅಂಗರಕ್ಷಕ ಯಾಸೀನ್ ಅವರನ್ನ ತಳ್ಳಿ ಮುನ್ನುಗ್ಗಿದ್ದು, ಸ್ಪೀಕರ್ ಖಾದರ್ ಅವರನ್ನ ಘೇರಾವ್ ಹಾಕಿ ಏರು ಧ್ವನಿಯಲ್ಲಿ ಕುತ್ತಾರು ಕೊರಗಜ್ಜನ ವೃತ್ತದ ವಿಚಾರದಲ್ಲಿ ತರಾಟೆಗೈದಿದ್ದಲ್ಲದೆ, ಅದರ ವೀಡಿಯೋವನ್ನು ಆಕ್ಷೇಪಾರ್ಹ ಬರಹಗಳೊಂದಿಗೆ ಜಾಲತಾಣಗಳಲ್ಲಿ ಹರಿಯಬಿಟ್ಟಿರುವುದಾಗಿ ಗನ್ ಮ್ಯಾನ್ ಮೊಹಮ್ಮದ್ ಯಾಸೀನ ಅವರು ತನ್ನ ಮೇಲಾಧಿಕಾರಿಗಳ ಸೂಚನೆಯಂತೆ ಮೇ 9 ರಂದು ತಡವಾಗಿ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
ಕುತ್ತಾರು ಕೊರಗಜ್ಜನ ಆದಿಕ್ಷೇತ್ರಕ್ಕೆ ರಾಜ್ಯದ ವಿವಿಧ ಕಡೆಗಳಿಂದ ಬರುವ ಭಕ್ತಾಧಿಗಳಿಗೆ ಮಾಹಿತಿ ನೀಡುವುದಕ್ಕಾಗಿ ವರ್ಷಗಳ ಹಿಂದೆ ಕುತ್ತಾರು ಜಂಕ್ಷನ್ ನಲ್ಲಿ ಸ್ಥಳೀಯ ಬಜರಂಗದಳ ಸಂಘಟನೆಯು ಕೊರಗಜ್ಜನ ಮುಟ್ಟಾಳೆ ಹಾಗೂ ದಂಟೆಯ ಪ್ರತಿಕೃತಿಯುಳ್ಳ ಸಣ್ಣ ವೃತ್ತವೊಂದನ್ನ ನಿರ್ಮಿಸಿತ್ತು. ಇದೀಗ ಆ ಸಣ್ಣ ವೃತ್ತವನ್ನ ತೆರವುಗೊಳಿಸಿ ನಿಟ್ಟೆ ಪರಿಗಣಿತ ವಿವಿಯು ನೂತನ ವೃತ್ತವೊಂದನ್ನು ನಿರ್ಮಿಸುತ್ತಿದೆ. ಈ ಮಧ್ಯೆ ಕುತ್ತಾರಿನಲ್ಲಿ ಕೊರಗಜ್ಜನ ಹೆಸರಲ್ಲಿ ವೃತ್ತ ನಿರ್ಮಾಣವಾಗಬಾರದೆಂದು ಕುತ್ತಾರು ಮದನಿನಗರದ ಮುಸ್ಲಿಮರ ಗುಂಪೊಂದು ಆಕ್ಷೇಪ ವ್ಯಕ್ತಪಡಿಸಿ ಸ್ಪೀಕರ್ ಖಾದರ್ ಅವರನ್ನ ಘೇರಾವ್ ಮಾಡಿ ತರಾಟೆಗೈದಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ಸಂಚಲನ ಉಂಟು ಮಾಡಿದ್ದಲ್ಲದೆ, ಸ್ಪೀಕರ್ ಅವರ ಭದ್ರತಾ ವ್ಯವಸ್ಥೆಯ ಬಗ್ಗೆಯೂ ಪ್ರಶ್ನೆ ಹುಟ್ಟು ಹಾಕಿತ್ತು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm