ಬ್ರೇಕಿಂಗ್ ನ್ಯೂಸ್
13-05-26 03:39 pm HK News Staffer ಕ್ರೈಂ
ಬೆಂಗಳೂರು, ಮೇ 13: ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ದ್ವಿಚಕ್ರ ವಾಹನ ಸ್ಫೋಟಗೊಂಡ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಗರದ ಹಲಸೂರು ಪೊಲೀಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಹಲಸೂರಿನ ಮರ್ಫಿಟೌನ್ ನಿವಾಸಿ ಲೂರ್ದ್ ನಾಥನ್(65) ಮೃತ ವೃದ್ಧ.
ಆಟೋ ಚಾಲಕರಾಗಿದ್ದ ಲೂರ್ದ್ ನಾಥನ್ ಅನಾರೋಗ್ಯದ ಹಿನ್ನೆಲೆಯಲ್ಲಿ ಆಟೋ ಚಾಲನೆಗೆ ಹೋಗದೆ ಮನೆಯಲ್ಲಿಯೇ ಇರುತ್ತಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲೂರ್ದ್ ನಾಥನ್ ತಮ್ಮ ಮಗ ಬಳಸುವಂತಹ ಎಲೆಕ್ಟ್ರಿಕಲ್ ದ್ವಿಚಕ್ರ ವಾಹನವನ್ನು ಸೋಮವಾರ ರಾತ್ರಿ 11 ಗಂಟೆಯ ಸುಮಾರಿಗೆ ಎಂದಿನಂತೆ ತಮ್ಮ ಚಿಕ್ಕದಾದ ಮನೆಯ ಒಳಗಡೆಯೇ ಚಾರ್ಜ್ಗೆ ಹಾಕಿ ಮಲಗಿದ್ದರು. ಮಧ್ಯರಾತ್ರಿ 3 ಗಂಟೆಗೆ ಏಕಾಏಕಿ ದ್ವಿಚಕ್ರ ವಾಹನ ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಮಲಗಿದ್ದ ಲೂರ್ದ್ ನಾಥನ್ಗೆ ಮೈಯೆಲ್ಲಾ ಸುಟ್ಟ ಗಾಯಗಳಾಗಿದ್ದು, ಸ್ಫೋಟದ ಶಬ್ಧ ಕೇಳಿ ಮನೆಯ ಮೊದಲ ಮಹಡಿಯಲ್ಲಿದ್ದ ಮಗ ಮತ್ತು ಸೊಸೆ ಬಂದು ನೋಡಿದಾಗ ಲೂರ್ದ್ ನಾಥನ್ ಗಂಭೀರವಾಗಿ ಗಾಯಗೊಂಡು ಒದ್ದಾಡುತ್ತಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರನ್ನು ಪರೀಕ್ಷಿಸಿದ ವೈದ್ಯರು ದಾರಿ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ.
ಮನೆಯ ಒಳಗಡೆಯಲ್ಲಿಯೇ ಚಾರ್ಜ್ಗೆ ಹಾಕಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಫೋಟದಿಂದ ಲೂರ್ದ್ ನಾಥನ್ ಸುಟ್ಟು ಹೋಗಿ ಗಂಭೀರವಾಗಿ ಗಾಯಗೊಂಡಿದ್ದರು. ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ಟಿ.ವಿ ಮತ್ತು ಹಾಸಿಗೆಗೆ ಜ್ವಾಲೆ ತಾಗಿ ಹೊತ್ತಿ ಉರಿದಿದೆ. ಬ್ಯಾಟರಿ ಓವರ್ ಫ್ಲೋ ಆಗಿ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಲೂರ್ದ್ ನಾಥನ್ ಪುತ್ರ ಫ್ರಾಂಕ್ ಆಟೋನಿ ಎಂಬುವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm