ಬ್ರೇಕಿಂಗ್ ನ್ಯೂಸ್
13-05-26 06:36 pm HK News Staffer ಕ್ರೈಂ
ಹಾಸನ, ಮೇ 13: ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಭುಜ ತಾಗಿದ ವಿಚಾರಕ್ಕೆ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹಾಸನ ನಗರದ ಕುವೆಂಪುನಗರದಲ್ಲಿರುವ ಎಂ.ಜೆ ಫಿಟ್ನೆಸ್ ಸ್ಟುಡಿಯೋದಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಈ ಹಲ್ಲೆ ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.
ಘಟನೆಯಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡ ಯುವಕನನ್ನು ಕೀರ್ತನ್ ಎಂದು ಗುರುತಿಸಲಾಗಿದ್ದು, ಹಲ್ಲೆ ನಡೆಸಿದ ಆರೋಪಿಯನ್ನು ವರುಣ್ ಎಂದು ಹೇಳಲಾಗಿದೆ. ಇಬ್ಬರೂ ಜಿಮ್ನಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ, ಒಂದು ಬದಿಯಿಂದ ಮತ್ತೊಂದು ಬದಿಗೆ ತೆರಳುವಾಗ ಕೀರ್ತನ್ ಅವರ ಭುಜ ವರುಣ್ ಭುಜಕ್ಕೆ ತಾಗಿತ್ತು ಎನ್ನಲಾಗಿದೆ. ಈ ಸಣ್ಣ ವಿಚಾರವೇ ದೊಡ್ಡ ಗಲಾಟೆಗೆ ಕಾರಣವಾಗಿದೆ.
ಭುಜ ತಾಗಿದ್ದಕ್ಕೆ ಕೋಪಗೊಂಡ ವರುಣ್, ಕೀರ್ತನ್ನನ್ನು ಕರೆದು ಅವಾಜ್ ಹಾಕಿದ ಬಳಿಕ ಏಕಾಏಕಿ ತಲೆ ಭಾಗಕ್ಕೆ ಬಲವಾಗಿ ಹೊಡೆದಿದ್ದಾನೆ. ಹಲ್ಲೆಯ ತೀವ್ರತೆಗೆ ಕೀರ್ತನ್ ಅವರ ತಲೆಬರುಡೆಗೆ ಪೆಟ್ಟು ಬಿದ್ದ ಕಾರಣ ಸ್ಥಳದಲ್ಲೇ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈದ್ಯರ ಮಾಹಿತಿ ಪ್ರಕಾರ, ಕೀರ್ತನ್ ಅವರ ತಲೆಬುರುಡೆಗೆ ಬಲವಾದ ಪೆಟ್ಟು ಬಿದ್ದ ಕಾರಣ ಕೋಮಾಗೆ ಜಾರಿದ್ದಾರೆ ಎನ್ನಲಾಗಿದೆ. ಸದ್ಯ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಘಟನೆ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದರ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕೋಪ ಮತ್ತು ಅಹಂಕಾರ ಕೆಲವೇ ಕ್ಷಣಗಳಲ್ಲಿ ಜೀವ ಹಾನಿಗೂ ಕಾರಣವಾಗಬಹುದು. ಕ್ಷುಲ್ಲಕ ವಿಚಾರಗಳನ್ನು ಮಾತಿನ ಮೂಲಕ ಬಗೆಹರಿಸಿಕೊಳ್ಳುವ ಬದಲು ಹಿಂಸೆಗೆ ಮೊರೆಹೋದರೆ ಅದರ ಪರಿಣಾಮ ಭೀಕರವಾಗಿರುತ್ತದೆ. ಯುವಕರು ಕೋಪ ನಿಯಂತ್ರಣ, ಸಹನೆ ಮತ್ತು ಪರಸ್ಪರ ಗೌರವವನ್ನು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ.
Shocking gym assault in Hassan, Karnataka: At M.J. Fitness, a minor shoulder bump led to Varun kicking Kirthan in the head, causing skull fracture & coma. Victim in ICU, police investigating. pic.twitter.com/pUu6w1rvET
— Ghar Ke Kalesh (@gharkekalesh) May 13, 2026
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm