ಬ್ರೇಕಿಂಗ್ ನ್ಯೂಸ್
14-05-26 01:41 pm HK News Staffer ಕ್ರೈಂ
ಉಳ್ಳಾಲ, ಮೇ 14: ಉಳ್ಳಾಲ ಬೈಲ್ ಮೂಲದ ಮಹಿಳೆಯೊಬ್ಬರ ದಾಖಲಾತಿಗಳನ್ನು ದುರುಪಯೋಗಪಡಿಸಿ ಬೇರೊಬ್ಬ ಮಹಿಳೆ ನಕಲಿ ಪಾಸ್ಪೋರ್ಟ್ ಪಡೆದು ವಿದೇಶಕ್ಕೆ ತೆರಳಿದ ಘಟನೆ ನಡೆದಿದ್ದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಪೊಲೀಸ್ ನಿರೀಕ್ಷಕ ಗೋಪಾಲಕೃಷ್ಣ ಭಟ್ ಬಿ. ಅವರ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಶೋಧ ಕೇಶವ ಎಂಬವರ ಹೆಸರಿನಲ್ಲಿ ಅನ್ಯ ಮಹಿಳೆ ಪಾಸ್ಪೋರ್ಟ್ ಪಡೆದು ವಿದೇಶ ಪ್ರಯಾಣ ಮಾಡಿರುವ ಕುರಿತು ಮೇ 8ರಂದು ಪೊಲೀಸರಿಗೆ ಖಚಿತ ಮಾಹಿತಿ ದೊರಕಿತ್ತು.
ಪಾಸ್ಪೋರ್ಟ್ ಅಪ್ಲಿಕೇಶನ್ ಸಂಖ್ಯೆ BNX067061521924 ಪರಿಶೀಲಿಸಿದ ವೇಳೆ ಅರ್ಜಿಯಲ್ಲಿ ನಮೂದಿಸಿದ್ದ ಹೆಸರು, ವಿಳಾಸ ಹಾಗೂ ಭಾವಚಿತ್ರದಲ್ಲಿ ವ್ಯತ್ಯಾಸ ಕಂಡುಬಂದಿದೆ. ತನಿಖೆಯಲ್ಲಿ ಪಾಸ್ಪೋರ್ಟ್ನಲ್ಲಿ ಬಳಸಿದ್ದ ಭಾವಚಿತ್ರವು ಪ್ರೀತಾ ಡಿ’ಸೋಜಾ ಎಂಬವರದ್ದು ಎಂದು ತಿಳಿದುಬಂದಿದೆ. ಪಾಸ್ಪೋರ್ಟ್ ಸೇವಾ ಪೋರ್ಟಲ್ ದಾಖಲೆಗಳ ಪ್ರಕಾರ, ಅರ್ಜಿಯಲ್ಲಿ “ಯಶೋಧ ಕೇಶವ “ ಎಂದು ಕೈಬರಹದಲ್ಲಿ ನಮೂದಿಸಿ, ಅದರೊಂದಿಗೆ ಪ್ರೀತಾ ಡಿ’ಸೋಜಾ ಅವರ ಭಾವಚಿತ್ರ ಅಳವಡಿಸಲಾಗಿತ್ತು. ಯಶೋಧ ಎಂಬ ಹೆಸರಿನ ಸಹಿಯನ್ನೂ ಪ್ರೀತಾ ಡಿ’ಸೋಜ ಅವರೇ ಮಾಡಿರುವುದು ಪತ್ತೆಯಾಗಿದೆ.
ಇನ್ನಷ್ಟು ಪರಿಶೀಲನೆ ನಡೆಸಿದಾಗ, ಪ್ರೀತಾ ಡಿ’ಸೋಜಾ ಅವರು ಯಶೋಧ ಕೇಶವ ಅವರ ದಾಖಲೆಗಳಲ್ಲಿದ್ದ ವಿಳಾಸವನ್ನು ಬಳಸಿ ತಪ್ಪು ಮಾಹಿತಿ ನೀಡಿ ಅಕ್ರಮವಾಗಿ ಪಾಸ್ಪೋರ್ಟ್ ಪಡೆದು, 2025ರ ಮಾರ್ಚ್ 17ರಂದು ಮುಂಬೈ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಿರುವುದು ತಿಳಿದುಬಂದಿದೆ.
ಅಕ್ರಮಕ್ಕೆ ಉಳ್ಳಾಲ ನಿವಾಸಿ ಪ್ರೇಮ್ ಡಿ’ಸೋಜಾ ಸಹಕಾರ ನೀಡಿದ್ದಾನೆ ಎನ್ನಲಾಗಿದ್ದು, ಪ್ರೀತಾ ಡಿ’ಸೋಜಾ ಅವರನ್ನು ಇಸ್ರೇಲ್ಗೆ ಕಳುಹಿಸುವ ಉದ್ದೇಶದಿಂದ ಯಶೋಧ ಕೇಶವ ಎಂಬವರ ದಾಖಲಾತಿಗಳನ್ನು ಬಳಸಿ ಪಾಸ್ಪೋರ್ಟ್ ಸಿದ್ಧಪಡಿಸಿದ್ದಾನೆ ಎಂದು ಆರೋಪಿಸಲಾಗಿದೆ. ಹಾಗೆಯೇ, ಯಶೋಧ ಕೇಶವ ಅವರು ತಮ್ಮ ದಾಖಲಾತಿಗಳನ್ನು ಪ್ರೀತಾ ಡಿ’ಸೋಜಾ ಅವರಿಗೆ ನೀಡಿ ನಕಲಿ ಪಾಸ್ಪೋರ್ಟ್ ಪಡೆಯಲು ಸಹಕರಿಸಿರುವ ಆರೋಪವೂ ಕೇಳಿಬಂದಿದೆ. ಪ್ರಕರಣದಲ್ಲಿ ಪ್ರೀತಾ ಡಿ’ಸೋಜಾ, ಪ್ರೇಮ್ ಡಿ’ಸೋಜಾ ಹಾಗೂ ಯಶೋಧ ಕೇಶವ ಸೇರಿದಂತೆ ಇತರರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm