ಬ್ರೇಕಿಂಗ್ ನ್ಯೂಸ್
14-05-26 01:41 pm HK News Staffer ಕ್ರೈಂ
ಉಳ್ಳಾಲ, ಮೇ 14: ಉಳ್ಳಾಲ ಬೈಲ್ ಮೂಲದ ಮಹಿಳೆಯೊಬ್ಬರ ದಾಖಲಾತಿಗಳನ್ನು ದುರುಪಯೋಗಪಡಿಸಿ ಬೇರೊಬ್ಬ ಮಹಿಳೆ ನಕಲಿ ಪಾಸ್ಪೋರ್ಟ್ ಪಡೆದು ವಿದೇಶಕ್ಕೆ ತೆರಳಿದ ಘಟನೆ ನಡೆದಿದ್ದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಪೊಲೀಸ್ ನಿರೀಕ್ಷಕ ಗೋಪಾಲಕೃಷ್ಣ ಭಟ್ ಬಿ. ಅವರ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಶೋಧ ಕೇಶವ ಎಂಬವರ ಹೆಸರಿನಲ್ಲಿ ಅನ್ಯ ಮಹಿಳೆ ಪಾಸ್ಪೋರ್ಟ್ ಪಡೆದು ವಿದೇಶ ಪ್ರಯಾಣ ಮಾಡಿರುವ ಕುರಿತು ಮೇ 8ರಂದು ಪೊಲೀಸರಿಗೆ ಖಚಿತ ಮಾಹಿತಿ ದೊರಕಿತ್ತು.
ಪಾಸ್ಪೋರ್ಟ್ ಅಪ್ಲಿಕೇಶನ್ ಸಂಖ್ಯೆ BNX067061521924 ಪರಿಶೀಲಿಸಿದ ವೇಳೆ ಅರ್ಜಿಯಲ್ಲಿ ನಮೂದಿಸಿದ್ದ ಹೆಸರು, ವಿಳಾಸ ಹಾಗೂ ಭಾವಚಿತ್ರದಲ್ಲಿ ವ್ಯತ್ಯಾಸ ಕಂಡುಬಂದಿದೆ. ತನಿಖೆಯಲ್ಲಿ ಪಾಸ್ಪೋರ್ಟ್ನಲ್ಲಿ ಬಳಸಿದ್ದ ಭಾವಚಿತ್ರವು ಪ್ರೀತಾ ಡಿ’ಸೋಜಾ ಎಂಬವರದ್ದು ಎಂದು ತಿಳಿದುಬಂದಿದೆ. ಪಾಸ್ಪೋರ್ಟ್ ಸೇವಾ ಪೋರ್ಟಲ್ ದಾಖಲೆಗಳ ಪ್ರಕಾರ, ಅರ್ಜಿಯಲ್ಲಿ “ಯಶೋಧ ಕೇಶವ “ ಎಂದು ಕೈಬರಹದಲ್ಲಿ ನಮೂದಿಸಿ, ಅದರೊಂದಿಗೆ ಪ್ರೀತಾ ಡಿ’ಸೋಜಾ ಅವರ ಭಾವಚಿತ್ರ ಅಳವಡಿಸಲಾಗಿತ್ತು. ಯಶೋಧ ಎಂಬ ಹೆಸರಿನ ಸಹಿಯನ್ನೂ ಪ್ರೀತಾ ಡಿ’ಸೋಜ ಅವರೇ ಮಾಡಿರುವುದು ಪತ್ತೆಯಾಗಿದೆ.
ಇನ್ನಷ್ಟು ಪರಿಶೀಲನೆ ನಡೆಸಿದಾಗ, ಪ್ರೀತಾ ಡಿ’ಸೋಜಾ ಅವರು ಯಶೋಧ ಕೇಶವ ಅವರ ದಾಖಲೆಗಳಲ್ಲಿದ್ದ ವಿಳಾಸವನ್ನು ಬಳಸಿ ತಪ್ಪು ಮಾಹಿತಿ ನೀಡಿ ಅಕ್ರಮವಾಗಿ ಪಾಸ್ಪೋರ್ಟ್ ಪಡೆದು, 2025ರ ಮಾರ್ಚ್ 17ರಂದು ಮುಂಬೈ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಿರುವುದು ತಿಳಿದುಬಂದಿದೆ.
ಅಕ್ರಮಕ್ಕೆ ಉಳ್ಳಾಲ ನಿವಾಸಿ ಪ್ರೇಮ್ ಡಿ’ಸೋಜಾ ಸಹಕಾರ ನೀಡಿದ್ದಾನೆ ಎನ್ನಲಾಗಿದ್ದು, ಪ್ರೀತಾ ಡಿ’ಸೋಜಾ ಅವರನ್ನು ಇಸ್ರೇಲ್ಗೆ ಕಳುಹಿಸುವ ಉದ್ದೇಶದಿಂದ ಯಶೋಧ ಕೇಶವ ಎಂಬವರ ದಾಖಲಾತಿಗಳನ್ನು ಬಳಸಿ ಪಾಸ್ಪೋರ್ಟ್ ಸಿದ್ಧಪಡಿಸಿದ್ದಾನೆ ಎಂದು ಆರೋಪಿಸಲಾಗಿದೆ. ಹಾಗೆಯೇ, ಯಶೋಧ ಕೇಶವ ಅವರು ತಮ್ಮ ದಾಖಲಾತಿಗಳನ್ನು ಪ್ರೀತಾ ಡಿ’ಸೋಜಾ ಅವರಿಗೆ ನೀಡಿ ನಕಲಿ ಪಾಸ್ಪೋರ್ಟ್ ಪಡೆಯಲು ಸಹಕರಿಸಿರುವ ಆರೋಪವೂ ಕೇಳಿಬಂದಿದೆ. ಪ್ರಕರಣದಲ್ಲಿ ಪ್ರೀತಾ ಡಿ’ಸೋಜಾ, ಪ್ರೇಮ್ ಡಿ’ಸೋಜಾ ಹಾಗೂ ಯಶೋಧ ಕೇಶವ ಸೇರಿದಂತೆ ಇತರರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm