ಬ್ರೇಕಿಂಗ್ ನ್ಯೂಸ್
17-05-26 05:49 pm HK News Staffer ಕ್ರೈಂ
ಮಂಗಳೂರು, ಮೇ 17: ಲಿಫ್ಟ್ನಲ್ಲಿ ಸಿಲುಕಿಕೊಂಡಿದ್ದ ಯುವಕನನ್ನು ರಕ್ಷಿಸಲು ಹೋಗಿ ಎಡೆಯಿಂದ ಎಳೆಯಲೆತ್ನಿಸಿದಾಗಲೇ ಏಕಾಏಕಿ ಲಿಫ್ಟ್ ಚಲಿಸಿ, 28 ವರ್ಷದ ಯುವಕ ದಾರುಣವಾಗಿ ಮೃತಪಟ್ಟ ಘಟನೆ ನಗರದ ಕುಂಟಿಕಾನದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ಪೂಂಜಕೆರೆ ನಿವಾಸಿ ನೌಫಾಲ್ ಮೃತ ಯುವಕ. ನೌಫಾಲ್ ಅವಿವಾಹಿತರಾಗಿದ್ದು ಆನ್ಲೈನ್ ಡೆಲಿವರಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ಸಂಜೆ ಕೆಲಸದ ನಿಮಿತ್ತ ಲಿಫ್ಟ್ನಲ್ಲಿ ಸಾಮಗ್ರಿಗಳನ್ನು ತುಂಬಿಕೊಂಡು ಕೆಳ ಮಹಡಿಗೆ ಬರುತ್ತಿದ್ದ ವೇಳೆ, ಲಿಫ್ಟ್ ಏಕಾಏಕಿ ಒಂದನೇ ಮಹಡಿ ಮತ್ತು ನೆಲಮಹಡಿ ನಡುವಿನ ಭಾಗದಲ್ಲಿ ಕೆಟ್ಟು ನಿಂತಿದೆ. ಲಿಫ್ಟ್ನಲ್ಲಿ ನೌಫಾಲ್ ಸಿಲುಕಿರುವ ಮಾಹಿತಿ ತಿಳಿದ ತಕ್ಷಣ ಸಹೋದ್ಯೋಗಿಗಳು ರಕ್ಷಣೆಗೆ ಧಾವಿಸಿದ್ದಾರೆ.
ಲಿಫ್ಟ್ನ ಅರ್ಧ ಭಾಗ ಒಂದನೇ ಮಹಡಿಗೆ ಸಮೀಪದಲ್ಲಿದ್ದ ಕಾರಣ, ಬಾಗಿಲನ್ನು ಬಲವಂತವಾಗಿ ತೆರೆಯಲಾಗಿತ್ತು. ಬಳಿಕ ನೌಫಾಲ್ ಅವರನ್ನು ಮೇಲಕ್ಕೆ ಎಳೆಯಲು ಸಹೋದ್ಯೋಗಿಗಳು ಕೈ ಹಿಡಿದು ರಕ್ಷಿಸಲು ಯತ್ನಿಸುತ್ತಿದ್ದಾಗ, ಏಕಾಏಕಿ ಲಿಫ್ಟ್ ಕೆಳಕ್ಕೆ ಚಲಿಸಿದೆ. ಪರಿಣಾಮ ನೌಫಾಲ್ ಲಿಫ್ಟ್ ಎಡೆಯಲ್ಲಿ ಸಿಲುಕಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
ಭಯಾನಕ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm