ಬ್ರೇಕಿಂಗ್ ನ್ಯೂಸ್
17-05-26 05:51 pm HK News Staffer ಕ್ರೈಂ
ಭೋಪಾಲ್, ಮೇ 17: ತಿರುವನಂತಪುರಂನಿಂದ ರಾಜಧಾನಿ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ರೈಲು ಸಾಗುತ್ತಿದ್ದಾಗ ಭಾನುವಾರ ನಸುಕಿನ 5:15 ರ ವೇಳೆಗೆ ರೈಲು ಸಂಖ್ಯೆ 12431ರ ಬಿ-1 (B-1) ಎಸಿ ಕೋಚ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೈಲು ಚಲಿಸುತ್ತಿದ್ದಾಗ ಬಿ-1 ಬೋಗಿಯಿಂದ ದಟ್ಟವಾದ ಹೊಗೆ ಹಾಗೂ ಬೆಂಕಿ ಬರುತ್ತಿರುವುದನ್ನು ರೈಲಿನ ಗಾರ್ಡ್ ಗಮನಿಸಿದ್ದು, ತಕ್ಷಣವೇ ಲೋಕೋ ಪೈಲಟ್ಗೆ ಮಾಹಿತಿ ರವಾನಿಸಿದ್ದಾರೆ. ತಕ್ಷಣ ರೈಲನ್ನು ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದು ರೈಲ್ವೆ ರಕ್ಷಣಾ ಪಡೆ ಮತ್ತು ರೈಲ್ವೆ ಸಿಬ್ಬಂದಿ, ತುರ್ತು ಕಾರ್ಯಾಚರಣೆ ಮೂಲಕ ಬೋಗಿಯಲ್ಲಿದ್ದ ಎಲ್ಲಾ 68 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಇದೇ ವೇಳೆ ಮುನ್ನೆಚ್ಚರಿಕಾ ಕ್ರಮವಾಗಿ ಓವರ್ ಹೆಡ್ ವಿದ್ಯುತ್ ಸರಬರಾಜನ್ನು ತಕ್ಷಣವೇ ಸ್ಥಗಿತಗೊಳಿಸಿ, ಬೆಂಕಿ ಹತ್ತಿಕೊಂಡಿದ್ದ ಬೋಗಿಗಳನ್ನು ರೈಲಿನ ಉಳಿದ ಭಾಗದಿಂದ ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ. ಪ್ರಾಣಹಾನಿ ತಪ್ಪಿದರೂ, ಪ್ರಯಾಣಿಕರು ತಮ್ಮ ಲಗೇಜ್ಗಳನ್ನು ಬೋಗಿಯಲ್ಲೇ ಬಿಟ್ಟು ಓಡಿ ಬಂದಿದ್ದರಿಂದ ಕೆಲವು ಅತ್ಯಮೂಲ್ಯ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಲ್ಲದೆ ಹಳಿಯ ಪಕ್ಕದಲ್ಲಿದ್ದ ಒಣ ಮರಗಳಿಗೂ ಬೆಂಕಿ ವ್ಯಾಪಿಸಿದ್ದು, ಸ್ಥಳಕ್ಕೆ ಧಾವಿಸಿದ ಮೂರು ಅಗ್ನಿಶಾಮಕ ದಳದ ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿವೆ.
ರೈಲ್ವೆ ತಾಂತ್ರಿಕ ತಂಡದ ಪ್ರಾಥಮಿಕ ತನಿಖೆಯ ಪ್ರಕಾರ, ಬಿ-1 ಎಸಿ ಕೋಚ್ನ ಬ್ಯಾಟರಿ ಬಾಕ್ಸ್ ಅಥವಾ ಎಲೆಕ್ಟ್ರಿಕಲ್ ಕಂಟ್ರೋಲ್ ಪ್ಯಾನೆಲ್ನಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ಅಗ್ನಿ ಅವಘಡಕ್ಕೆ ಪ್ರಮುಖ ಕಾರಣ ಎಂದು ಶಂಕಿಸಲಾಗಿದೆ.
15-05-26 10:30 pm
HK News Desk
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
17-05-26 05:51 pm
HK News Staffer
ಮಂಗಳೂರಿನಲ್ಲಿ ಭೀಕರ ಲಿಫ್ಟ್ ದುರಂತ; ಲಿಫ್ಟ್ ನಲ್ಲಿ...
17-05-26 05:49 pm
Shivanand Neelannavar 4500 Fraud: ಶಿವಂ ಅಸೋಸಿಯ...
16-05-26 10:24 pm
ಎನ್ಸಿಬಿ ಅಧಿಕಾರಿಗಳಿಂದ ಮುಂದ್ರಾ ಬಂದರು ಮೇಲೆ ದಾಳಿ...
16-05-26 07:25 pm
Bharat Bus fire, Mangalore: ಟೈರ್ ಸ್ಫೋಟ; ಹಾಸನದ...
16-05-26 04:46 pm