ಬ್ರೇಕಿಂಗ್ ನ್ಯೂಸ್
17-05-26 05:51 pm HK News Staffer ಕ್ರೈಂ
ಭೋಪಾಲ್, ಮೇ 17: ತಿರುವನಂತಪುರಂನಿಂದ ರಾಜಧಾನಿ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ರೈಲು ಸಾಗುತ್ತಿದ್ದಾಗ ಭಾನುವಾರ ನಸುಕಿನ 5:15 ರ ವೇಳೆಗೆ ರೈಲು ಸಂಖ್ಯೆ 12431ರ ಬಿ-1 (B-1) ಎಸಿ ಕೋಚ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೈಲು ಚಲಿಸುತ್ತಿದ್ದಾಗ ಬಿ-1 ಬೋಗಿಯಿಂದ ದಟ್ಟವಾದ ಹೊಗೆ ಹಾಗೂ ಬೆಂಕಿ ಬರುತ್ತಿರುವುದನ್ನು ರೈಲಿನ ಗಾರ್ಡ್ ಗಮನಿಸಿದ್ದು, ತಕ್ಷಣವೇ ಲೋಕೋ ಪೈಲಟ್ಗೆ ಮಾಹಿತಿ ರವಾನಿಸಿದ್ದಾರೆ. ತಕ್ಷಣ ರೈಲನ್ನು ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದು ರೈಲ್ವೆ ರಕ್ಷಣಾ ಪಡೆ ಮತ್ತು ರೈಲ್ವೆ ಸಿಬ್ಬಂದಿ, ತುರ್ತು ಕಾರ್ಯಾಚರಣೆ ಮೂಲಕ ಬೋಗಿಯಲ್ಲಿದ್ದ ಎಲ್ಲಾ 68 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಇದೇ ವೇಳೆ ಮುನ್ನೆಚ್ಚರಿಕಾ ಕ್ರಮವಾಗಿ ಓವರ್ ಹೆಡ್ ವಿದ್ಯುತ್ ಸರಬರಾಜನ್ನು ತಕ್ಷಣವೇ ಸ್ಥಗಿತಗೊಳಿಸಿ, ಬೆಂಕಿ ಹತ್ತಿಕೊಂಡಿದ್ದ ಬೋಗಿಗಳನ್ನು ರೈಲಿನ ಉಳಿದ ಭಾಗದಿಂದ ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ. ಪ್ರಾಣಹಾನಿ ತಪ್ಪಿದರೂ, ಪ್ರಯಾಣಿಕರು ತಮ್ಮ ಲಗೇಜ್ಗಳನ್ನು ಬೋಗಿಯಲ್ಲೇ ಬಿಟ್ಟು ಓಡಿ ಬಂದಿದ್ದರಿಂದ ಕೆಲವು ಅತ್ಯಮೂಲ್ಯ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಲ್ಲದೆ ಹಳಿಯ ಪಕ್ಕದಲ್ಲಿದ್ದ ಒಣ ಮರಗಳಿಗೂ ಬೆಂಕಿ ವ್ಯಾಪಿಸಿದ್ದು, ಸ್ಥಳಕ್ಕೆ ಧಾವಿಸಿದ ಮೂರು ಅಗ್ನಿಶಾಮಕ ದಳದ ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿವೆ.
ರೈಲ್ವೆ ತಾಂತ್ರಿಕ ತಂಡದ ಪ್ರಾಥಮಿಕ ತನಿಖೆಯ ಪ್ರಕಾರ, ಬಿ-1 ಎಸಿ ಕೋಚ್ನ ಬ್ಯಾಟರಿ ಬಾಕ್ಸ್ ಅಥವಾ ಎಲೆಕ್ಟ್ರಿಕಲ್ ಕಂಟ್ರೋಲ್ ಪ್ಯಾನೆಲ್ನಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ಅಗ್ನಿ ಅವಘಡಕ್ಕೆ ಪ್ರಮುಖ ಕಾರಣ ಎಂದು ಶಂಕಿಸಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm