ಬ್ರೇಕಿಂಗ್ ನ್ಯೂಸ್
17-05-26 05:51 pm HK News Staffer ಕ್ರೈಂ
ಭೋಪಾಲ್, ಮೇ 17: ತಿರುವನಂತಪುರಂನಿಂದ ರಾಜಧಾನಿ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ರೈಲು ಸಾಗುತ್ತಿದ್ದಾಗ ಭಾನುವಾರ ನಸುಕಿನ 5:15 ರ ವೇಳೆಗೆ ರೈಲು ಸಂಖ್ಯೆ 12431ರ ಬಿ-1 (B-1) ಎಸಿ ಕೋಚ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೈಲು ಚಲಿಸುತ್ತಿದ್ದಾಗ ಬಿ-1 ಬೋಗಿಯಿಂದ ದಟ್ಟವಾದ ಹೊಗೆ ಹಾಗೂ ಬೆಂಕಿ ಬರುತ್ತಿರುವುದನ್ನು ರೈಲಿನ ಗಾರ್ಡ್ ಗಮನಿಸಿದ್ದು, ತಕ್ಷಣವೇ ಲೋಕೋ ಪೈಲಟ್ಗೆ ಮಾಹಿತಿ ರವಾನಿಸಿದ್ದಾರೆ. ತಕ್ಷಣ ರೈಲನ್ನು ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದು ರೈಲ್ವೆ ರಕ್ಷಣಾ ಪಡೆ ಮತ್ತು ರೈಲ್ವೆ ಸಿಬ್ಬಂದಿ, ತುರ್ತು ಕಾರ್ಯಾಚರಣೆ ಮೂಲಕ ಬೋಗಿಯಲ್ಲಿದ್ದ ಎಲ್ಲಾ 68 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಇದೇ ವೇಳೆ ಮುನ್ನೆಚ್ಚರಿಕಾ ಕ್ರಮವಾಗಿ ಓವರ್ ಹೆಡ್ ವಿದ್ಯುತ್ ಸರಬರಾಜನ್ನು ತಕ್ಷಣವೇ ಸ್ಥಗಿತಗೊಳಿಸಿ, ಬೆಂಕಿ ಹತ್ತಿಕೊಂಡಿದ್ದ ಬೋಗಿಗಳನ್ನು ರೈಲಿನ ಉಳಿದ ಭಾಗದಿಂದ ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ. ಪ್ರಾಣಹಾನಿ ತಪ್ಪಿದರೂ, ಪ್ರಯಾಣಿಕರು ತಮ್ಮ ಲಗೇಜ್ಗಳನ್ನು ಬೋಗಿಯಲ್ಲೇ ಬಿಟ್ಟು ಓಡಿ ಬಂದಿದ್ದರಿಂದ ಕೆಲವು ಅತ್ಯಮೂಲ್ಯ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಲ್ಲದೆ ಹಳಿಯ ಪಕ್ಕದಲ್ಲಿದ್ದ ಒಣ ಮರಗಳಿಗೂ ಬೆಂಕಿ ವ್ಯಾಪಿಸಿದ್ದು, ಸ್ಥಳಕ್ಕೆ ಧಾವಿಸಿದ ಮೂರು ಅಗ್ನಿಶಾಮಕ ದಳದ ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿವೆ.
ರೈಲ್ವೆ ತಾಂತ್ರಿಕ ತಂಡದ ಪ್ರಾಥಮಿಕ ತನಿಖೆಯ ಪ್ರಕಾರ, ಬಿ-1 ಎಸಿ ಕೋಚ್ನ ಬ್ಯಾಟರಿ ಬಾಕ್ಸ್ ಅಥವಾ ಎಲೆಕ್ಟ್ರಿಕಲ್ ಕಂಟ್ರೋಲ್ ಪ್ಯಾನೆಲ್ನಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ಅಗ್ನಿ ಅವಘಡಕ್ಕೆ ಪ್ರಮುಖ ಕಾರಣ ಎಂದು ಶಂಕಿಸಲಾಗಿದೆ.
08-06-26 12:37 pm
HK News Staffer
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
06-06-26 10:42 pm
HK News Desk
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
07-06-26 03:38 pm
Mangalore Correspondent
Apex Capital Fraud Investment, Mangalore: ಬಿಜ...
07-06-26 01:57 pm
ಮುರಿನಕಟ್ಟೆ ಧ್ವಂಸ ಪ್ರಕರಣಕ್ಕೆ ಮತ್ತೆ ಕಾವು ; ಭಟ್ಕ...
05-06-26 01:25 pm
ಪಿನಾಕಿನಿ ಹೊಳೆಯಲ್ಲಿ ಹೆಚ್ಚಾದ ಹೂಳು, ಬದಲಾದ ಹರಿವಿನ...
04-06-26 12:51 pm
ಇನ್ನು ವಿಧಾನಮಂಡಲದಲ್ಲೂ ಡಿಜಿಟಲ್ ಟಚ್ ! 6 ತಿಂಗಳಲ್ಲ...
02-06-26 04:18 pm
08-06-26 03:14 pm
HK News Staffer
ಪಬ್ಜಿ ಚಟಕ್ಕೆ ಬಿದ್ದು ಅಪ್ಪ - ಅಕ್ಕನನ್ನ ಚಟ್ಟಕ್ಕೆ...
08-06-26 02:20 pm
ಹಾಸನದ ಜಿಲ್ಲಾ ನ್ಯಾಯಾಲಯದ ಎದುರೇ ರೌಡಿಶೀಟರ್ ಬರ್ಬರ...
08-06-26 12:33 pm
ಕೋಟೆಕಾರು ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಬಂಧ...
07-06-26 03:08 pm
ಉಡುಪಿಗೆ ತೆರಳುತ್ತಿದ್ದ ಬಸ್ಗೆ ಹುಲಿಕಲ್ ಘಾಟ್ನಲ್...
06-06-26 09:01 pm