ಬ್ರೇಕಿಂಗ್ ನ್ಯೂಸ್
17-05-26 08:14 pm HK News Staffer ಕ್ರೈಂ
ಕುಂದಾಪುರ, ಮೇ 17: ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ಕೊಡಚಾದ್ರಿ ಬೆಟ್ಟಕ್ಕೆ ತೆರಳಿ ಹಿಂತಿರುಗುತ್ತಿದ್ದ ಜೀಪು ಭಾನುವಾರ ಮಧ್ಯಾಹ್ನ ಮೀನು ಸಾಗಾಟದ ಲಾರಿಗೆ ಡಿಕ್ಕಿಯಾಗಿ ಕೇರಳ ಮೂಲದ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದಾರೆ. ಮೂವರು ಮಕ್ಕಳು ಸೇರಿದಂತೆ ಒಟ್ಟು ಎಂಟು ಮಂದಿ ತೀವ್ರ ಗಾಯಗೊಂಡಿದ್ದಾರೆ. ಕೇರಳ ಮೂಲದ ಜ್ಯೋತಿ (35) ಹಾಗೂ ಆರ್ಯ ಅನೂಪ್ (28) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಜೀಪ್ನಲ್ಲಿದ್ದ ಪ್ರವಾಸಿಗರು ಹಾಗೂ ಚಾಲಕ ಸೇರಿದಂತೆ ಎಂಟು ಮಂದಿ ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅಯನ್ (5), ಅವನಿ (8), ಅರ್ಜುನ್ (9), ಮಿನಿ (60), ಅಭಿ (36), ಅನೂಪ್ (37), ಜ್ಯೋತಿಷ್ (43) ಮತ್ತು ಜೀಪು ಚಾಲಕ ದೇವರಾಜ್ ಎಂದು ಗುರುತಿಸಲಾಗಿದೆ. ಇವರೆಲ್ಲರಿಗೂ ಕುಂದಾಪುರ ಹಾಗೂ ಮಣಿಪಾಲದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳೆಲ್ಲ ಕೇರಳ ರಾಜ್ಯದ ಒಂದೇ ಕುಟುಂಬದ ಪ್ರವಾಸಿಗರು ಎಂದು ತಿಳಿದುಬಂದಿದೆ.
ಇವರು ಜೀಪಿನಲ್ಲಿ ಕೊಡಚಾದ್ರಿ ಬೆಟ್ಟ ವೀಕ್ಷಿಸಿ ಕೊಲ್ಲೂರಿನತ್ತ ಮರಳುತ್ತಿದ್ದಾಗ ಕೊಲ್ಲೂರಿನಿಂದ ನಾಗೋಡಿ ಕಡೆಗೆ ಸಾಗುತ್ತಿದ್ದ ಮೀನಿನ ಲಾರಿ ನಡುವೆ ದಳಿ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕೊಲ್ಲೂರು ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm