ಬ್ರೇಕಿಂಗ್ ನ್ಯೂಸ್
18-05-26 12:21 pm HK News Staffer ಕ್ರೈಂ
ಚಿತ್ರದುರ್ಗ, ಮೇ 18: ಸಾರ್ವಜನಿಕರಿಗೆ ರಕ್ಷಣೆ ನೀಡಬೇಕಾದ ಪೊಲೀಸ್ ಇಲಾಖೆಯಲ್ಲೇ ಕೆಲ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳು ಕೇಳಿಬರುತ್ತಿರುವ ನಡುವೆ, ಚಿತ್ರದುರ್ಗದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ದಾವಣಗೆರೆ ಮೂಲದ ಯುವತಿಯೊಬ್ಬರು ಡಿಎಆರ್ ವಿಭಾಗದ ರಿಸರ್ವ್ ಸಬ್ ಇನ್ಸ್ಪೆಕ್ಟರ್ ವರುಣ್ ಕುಮಾರ್ ವಿರುದ್ಧ ಮದುವೆಯ ಭರವಸೆ ನೀಡಿ ಮೋಸ ಮಾಡಿರುವ ಆರೋಪ ಹೊರಿಸಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಯುವತಿಯ ದೂರಿನ ಪ್ರಕಾರ, ಸುಮಾರು ಒಂದು ವರ್ಷದ ಹಿಂದೆ ಇನ್ಸ್ಟಾಗ್ರಾಂ ಮೂಲಕ ಇಬ್ಬರ ನಡುವೆ ಪರಿಚಯ ಆರಂಭವಾಗಿತ್ತು. ಆ ವೇಳೆ ಯುವತಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ವರುಣ್ ಕುಮಾರ್ ಪೊಲೀಸ್ ತರಬೇತಿ ನಿಮಿತ್ತ ಬೆಂಗಳೂರಿನಲ್ಲಿ ಇದ್ದರು. ಸಾಮಾಜಿಕ ಜಾಲತಾಣದಲ್ಲಿ ಆರಂಭವಾದ ಸ್ನೇಹ ಕ್ರಮೇಣ ಪ್ರೀತಿಗೆ ತಿರುಗಿದ್ದು, ಇಬ್ಬರೂ ಪರಸ್ಪರ ಒಪ್ಪಿಗೆಯೊಂದಿಗೆ ಸಂಬಂಧ ಮುಂದುವರಿಸಿದ್ದರು ಎಂದು ಯುವತಿ ಹೇಳಿದ್ದಾರೆ.
ಈ ಸಂಬಂಧದ ಅವಧಿಯಲ್ಲಿ ವರುಣ್ ಕುಮಾರ್ ಮದುವೆಯಾಗುವುದಾಗಿ ನಂಬಿಸಿ ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ. ಬಳಿಕ ಯುವತಿ ಗರ್ಭಿಣಿಯಾಗಿರುವುದು ತಿಳಿದ ನಂತರ ಮದುವೆ ವಿಚಾರದಲ್ಲಿ ಆರೋಪಿ ಹಿಂದೆ ಸರಿದಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದೇ ವೇಳೆ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿ ಮಾತ್ರೆಗಳನ್ನು ನೀಡಲು ಪ್ರಯತ್ನಿಸಿದ್ದಾನೆ ಎಂಬ ಗಂಭೀರ ಆರೋಪವನ್ನೂ ಯುವತಿ ಮಾಡಿದ್ದಾರೆ. ಈ ಘಟನೆಯಿಂದ ಮಾನಸಿಕವಾಗಿ ನೊಂದ ಯುವತಿ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿ ನ್ಯಾಯಕ್ಕಾಗಿ ಹೋರಾಟ ಆರಂಭಿಸಿದ್ದಾರೆ.
ಯುವತಿಯ ದೂರಿನ ಆಧಾರದ ಮೇಲೆ RSI ವರುಣ್ ಕುಮಾರ್ ವಿರುದ್ಧ FIR ದಾಖಲಾಗಿದ್ದು, ಪ್ರಕರಣದ ತನಿಖೆ ಆರಂಭವಾಗಿದೆ. ಜೊತೆಗೆ ಯುವತಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಅವರಿಗೆ ಮನವಿ ಸಲ್ಲಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ಆರೋಪಿ ವರುಣ್ ಕುಮಾರ್ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಪ್ರಕರಣ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಮದುವೆಯ ಭರವಸೆ ನೀಡಿ ಮಹಿಳೆಯ ಭಾವನೆ ಮತ್ತು ನಂಬಿಕೆಯನ್ನು ದುರುಪಯೋಗಪಡಿಸಿಕೊಳ್ಳುವುದು ಕಾನೂನು ಪ್ರಕಾರ ಗಂಭೀರ ಅಪರಾಧವಾಗಿದ್ದು, ಇದೀಗ ಪ್ರಕರಣದ ತನಿಖೆಯತ್ತ ಸಾರ್ವಜನಿಕರ ಗಮನ ನೆಟ್ಟಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಆರಂಭವಾಗುವ ಸಂಬಂಧಗಳಲ್ಲಿ ಎಚ್ಚರಿಕೆ ಅತ್ಯಗತ್ಯ. ಮದುವೆಯ ಭರವಸೆ ನೀಡಿ ಭಾವನಾತ್ಮಕ ಅಥವಾ ದೈಹಿಕ ದುರುಪಯೋಗ ಮಾಡುವುದು ಕಾನೂನುಬದ್ಧ ಅಪರಾಧ. ಯಾವುದೇ ಅನ್ಯಾಯ ನಡೆದರೆ ಧೈರ್ಯವಾಗಿ ಕಾನೂನು ಸಹಾಯ ಪಡೆಯಿರಿ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm