ಬ್ರೇಕಿಂಗ್ ನ್ಯೂಸ್
18-05-26 12:37 pm HK News Staffer ಕ್ರೈಂ
ರಾಯಚೂರು, ಮೇ 18: ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಅಣ್ಣನನ್ನೇ ತಮ್ಮ ಕೊಲೆ ಮಾಡಿರುವ ಹೃದಯ ಕಲುಕುವ ಘಟನೆ ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಬಸವಸಾಗರ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಬಸವರಾಜ (37) ಎಂದು ಗುರುತಿಸಲಾಗಿದ್ದು, ಆರೋಪಿ ಶ್ರೀಧರ್ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಕೊಲೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಮಾಹಿತಿ ನೀಡಿದ್ದು, ಮೃತ ಬಸವರಾಜ ಕುಡಿದು ಮನೆಗೆ ಬಂದು ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ತಮ್ಮ ಶ್ರೀಧರ್, ಅಣ್ಣ ನಿದ್ರೆಗೆ ಜಾರಿದ ಬಳಿಕ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಅಣ್ಣನನ್ನು ಕೊಲೆ ಮಾಡಿದ ಬಳಿಕ, ಘಟನೆ ಆತ್ಮಹತ್ಯೆಯಂತೆ ತೋರಿಸಲು ಶ್ರೀಧರ್ ಕುತಂತ್ರ ರೂಪಿಸಿದ್ದಾನೆ. ಸೀರೆಯನ್ನು ಬಳಸಿಕೊಂಡು ಫ್ಯಾನ್ಗೆ ಅಣ್ಣನ ಹೆಣವನ್ನು ನೇತು ಹಾಕಿ ಅಣ್ಣನೇ ನೇಣು ಹಾಕಿಕೊಂಡಿದ್ದಾನೆ ಎಂಬಂತೆ ಮನೆಯವರಿಗೆ ನಂಬಿಸಲು ಯತ್ನಿಸಿದ್ದಾನೆ. ಇದರ ಜೊತೆಗೆ, ಬಳಿಕ ಬಾಗಿಲಿನ ಚೀಲಕ ಮುರಿದಂತೆ ಮಾಡಿ ಅಣ್ಣನ ಶವವನ್ನು ಕೆಳಗೆ ಇಳಿಸಿದ ತಮ್ಮ ತದನಂತರ ಅಣ್ಣ ಬಸವರಾಜ್ ಜೀವ ಇರಬಹುದು ಎಂದು ತಾಯಿಗೆ ನಂಬಿಸಿ ಖಾಸಗಿ ವಾಹನದಲ್ಲಿ ಶವ ತೆಗೆದುಕೊಂಡು ತಾಲೂಕು ಆಸ್ಪತ್ರೆಗೆ ಹೋಗಿದ್ದಾನೆ.
ತಾಲೂಕು ಆಸ್ಪತ್ರೆಯಲ್ಲಿ ವೈದ್ಯರು ಪರಿಶೀಲನೆ ನಡೆಸಿದಾಗ, ಬಸವರಾಜ್ ಈಗಾಗಲೇ ಮೃತಪಟ್ಟಿರುವುದು ದೃಢಪಟ್ಟಿದೆ. ಇದರಿಂದ ಘಟನೆಗೆ ಹೊಸ ತಿರುವು ಸಿಕ್ಕಿದ್ದು, ಅನುಮಾನಗಳು ಗಟ್ಟಿಯಾದವು. ಇತ್ತ ಬಸವರಾಜ್ ಸಾವಿನ ಕುರಿತು ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಮೃತನ ತಂದೆ ವಾಸುದೇವ್ ದೂರು ನೀಡಿದ್ದಾರೆ. ಮಾಹಿತಿ ದೊರಕುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಪ್ರಕರಣದ ಗಂಭೀರತೆಯನ್ನು ಗಮನಿಸಿದ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm