ಬ್ರೇಕಿಂಗ್ ನ್ಯೂಸ್
18-05-26 04:19 pm HK News Staffer ಕ್ರೈಂ
ಬೆಳಗಾವಿ, ಮೇ 18: ಬೆಳಗಾವಿ ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಿದ್ದು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಸಲ್ಲಿಸಿದ್ದ 150 ಪುಟಗಳ ವರದಿಯನ್ನಾಧರಿಸಿ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಸಿಐಡಿ ಡಿಐಜಿ ಡಾ.ಭೀಮಾಶಂಕರ ಗುಳೇದ ನೇತೃತ್ವದ ಪೊಲೀಸರು ಬೆಳಗಾವಿಗೆ ಆಗಮಿಸಿದ್ದಾರೆ.
ಶನಿವಾರ ರಾತ್ರಿ ಆರೋಪಿ ಶಿವಾನಂದ ನೀಲಣ್ಣವರನನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಉಪ ವಿಭಾಗಾಧಿಕಾರಿ ಶ್ರವಣ ನಾಯಕ 20 ಗಂಟೆ ಕಾಲ ಪರಿಶೀಲನೆ ನಡೆಸಿ, ಸಿದ್ಧಪಡಿಸಿರುವ 150 ಪುಟಗಳ ವರದಿಯೇ ತನಿಖೆಗೆ ಮುಖ್ಯ ಆಧಾರವಾಗಿದೆ. ಸಂಸ್ಥೆ ಆರಂಭದಿಂದ ಈವರೆಗೆ ಸಂಗ್ರಹವಾಗಿರುವ ಠೇವಣಿ, 35 ಸಾವಿರ ಜನರಿಂದ ಜಮೆ ಮಾಡಿಕೊಂಡಿರುವ ಮೊತ್ತ, ಅವರ ಹೂಡಿಕೆಗೆ ಪ್ರತಿಯಾಗಿ ಪ್ರತಿ ತಿಂಗಳು ನೀಡಿರುವ ಬಡ್ಡಿ, ಇದೇ ಹಣದಿಂದ ಸಂಪಾದಿಸಲಾಗಿರುವ ಚರಾಸ್ತಿ ಮತ್ತು ಸ್ಥಿರಾಸ್ತಿ, ಬ್ಯಾಂಕ್ ವಹಿವಾಟು, ವಿವಿಧೆಡೆ ಮಾಡಿರುವ ಹೂಡಿಕೆ, ಸಿಎಸ್ಆರ್ ಅಡಿ ಮಾಡಿರುವ ವೆಚ್ಚಗಳ ಸಮಗ್ರ ಮಾಹಿತಿಯನ್ನು ವರದಿಯಲ್ಲಿ ದಾಖಲಿಸಲಾಗಿದೆ.
ಬಹುಕೋಟಿ ವಂಚನೆ ಪ್ರಕರಣಗಳು ಬೆಳಗಾವಿಗೆ ಹೊಸದೇನಲ್ಲ. 18 ವರ್ಷಗಳ ಹಿಂದೆ ಸಾಯಿ ಮಲ್ಟಿ ಸ್ಕೀಮ್ (ಎಸ್ಎಂಎಸ್) ಹೆಸರಿನಲ್ಲಿ ಸಂಜಯ ಟೆಂಗಿನಕಾಯಿ ಎಂಬಾತ, ಠೇವಣಿ ಹಣಕ್ಕೆ ಮೂರು ವರ್ಷದ ವರೆಗೆ ತಿಂಗಳಿಗೆ ಶೇ.10ರ ಬಡ್ಡಿ ಅಮಿಷ ತೋರಿಸಿ ಹಣ ಹೂಡಿಕೆ ಮಾಡಿಸಿ ಮೋಸ ಮಾಡಿದ್ದ. ಮತ್ತೊಂದು ಪ್ರಕರಣದಲ್ಲಿ ಬೆಳಗಾವಿ, ಚಿಕ್ಕೋಡಿ, ಗೋಕಾಕ, ಬೈಲಹೊಂಗಲ ಭಾಗದಲ್ಲಿ ರೈತರಿಗೆ ಎಮು ಪಕ್ಷಿ ಮಾಂಸ, ಮೊಟ್ಟೆ, ಗರಿಗಳನ್ನು ಹೆಚ್ಚಿನ ಬೆಲೆಗೆ ತೆಗೆದುಕೊಳ್ಳುತ್ತೇವೆ ಎಂದು ನಂಬಿಸಿ, ರೈತರಿಗೆ ಮರಿಗಳನ್ನು ಮಾರಲಾಗಿತ್ತು. ಎಮು ಪಕ್ಷಿ ದೊಡ್ಡದಾಗಿ ಮೊಟ್ಟೆಯಿಡುವ ಹೊತ್ತಿಗೆ, ಮರಿ ಕೊಟ್ಟವರು ನಾಪತ್ತೆಯಾಗಿದ್ದರು.
ಬಹುಕೋಟಿ ವಂಚನೆ ಪ್ರಕರಣ ಅಂತಾರಾಜ್ಯ ವ್ಯಾಪ್ತಿ ಹೊಂದಿದ್ದು 50 ಕೋಟಿಗೂ ಹೆಚ್ಚಿನ ಅವ್ಯವಹಾರ ಆಗಿರುವುದರಿಂದ ಸಿಐಡಿಗೆ ನೀಡಲಾಗಿದೆ. ಈವರೆಗಿನ ತನಿಖಾ ಮಾಹಿತಿ ಹಾಗೂ ಜಪ್ತಿ ಮಾಡಿಕೊಂಡ ದಾಖಲೆಗಳನ್ನು ಸಿಐಡಿಗೆ ಹಸ್ತಾಂತರಿಸಿದ್ದೇವೆ ಎಂದು ಬೆಳಗಾವಿ ಎಸ್ಪಿ ಭೂಷಣ ಬೋರಸೆ ತಿಳಿಸಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm