ಬ್ರೇಕಿಂಗ್ ನ್ಯೂಸ್
18-05-26 04:19 pm HK News Staffer ಕ್ರೈಂ
ಬೆಳಗಾವಿ, ಮೇ 18: ಬೆಳಗಾವಿ ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಿದ್ದು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಸಲ್ಲಿಸಿದ್ದ 150 ಪುಟಗಳ ವರದಿಯನ್ನಾಧರಿಸಿ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಸಿಐಡಿ ಡಿಐಜಿ ಡಾ.ಭೀಮಾಶಂಕರ ಗುಳೇದ ನೇತೃತ್ವದ ಪೊಲೀಸರು ಬೆಳಗಾವಿಗೆ ಆಗಮಿಸಿದ್ದಾರೆ.
ಶನಿವಾರ ರಾತ್ರಿ ಆರೋಪಿ ಶಿವಾನಂದ ನೀಲಣ್ಣವರನನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಉಪ ವಿಭಾಗಾಧಿಕಾರಿ ಶ್ರವಣ ನಾಯಕ 20 ಗಂಟೆ ಕಾಲ ಪರಿಶೀಲನೆ ನಡೆಸಿ, ಸಿದ್ಧಪಡಿಸಿರುವ 150 ಪುಟಗಳ ವರದಿಯೇ ತನಿಖೆಗೆ ಮುಖ್ಯ ಆಧಾರವಾಗಿದೆ. ಸಂಸ್ಥೆ ಆರಂಭದಿಂದ ಈವರೆಗೆ ಸಂಗ್ರಹವಾಗಿರುವ ಠೇವಣಿ, 35 ಸಾವಿರ ಜನರಿಂದ ಜಮೆ ಮಾಡಿಕೊಂಡಿರುವ ಮೊತ್ತ, ಅವರ ಹೂಡಿಕೆಗೆ ಪ್ರತಿಯಾಗಿ ಪ್ರತಿ ತಿಂಗಳು ನೀಡಿರುವ ಬಡ್ಡಿ, ಇದೇ ಹಣದಿಂದ ಸಂಪಾದಿಸಲಾಗಿರುವ ಚರಾಸ್ತಿ ಮತ್ತು ಸ್ಥಿರಾಸ್ತಿ, ಬ್ಯಾಂಕ್ ವಹಿವಾಟು, ವಿವಿಧೆಡೆ ಮಾಡಿರುವ ಹೂಡಿಕೆ, ಸಿಎಸ್ಆರ್ ಅಡಿ ಮಾಡಿರುವ ವೆಚ್ಚಗಳ ಸಮಗ್ರ ಮಾಹಿತಿಯನ್ನು ವರದಿಯಲ್ಲಿ ದಾಖಲಿಸಲಾಗಿದೆ.
ಬಹುಕೋಟಿ ವಂಚನೆ ಪ್ರಕರಣಗಳು ಬೆಳಗಾವಿಗೆ ಹೊಸದೇನಲ್ಲ. 18 ವರ್ಷಗಳ ಹಿಂದೆ ಸಾಯಿ ಮಲ್ಟಿ ಸ್ಕೀಮ್ (ಎಸ್ಎಂಎಸ್) ಹೆಸರಿನಲ್ಲಿ ಸಂಜಯ ಟೆಂಗಿನಕಾಯಿ ಎಂಬಾತ, ಠೇವಣಿ ಹಣಕ್ಕೆ ಮೂರು ವರ್ಷದ ವರೆಗೆ ತಿಂಗಳಿಗೆ ಶೇ.10ರ ಬಡ್ಡಿ ಅಮಿಷ ತೋರಿಸಿ ಹಣ ಹೂಡಿಕೆ ಮಾಡಿಸಿ ಮೋಸ ಮಾಡಿದ್ದ. ಮತ್ತೊಂದು ಪ್ರಕರಣದಲ್ಲಿ ಬೆಳಗಾವಿ, ಚಿಕ್ಕೋಡಿ, ಗೋಕಾಕ, ಬೈಲಹೊಂಗಲ ಭಾಗದಲ್ಲಿ ರೈತರಿಗೆ ಎಮು ಪಕ್ಷಿ ಮಾಂಸ, ಮೊಟ್ಟೆ, ಗರಿಗಳನ್ನು ಹೆಚ್ಚಿನ ಬೆಲೆಗೆ ತೆಗೆದುಕೊಳ್ಳುತ್ತೇವೆ ಎಂದು ನಂಬಿಸಿ, ರೈತರಿಗೆ ಮರಿಗಳನ್ನು ಮಾರಲಾಗಿತ್ತು. ಎಮು ಪಕ್ಷಿ ದೊಡ್ಡದಾಗಿ ಮೊಟ್ಟೆಯಿಡುವ ಹೊತ್ತಿಗೆ, ಮರಿ ಕೊಟ್ಟವರು ನಾಪತ್ತೆಯಾಗಿದ್ದರು.
ಬಹುಕೋಟಿ ವಂಚನೆ ಪ್ರಕರಣ ಅಂತಾರಾಜ್ಯ ವ್ಯಾಪ್ತಿ ಹೊಂದಿದ್ದು 50 ಕೋಟಿಗೂ ಹೆಚ್ಚಿನ ಅವ್ಯವಹಾರ ಆಗಿರುವುದರಿಂದ ಸಿಐಡಿಗೆ ನೀಡಲಾಗಿದೆ. ಈವರೆಗಿನ ತನಿಖಾ ಮಾಹಿತಿ ಹಾಗೂ ಜಪ್ತಿ ಮಾಡಿಕೊಂಡ ದಾಖಲೆಗಳನ್ನು ಸಿಐಡಿಗೆ ಹಸ್ತಾಂತರಿಸಿದ್ದೇವೆ ಎಂದು ಬೆಳಗಾವಿ ಎಸ್ಪಿ ಭೂಷಣ ಬೋರಸೆ ತಿಳಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm