ಬ್ರೇಕಿಂಗ್ ನ್ಯೂಸ್
18-05-26 06:21 pm HK News Staffer ಕ್ರೈಂ
ಮಡಿಕೇರಿ, ಮೇ 18: ಸಾಕಾನೆಗಳ ಕಾದಾಟದ ವೇಳೆ ಪ್ರವಾಸ ಬಂದಿದ್ದ ಮಹಿಳೆಯೊಬ್ಬರು ಅವುಗಳ ನಡುವೆ ಸಿಲುಕಿ ದಾರುಣ ಮೃತಪಟ್ಟ ಘಟನೆ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ದುಬಾರೆ ಆನೆ ಶಿಬಿರದಲ್ಲಿ ನಡೆದಿದೆ. ಎರಡು ಆನೆಗಳ ತಳ್ಳಾಟದ ವೇಳೆ ಅಲ್ಲಿಯೇ ನಿಂತುಕೊಂಡಿದ್ದ ಮಹಿಳೆ ನೆಲಕ್ಕುರುಳಿದ್ದು ಆನೆಯ ಕಾಲಿನಡಿಗೆ ಬಿದ್ದಿದ್ದಾರೆ.
ಗಂಭೀರ ಗಾಯಗೊಂಡಿದ್ದ ಆಕೆಯನ್ನು ಕೂಡಲೇ ಕುಶಾಲನಗರ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರನ್ನು ಚೆನ್ನೈ ಮೂಲದ ಜಿನ್ಶು(33) ಎಂದು ಗುರುತಿಸಲಾಗಿದೆ. ಮಹಿಳೆ ತನ್ನ ಕುಟುಂಬ ಸಮೇತ ನಂಜರಾಯಪಟ್ಟಣದ ದುಬಾರೆ ಆನೆ ಶಿಬಿರಕ್ಕೆ ಪ್ರವಾಸ ಬಂದಿದ್ದರು. ಕಾವೇರಿ ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಆನೆಗಳನ್ನು ಸಾಕುವ ಮಾವುತರು ಕಂಜನ್ ಮತ್ತು ಮಾರ್ತಾಂಡ ಎಂಬ ಎರಡು ಆನೆಗಳನ್ನು ಸ್ನಾನಕ್ಕೆ ಕರೆತಂದಿದ್ದರು. ಈ ವೇಳೆ ಆನೆಗಳ ನಡುವೆ ಕಾದಾಟ ಶುರುವಾಗಿದೆ. ತಳ್ಳಾಟದಲ್ಲಿ ಅಲ್ಲೇ ಇದ್ದ ಪ್ರವಾಸಿ ಮಹಿಳೆಯ ಮೇಲೆ ಮಾರ್ತಾಂಡ ಆನೆ ಬಿದ್ದಿದ್ದು, ನೆಲಕ್ಕೆ ಅಪ್ಪಳಿಸಿದ ಜಿನ್ಶು ಅವರ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.
ಆನೆಗಳ ನಿಯಂತ್ರಣಕ್ಕೆ ಮಾವುತರಿಬ್ಬರು ಸತತ ಪ್ರಯತ್ನ ನಡೆಸಿದರೂ, ಮಗುವನ್ನು ಕೈನಲ್ಲಿ ಹಿಡಿದಿದ್ದ ವ್ಯಕ್ತಿಯೊಬ್ಬರು ಮತ್ತು ಇತರರು ಮಹಿಳೆಯ ರಕ್ಷಣೆಗೆ ಯತ್ನಿಸಿದರೂ ಫಲಕಾರಿಯಾಗಿಲ್ಲ. ಇತರ ಪ್ರವಾಸಿಗರು ಆನೆಗಳ ಕಾದಾಟಕ್ಕೆ ಬೆದರಿ ಓಡಿದ್ದರಿಂದ ಬಚಾವ್ ಆಗಿದ್ದಾರೆ. ಘಟನೆ ಸಂಬಂಧ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm