ಬ್ರೇಕಿಂಗ್ ನ್ಯೂಸ್
19-05-26 05:23 pm HK News Staffer ಕ್ರೈಂ
ಲಕ್ನೋ, ಮೇ 19: ಅಪ್ರಾಪ್ತ ಬಾಲಕನೊಬ್ಬನಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಜಮ್ಮು ಮತ್ತು ಕಾಶ್ಮೀರಕ್ಕೆ ಕರೆದೊಯ್ದಿದ್ದ ಯುವಕನೊಬ್ಬ ಅಲ್ಲಿ ಆತನನ್ನು ಬಲವಂತದಿಂದ ಮುಸ್ಲಿಂ ಆಗಿ ಮತಾಂತರ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ನಡೆದಿದ್ದು ಆತಂಕಗೊಂಡ ಬಾಲಕನ ಪೋಷಕರು ಎಸ್ಪಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ.
ಬಿಜ್ನೋರ್ ನಗರದ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಬಖರಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಬಿಜ್ನೋರ್ ನಿವಾಸಿ ವಿಶಾಲ್ ಎಂಬ ಅಪ್ರಾಪ್ತ ಬಾಲಕನಿಗೆ ಅದೇ ಭಾಗದ ವಸೀಮ್ ಎಂಬ ಯುವಕ ಒಳ್ಳೆಯ ಕೆಲಸ ಕೊಡಿಸುವುದಾಗಿ ಹೆತ್ತವರಿಗೆ ಹೇಳಿ ಕಾಶ್ಮೀರಕ್ಕೆ ಕರೆದೊಯ್ದಿದ್ದ. ಇದನ್ನು ನಂಬಿದ ಬಾಲಕ ಕಾಶ್ಮೀರಕ್ಕೆ ತೆರಳಿದ್ದು ಅಲ್ಲಿಗೆ ಹೋದ ನಂತರ ಪ್ರಾಣ ಬೆದರಿಕೆ ಹಾಕಿ, ಬಲವಂತದಿಂದ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮತಾಂತರದ ನಂತರ ವಿಶಾಲ್ ಹೆಸರನ್ನು 'ಹಮ್ಮಾ' ಎಂದು ಬದಲಾಯಿಸಲಾಗಿದೆ ಎಂದು ತಿಳಿದುಬಂದಿದೆ.
ಮಗನ ಬಗ್ಗೆ ಮಾಹಿತಿ ಪಡೆಯಲು ಪೋಷಕರು ವಸೀಮ್ನನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ, "ಇನ್ಮುಂದೆ ನಿಮ್ಮ ಮಗನನ್ನು ಮರೆತುಬಿಡಿ' ಎಂದು ಉದ್ಧಟತನದ ಉತ್ತರ ಬಂದಿದೆ ಎಂದು ಪೋಷಕರು ಕಣ್ಣೀರು ಹಾಕಿದ್ದಾರೆ. ಈ ನಡುವೆ, ಬಾಲಕನ ಮತಾಂತರ ಪ್ರಕ್ರಿಯೆಗೆ ಸಂಬಂಧಿಸಿದ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತುಕೊಂಡ ಕುಟುಂಬಸ್ಥರು ಪೊಲೀಸರ ಮೊರೆ ಹೋಗಿದ್ದಾರೆ. ಮಗನನ್ನು ಸುರಕ್ಷಿತವಾಗಿ ಕರೆತರುವಂತೆ ಆಗ್ರಹಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm