ಬ್ರೇಕಿಂಗ್ ನ್ಯೂಸ್
19-05-26 05:55 pm HK News Staffer ಕ್ರೈಂ
ಮಂಡ್ಯ, ಮೇ 19: ತಾಯಿ ಬೈದಿದ್ದಕ್ಕೆ ನೊಂದ ಅಪ್ರಾಪ್ತ ಸೋದರಿಯರಿಬ್ಬರು ಅಮ್ಮನಿಗೆ ಭಾವುಕ ಪತ್ರವೊಂದನ್ನು ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದ್ದು ಹೆತ್ತವರು ಆತಂಕಗೊಂಡು ಪೊಲೀಸ್ ದೂರು ನೀಡಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿಯಲ್ಲಿ ಘಟನೆ ನಡೆದಿದ್ದು ರಾಮಚಂದ್ರ ಎಂಬವರ ಮಕ್ಕಳಾದ ಸುಜಾತಾ(16) ಮತ್ತು ರುಕ್ಮಿಣಿ(14) ಮನೆ ಬಿಟ್ಟು ಹೋದವರು.
ಯಾವುದೋ ವಿಷಯಕ್ಕೆ ಮನೆಯಲ್ಲಿ ತಾಯಿ ಬೈದಿದ್ದು ಮನನೊಂದ ಸಹೋದರಿಯರು, ಮನೆಯನ್ನೇ ಬಿಟ್ಟು ಹೋಗಿದ್ದಾರೆ. ಹೋಗುವ ಮುನ್ನ, "ಅಮ್ಮ-ಅಪ್ಪ ಸ್ಸಾರಿ.. ನಿಮ್ಮ ಕಣ್ಣು ಮುಂದೆ ಸಾಯುವುದಕ್ಕೆ ಆಗಲ್ಲ... ಹೀಗಾಗಿ ನಾವು ದೂರ ಹೋಗಿ ಸಾಯುತ್ತಿದ್ದೇವೆ" ಎಂದು ಆಘಾತಕಾರಿ ಪತ್ರ ಬರೆದಿಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
ಸುಜಾತ ಮತ್ತು ರುಕ್ಮಿಣಿ ಮನೆ ಬಿಟ್ಟು ಹೋಗುವ ಮುನ್ನ ಬರೆದಿಟ್ಟಿರುವ ಪತ್ರ ಪೋಷಕರು ಹಾಗೂ ಗ್ರಾಮಸ್ಥರನ್ನು ಆತಂಕಕ್ಕೆ ಈಡುಮಾಡಿದೆ. ಪತ್ರ ಓದಿದ ಕೂಡಲೇ ಆತಂಕಗೊಂಡ ಪೋಷಕರು, ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ಕಣ್ಣೀರಿಟ್ಟಿದ್ದಾರೆ. ಕೂಡಲೇ ಪೊಲೀಸರು ದೂರು ದಾಖಲಿಸಿ ಮಕ್ಕಳ ಪತ್ತೆಗೆ ಶೋಧ ಕಾರ್ಯ ನಡೆಸಿದ್ದಾರೆ. ಮಕ್ಕಳು ಪ್ರಾಣಕ್ಕೆ ಅಪಾಯ ಮಾಡಿರಬಹುದೇ ಎಂಬ ಆತಂಕದಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ಶಾಲೆಗೆ ಬೇಸಿಗೆ ರಜೆ ಇರುವುದರಿಂದ ಮನೆಯಲ್ಲಿ ಏನೋ ವಿಚಾರಕ್ಕೆ ತಾಯಿ ಬೈದಿದ್ದು ಅದನ್ನೇ ಮುಂದಿಟ್ಟು ಮಕ್ಕಳಿಬ್ಬರು ಮನೆಯಿಂದಲೇ ದೂರವಾಗಿ ಆತಂಕ ಮೂಡಿಸಿದ್ದಾರೆ.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
19-05-26 04:27 pm
HK News Staffer
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
19-05-26 05:57 pm
HK News Staffer
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
19-05-26 05:55 pm
HK News Staffer
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm
Don Vicky Shetty, Threat: ಡಾನ್ ವಿಕ್ಕಿ ಶೆಟ್ಟಿ...
18-05-26 06:49 pm
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm