ಬ್ರೇಕಿಂಗ್ ನ್ಯೂಸ್
22-05-26 09:25 pm HK News Staffer ಕ್ರೈಂ
ಬೆಂಗಳೂರು, ಮೇ 22: ಸ್ನೇಹಿತನ ಮನೆಯಲ್ಲೇ ದರೋಡೆ ಮಾಡಿಸಿದ್ದ ಮೇಸ್ತ್ರಿ ಸೇರಿದಂತೆ ಮೂವರು ಆರೋಪಿಗಳನ್ನು ಚಿಕ್ಕಜಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗುರುಪ್ರಸಾದ್, ಅರ್ಬಾಜ್ ಹಾಗೂ ಜಿಬ್ರಾನ್ ಬಂಧಿತ ಆರೋಪಿಗಳು.
ಚಿಕ್ಕಜಾಲದ ಹುಣಸಮಾರನಹಳ್ಳಿಯಲ್ಲಿರುವ ಕೃಷ್ಣಾಚಾರಿ ಎಂಬುವವರ ಮನೆಗೆ ಏಪ್ರಿಲ್ 18ರಂದು ರಾತ್ರಿ ನುಗ್ಗಿದ್ದ ಅರ್ಬಾಜ್ ಹಾಗೂ ಜಿಬ್ರಾನ್, ಮನೆಯವರಿಗೆ ಚಾಕು ತೋರಿಸಿ 79 ಗ್ರಾಂ ಚಿನ್ನ, 64 ಗ್ರಾಂ ಬೆಳ್ಳಿ ಹಾಗೂ 12 ಲಕ್ಷ ರೂಪಾಯಿ ನಗದು ದೋಚಿ ಪರಾರಿಯಾಗಿದ್ದರು.
ಪೊಲೀಸರ ತನಿಖೆಯಲ್ಲಿ ಈ ದರೋಡೆ ಹಿಂದೆ ಮನೆಯ ಕಾಮಗಾರಿ ನಡೆಸುತ್ತಿದ್ದ ಮೇಸ್ತ್ರಿ ಗುರುಪ್ರಸಾದ್ನ ಕೈವಾಡ ಇರುವುದು ಬಹಿರಂಗವಾಗಿದೆ. ಕೃಷ್ಣಾಚಾರಿ ಅವರ ಪುತ್ರ ಸುದರ್ಶನ್ ಹಾಗೂ ಗುರುಪ್ರಸಾದ್ ಸ್ನೇಹಿತರಾಗಿದ್ದು, ಹೊಸ ಮನೆ ನಿರ್ಮಾಣದ ಕಾಮಗಾರಿಯನ್ನು ಕಡಿಮೆ ಹಣಕ್ಕೆ ಗುರುಪ್ರಸಾದ್ಗೆ ನೀಡಲಾಗಿತ್ತು. ಆದರೆ ಕಾಮಗಾರಿ ಗುಣಮಟ್ಟ ಮತ್ತು ಹಣದ ವಿಚಾರವಾಗಿ ಆಗಾಗ ಜಗಳ, ಅಸಮಾಧಾನ ನಡೆಯುತ್ತಿತ್ತು ಎನ್ನಲಾಗಿದೆ.
ಇದರಿಂದ ಬೇಸತ್ತ ಗುರುಪ್ರಸಾದ್, ತನ್ನ ಬಳಿ ಕೆಲಸ ಮಾಡುತ್ತಿದ್ದ ಅರ್ಬಾಜ್ ಹಾಗೂ ಜಿಬ್ರಾನ್ ಮೂಲಕ ಸ್ನೇಹಿತನ ಮನೆಯಲ್ಲೇ ದರೋಡೆ ನಡೆಸುವ ಸಂಚು ರೂಪಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ದಿನ ರಾತ್ರಿ ಮನೆಗೆ ನುಗ್ಗಿದ ಆರೋಪಿಗಳು ಚಾಕು ತೋರಿಸಿ ಮನೆಯವರನ್ನು ಬೆದರಿಸಿ ಕಬೋರ್ಡ್ ಕೀ ಪಡೆದುಕೊಂಡಿದ್ದರು. ಬಳಿಕ ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿ ಹಾಗೂ ನಗದನ್ನು ಚೀಲದಲ್ಲಿ ತುಂಬಿಕೊಂಡು ಹೋಗಿದ್ದರು.
ಈ ವೇಳೆ “ಎಲ್ಲವನ್ನೂ ದೋಚಿಕೊಂಡು ಹೋದರೆ ನಾವು ಬದುಕೋದು ಹೇಗೆ?” ಎಂದು ಮನೆಯವರು ಕೇಳಿದಾಗ, ಆರೋಪಿಗಳು 50 ಸಾವಿರ ರೂಪಾಯಿ ಇರುವ ಒಂದು ಬಂಡಲ್ ಹಿಂತಿರುಗಿಸಿ, “ಈ ಹಣದಲ್ಲಿ ಬದುಕು ನಡೆಸಿ... ಪೊಲೀಸರಿಗೆ ದೂರು ಕೊಡಬೇಡಿ” ಎಂದು ಬೆದರಿಕೆ ಹಾಕಿ ಪರಾರಿಯಾಗಿದ್ದರು ಎಂದು ಮನೆ ಮಾಲೀಕ ಕೃಷ್ಣಾಚಾರಿ ತಿಳಿಸಿದ್ದಾರೆ.
ದರೋಡೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳಿಗಾಗಿ ಎರಡು ತಿಂಗಳು ನಿರಂತರ ಶೋಧ ನಡೆಸಿದ ಚಿಕ್ಕಜಾಲ ಪೊಲೀಸರು, ಕೊನೆಗೆ ಮೂವರನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ 12 ಲಕ್ಷ ರೂಪಾಯಿ ನಗದು, ಸುಮಾರು 24 ಲಕ್ಷ ಮೌಲ್ಯದ ಚಿನ್ನಾಭರಣ, ಒಂದು ದ್ವಿಚಕ್ರ ವಾಹನ, ಒಂದು ಕಾರು ಹಾಗೂ ಎರಡು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm