ಬ್ರೇಕಿಂಗ್ ನ್ಯೂಸ್
22-05-26 09:25 pm HK News Staffer ಕ್ರೈಂ
ಬೆಂಗಳೂರು, ಮೇ 22: ಸ್ನೇಹಿತನ ಮನೆಯಲ್ಲೇ ದರೋಡೆ ಮಾಡಿಸಿದ್ದ ಮೇಸ್ತ್ರಿ ಸೇರಿದಂತೆ ಮೂವರು ಆರೋಪಿಗಳನ್ನು ಚಿಕ್ಕಜಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗುರುಪ್ರಸಾದ್, ಅರ್ಬಾಜ್ ಹಾಗೂ ಜಿಬ್ರಾನ್ ಬಂಧಿತ ಆರೋಪಿಗಳು.
ಚಿಕ್ಕಜಾಲದ ಹುಣಸಮಾರನಹಳ್ಳಿಯಲ್ಲಿರುವ ಕೃಷ್ಣಾಚಾರಿ ಎಂಬುವವರ ಮನೆಗೆ ಏಪ್ರಿಲ್ 18ರಂದು ರಾತ್ರಿ ನುಗ್ಗಿದ್ದ ಅರ್ಬಾಜ್ ಹಾಗೂ ಜಿಬ್ರಾನ್, ಮನೆಯವರಿಗೆ ಚಾಕು ತೋರಿಸಿ 79 ಗ್ರಾಂ ಚಿನ್ನ, 64 ಗ್ರಾಂ ಬೆಳ್ಳಿ ಹಾಗೂ 12 ಲಕ್ಷ ರೂಪಾಯಿ ನಗದು ದೋಚಿ ಪರಾರಿಯಾಗಿದ್ದರು.
ಪೊಲೀಸರ ತನಿಖೆಯಲ್ಲಿ ಈ ದರೋಡೆ ಹಿಂದೆ ಮನೆಯ ಕಾಮಗಾರಿ ನಡೆಸುತ್ತಿದ್ದ ಮೇಸ್ತ್ರಿ ಗುರುಪ್ರಸಾದ್ನ ಕೈವಾಡ ಇರುವುದು ಬಹಿರಂಗವಾಗಿದೆ. ಕೃಷ್ಣಾಚಾರಿ ಅವರ ಪುತ್ರ ಸುದರ್ಶನ್ ಹಾಗೂ ಗುರುಪ್ರಸಾದ್ ಸ್ನೇಹಿತರಾಗಿದ್ದು, ಹೊಸ ಮನೆ ನಿರ್ಮಾಣದ ಕಾಮಗಾರಿಯನ್ನು ಕಡಿಮೆ ಹಣಕ್ಕೆ ಗುರುಪ್ರಸಾದ್ಗೆ ನೀಡಲಾಗಿತ್ತು. ಆದರೆ ಕಾಮಗಾರಿ ಗುಣಮಟ್ಟ ಮತ್ತು ಹಣದ ವಿಚಾರವಾಗಿ ಆಗಾಗ ಜಗಳ, ಅಸಮಾಧಾನ ನಡೆಯುತ್ತಿತ್ತು ಎನ್ನಲಾಗಿದೆ.
ಇದರಿಂದ ಬೇಸತ್ತ ಗುರುಪ್ರಸಾದ್, ತನ್ನ ಬಳಿ ಕೆಲಸ ಮಾಡುತ್ತಿದ್ದ ಅರ್ಬಾಜ್ ಹಾಗೂ ಜಿಬ್ರಾನ್ ಮೂಲಕ ಸ್ನೇಹಿತನ ಮನೆಯಲ್ಲೇ ದರೋಡೆ ನಡೆಸುವ ಸಂಚು ರೂಪಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ದಿನ ರಾತ್ರಿ ಮನೆಗೆ ನುಗ್ಗಿದ ಆರೋಪಿಗಳು ಚಾಕು ತೋರಿಸಿ ಮನೆಯವರನ್ನು ಬೆದರಿಸಿ ಕಬೋರ್ಡ್ ಕೀ ಪಡೆದುಕೊಂಡಿದ್ದರು. ಬಳಿಕ ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿ ಹಾಗೂ ನಗದನ್ನು ಚೀಲದಲ್ಲಿ ತುಂಬಿಕೊಂಡು ಹೋಗಿದ್ದರು.
ಈ ವೇಳೆ “ಎಲ್ಲವನ್ನೂ ದೋಚಿಕೊಂಡು ಹೋದರೆ ನಾವು ಬದುಕೋದು ಹೇಗೆ?” ಎಂದು ಮನೆಯವರು ಕೇಳಿದಾಗ, ಆರೋಪಿಗಳು 50 ಸಾವಿರ ರೂಪಾಯಿ ಇರುವ ಒಂದು ಬಂಡಲ್ ಹಿಂತಿರುಗಿಸಿ, “ಈ ಹಣದಲ್ಲಿ ಬದುಕು ನಡೆಸಿ... ಪೊಲೀಸರಿಗೆ ದೂರು ಕೊಡಬೇಡಿ” ಎಂದು ಬೆದರಿಕೆ ಹಾಕಿ ಪರಾರಿಯಾಗಿದ್ದರು ಎಂದು ಮನೆ ಮಾಲೀಕ ಕೃಷ್ಣಾಚಾರಿ ತಿಳಿಸಿದ್ದಾರೆ.
ದರೋಡೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳಿಗಾಗಿ ಎರಡು ತಿಂಗಳು ನಿರಂತರ ಶೋಧ ನಡೆಸಿದ ಚಿಕ್ಕಜಾಲ ಪೊಲೀಸರು, ಕೊನೆಗೆ ಮೂವರನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ 12 ಲಕ್ಷ ರೂಪಾಯಿ ನಗದು, ಸುಮಾರು 24 ಲಕ್ಷ ಮೌಲ್ಯದ ಚಿನ್ನಾಭರಣ, ಒಂದು ದ್ವಿಚಕ್ರ ವಾಹನ, ಒಂದು ಕಾರು ಹಾಗೂ ಎರಡು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
22-05-26 09:30 pm
HK News Staffer
ಬಿಜೆಪಿಗಿಂತ ಹೆಚ್ಚು ಜನ ಕಾಕ್ರೋಚ್ ಪಾರ್ಟಿ ಬೆಂಬಲಿಸಿ...
22-05-26 06:01 pm
ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲದಾಗಿದೆ, ಇದೊಂದು...
22-05-26 02:45 pm
ರಾಜ್ಯಾದ್ಯಂತ ವರುಣಾರ್ಭಟ ; ಒಂದೇ ಮಳೆಗೆ ಬೆಚ್ಚಿಬಿದ...
22-05-26 10:45 am
ಸಾಕಾನೆಗಳ ಕಾದಾಟದಲ್ಲಿ ಸಿಲುಕಿ ಮಹಿಳೆ ಸಾವು ; ದುಬಾರ...
19-05-26 11:34 pm
22-05-26 05:57 pm
HK News Staffer
ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ! ತರಗತಿ...
22-05-26 11:53 am
ಜಾಲತಾಣದಲ್ಲಿ ಜೆನ್- ಜಿ ಬಿರುಗಾಳಿ ; ಸಿಜೆಐ ವಿರುದ್ಧ...
21-05-26 02:49 pm
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
22-05-26 09:47 pm
HK News Staffer
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
22-05-26 09:25 pm
HK News Staffer
ಟಿಸಿಎಸ್ ಕಂಪನಿ ಜಿಹಾದ್ ಪ್ರಕರಣ ; ಪ್ರಮುಖ ಆರೋಪಿ ನಿ...
22-05-26 09:21 pm
ಮಾನಸಿಕ ಖಿನ್ನತೆ ; ಮನೆಯ ಬಾಲ್ಕನಿಯಲ್ಲೇ ತಲೆಗೆ ಶೂಟ್...
22-05-26 07:18 pm
ಗಿರವಿ ಚಿನ್ನ ಕರಗಿಸಿ ಕೋಟ್ಯಂತರ ರೂ. ಲೂಟಿ, ಎಸ್ಡಿಜ...
21-05-26 08:28 pm
ಕುಂಟಿಕಾನ; ಆವರಣ ಗೋಡೆ ಕುಸಿದು ಮಣ್ಣಿನಡಿಗೆ ಬಿದ್ದ ಸ...
21-05-26 07:33 pm