ಬ್ರೇಕಿಂಗ್ ನ್ಯೂಸ್
23-05-26 11:54 am HK News Staffer ಕ್ರೈಂ
ಉಡುಪಿ, ಮೇ 23: ಮಲ್ಪೆ ಕೊಡವೂರು ಸಮೀಪದ ಉದ್ದಿನಹಿತ್ಲು ಪ್ರದೇಶದಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು ಕಾರ್ಮಿಕನೊಬ್ಬ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿರುವ ದುರ್ಘಟನೆ ಶುಕ್ರವಾರ ಸಂಜೆ ನಡೆದಿದೆ.
ಮೃತ ಕಾರ್ಮಿಕನನ್ನು ಕೊಪ್ಪಳ ಮೂಲದ ರಮೇಶ್ (25) ಎಂದು ಗುರುತಿಸಲಾಗಿದೆ.
ಮಧ್ವನಗರ ನಿವಾಸಿ ಚೇತನ್ ಎಂಬವರ ಜಾಗದಲ್ಲಿ ಬಾವಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಾರ್ಕಳ ಸಾಣೂರು ನಿವಾಸಿ ಪ್ರಭಾತ್ ಶೆಟ್ಟಿ ಅವರು ಕೊಪ್ಪಳ ಜಿಲ್ಲೆಯ ಐವರು ಕಾರ್ಮಿಕರನ್ನು ಕೆಲಸಕ್ಕೆ ಕರೆತಂದಿದ್ದರು.
ಶುಕ್ರವಾರ ಸಂಜೆ ಕಾರ್ಮಿಕರು ಬಾವಿಯಿಂದ ಮಣ್ಣು ತೆಗೆಯುವ ಕೆಲಸ ಮಾಡುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಕೆಲಸ ಮುಗಿಯುವ ಹೊತ್ತಿನಲ್ಲಿ ರಮೇಶ್ ಬಾವಿಯೊಳಗೆ ಮಣ್ಣು ತೆಗೆಯುತ್ತಿದ್ದಾಗ ಏಕಾಏಕಿ ಬಾವಿಯ ದಂಡೆಯ ಮಣ್ಣು ಕುಸಿದಿದೆ. ಪರಿಣಾಮ ರಮೇಶ್ ಮೇಲೆ ಭಾರೀ ಪ್ರಮಾಣದ ಮಣ್ಣು ಬಿದ್ದು ಅವರು ಸಂಪೂರ್ಣವಾಗಿ ಮಣ್ಣಿನಡಿ ಸಿಲುಕಿದ್ದಾರೆ. ಆ ವೇಳೆ ಬಾವಿಯೊಳಗಿದ್ದ ಮತ್ತೊಬ್ಬ ಕಾರ್ಮಿಕ ತಕ್ಷಣ ಮೇಲಕ್ಕೆ ಬಂದು ಅಪಾಯದಿಂದ ಪಾರಾಗಿದ್ದಾನೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಲ್ಪೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಆದರೆ ಪದೇಪದೆ ಮಣ್ಣು ಕುಸಿಯುತ್ತಿದ್ದ ಕಾರಣ ಕಾರ್ಯಾಚರಣೆಗೆ ತೀವ್ರ ಅಡ್ಡಿಯಾಯಿತು.
ಸುಮಾರು ಐದು ಅಡಿ ಆಳದಲ್ಲಿ ಸಿಲುಕಿದ್ದ ರಮೇಶ್ ಅವರಿಗಾಗಿ ಸತತ ಏಳು ಗಂಟೆಗಳ ಕಾಲ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಮಧ್ಯರಾತ್ರಿ ವೇಳೆಗೆ ಮೃತದೇಹವನ್ನು ಹೊರತೆಗೆದಿದ್ದಾರೆ.
ಘಟನೆ ಸ್ಥಳದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಪ್ರಕರಣ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ನಿರ್ಮಾಣ ಕಾಮಗಾರಿಗಳ ವೇಳೆ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಂತ ಮುಖ್ಯ. ವಿಶೇಷವಾಗಿ ಬಾವಿ, ಗುಂಡಿ ಹಾಗೂ ಅಗೆತ ಕಾಮಗಾರಿಗಳ ಸಂದರ್ಭ ಭೂ ಕುಸಿತ ತಡೆಗೆ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಇಂತಹ ದುರಂತಗಳನ್ನು ತಪ್ಪಿಸಬಹುದಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm