ಬ್ರೇಕಿಂಗ್ ನ್ಯೂಸ್
23-05-26 11:54 am HK News Staffer ಕ್ರೈಂ
ಉಡುಪಿ, ಮೇ 23: ಮಲ್ಪೆ ಕೊಡವೂರು ಸಮೀಪದ ಉದ್ದಿನಹಿತ್ಲು ಪ್ರದೇಶದಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು ಕಾರ್ಮಿಕನೊಬ್ಬ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿರುವ ದುರ್ಘಟನೆ ಶುಕ್ರವಾರ ಸಂಜೆ ನಡೆದಿದೆ.
ಮೃತ ಕಾರ್ಮಿಕನನ್ನು ಕೊಪ್ಪಳ ಮೂಲದ ರಮೇಶ್ (25) ಎಂದು ಗುರುತಿಸಲಾಗಿದೆ.
ಮಧ್ವನಗರ ನಿವಾಸಿ ಚೇತನ್ ಎಂಬವರ ಜಾಗದಲ್ಲಿ ಬಾವಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಾರ್ಕಳ ಸಾಣೂರು ನಿವಾಸಿ ಪ್ರಭಾತ್ ಶೆಟ್ಟಿ ಅವರು ಕೊಪ್ಪಳ ಜಿಲ್ಲೆಯ ಐವರು ಕಾರ್ಮಿಕರನ್ನು ಕೆಲಸಕ್ಕೆ ಕರೆತಂದಿದ್ದರು.
ಶುಕ್ರವಾರ ಸಂಜೆ ಕಾರ್ಮಿಕರು ಬಾವಿಯಿಂದ ಮಣ್ಣು ತೆಗೆಯುವ ಕೆಲಸ ಮಾಡುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಕೆಲಸ ಮುಗಿಯುವ ಹೊತ್ತಿನಲ್ಲಿ ರಮೇಶ್ ಬಾವಿಯೊಳಗೆ ಮಣ್ಣು ತೆಗೆಯುತ್ತಿದ್ದಾಗ ಏಕಾಏಕಿ ಬಾವಿಯ ದಂಡೆಯ ಮಣ್ಣು ಕುಸಿದಿದೆ. ಪರಿಣಾಮ ರಮೇಶ್ ಮೇಲೆ ಭಾರೀ ಪ್ರಮಾಣದ ಮಣ್ಣು ಬಿದ್ದು ಅವರು ಸಂಪೂರ್ಣವಾಗಿ ಮಣ್ಣಿನಡಿ ಸಿಲುಕಿದ್ದಾರೆ. ಆ ವೇಳೆ ಬಾವಿಯೊಳಗಿದ್ದ ಮತ್ತೊಬ್ಬ ಕಾರ್ಮಿಕ ತಕ್ಷಣ ಮೇಲಕ್ಕೆ ಬಂದು ಅಪಾಯದಿಂದ ಪಾರಾಗಿದ್ದಾನೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಲ್ಪೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಆದರೆ ಪದೇಪದೆ ಮಣ್ಣು ಕುಸಿಯುತ್ತಿದ್ದ ಕಾರಣ ಕಾರ್ಯಾಚರಣೆಗೆ ತೀವ್ರ ಅಡ್ಡಿಯಾಯಿತು.
ಸುಮಾರು ಐದು ಅಡಿ ಆಳದಲ್ಲಿ ಸಿಲುಕಿದ್ದ ರಮೇಶ್ ಅವರಿಗಾಗಿ ಸತತ ಏಳು ಗಂಟೆಗಳ ಕಾಲ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಮಧ್ಯರಾತ್ರಿ ವೇಳೆಗೆ ಮೃತದೇಹವನ್ನು ಹೊರತೆಗೆದಿದ್ದಾರೆ.
ಘಟನೆ ಸ್ಥಳದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಪ್ರಕರಣ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ನಿರ್ಮಾಣ ಕಾಮಗಾರಿಗಳ ವೇಳೆ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಂತ ಮುಖ್ಯ. ವಿಶೇಷವಾಗಿ ಬಾವಿ, ಗುಂಡಿ ಹಾಗೂ ಅಗೆತ ಕಾಮಗಾರಿಗಳ ಸಂದರ್ಭ ಭೂ ಕುಸಿತ ತಡೆಗೆ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಇಂತಹ ದುರಂತಗಳನ್ನು ತಪ್ಪಿಸಬಹುದಾಗಿದೆ.
22-05-26 10:24 pm
HK News Desk
ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ...
22-05-26 09:30 pm
ಬಿಜೆಪಿಗಿಂತ ಹೆಚ್ಚು ಜನ ಕಾಕ್ರೋಚ್ ಪಾರ್ಟಿ ಬೆಂಬಲಿಸಿ...
22-05-26 06:01 pm
ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲದಾಗಿದೆ, ಇದೊಂದು...
22-05-26 02:45 pm
ರಾಜ್ಯಾದ್ಯಂತ ವರುಣಾರ್ಭಟ ; ಒಂದೇ ಮಳೆಗೆ ಬೆಚ್ಚಿಬಿದ...
22-05-26 10:45 am
23-05-26 03:53 pm
HK News Staffer
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ! ತರಗತಿ...
22-05-26 11:53 am
22-05-26 09:47 pm
HK News Staffer
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
23-05-26 11:54 am
HK News Staffer
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am
ಹಣದ ವಿಚಾರದಲ್ಲಿ ತಕರಾರು ; ಸ್ನೇಹಿತನ ಮನೆಯನ್ನೇ ದೋಚ...
22-05-26 09:25 pm
ಟಿಸಿಎಸ್ ಕಂಪನಿ ಜಿಹಾದ್ ಪ್ರಕರಣ ; ಪ್ರಮುಖ ಆರೋಪಿ ನಿ...
22-05-26 09:21 pm
ಮಾನಸಿಕ ಖಿನ್ನತೆ ; ಮನೆಯ ಬಾಲ್ಕನಿಯಲ್ಲೇ ತಲೆಗೆ ಶೂಟ್...
22-05-26 07:18 pm