ಬ್ರೇಕಿಂಗ್ ನ್ಯೂಸ್
24-05-26 02:01 pm HK News Staffer ಕ್ರೈಂ
ಬೆಂಗಳೂರು, ಮೇ 24: ಪೊಲೀಸ್ ಕ್ವಾರ್ಟಸ್ನಲ್ಲೇ ನೇಣು ಬಿಗಿದು ಕಾನ್ಸ್ಪೇಬಲ್ ಒಬ್ಬರ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಕೆ.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ.
ಲಕ್ಷ್ಮೀ ಪ್ರಿಯಾ (26) ಆತ್ಮಹತ್ಯೆಗೆ ಶರಣಾದ ಮಹಿಳೆ. ಮೃತಳ ತಂದೆ ಕುಮಾರ್ ಆರಾಧ್ಯ ಅವರು ನೀಡಿದ ದೂರಿನ ಮೇರೆಗೆ ಹೆಚ್ಎಎಲ್ ಠಾಣೆಯ ಕಾನ್ಸ್ಟೇಬಲ್ ರಾಜೇಶ್ ಹಾಗೂ ತಂದೆ-ತಾಯಿ ಸೇರಿದಂತೆ ನಾಲ್ವರ ವಿರುದ್ಧ ವರದಕ್ಷಿಣೆ ಪ್ರಕರಣ ದಾಖಲಾಗಿದೆ.
ಮೈಸೂರು ಮೂಲದ ಲಕ್ಷ್ಮೀ ಪ್ರಿಯಾಗೆ 2023ರಲ್ಲಿ ಕಾನ್ಸ್ಟೇಬಲ್ ರಾಜೇಶ್ ಜೊತೆ ಮದುವೆಯಾಗಿತ್ತು. ಈ ವೇಳೆ 350 ಗ್ರಾಂ ಚಿನ್ನ, 1 ಕೆ.ಜಿ. ಬೆಳ್ಳಿ ಹಾಗೂ ಗೃಹ ಬಳಕೆ ವಸ್ತುಗಳನ್ನು ನೀಡಲಾಗಿತ್ತು. ದಂಪತಿಗೆ 8 ತಿಂಗಳ ಹೆಣ್ಣು ಮಗುವಿದೆ. ಮದುವೆಯಾದ ಕೆಲ ತಿಂಗಳ ಬಳಿಕ ವರದಕ್ಷಿಣೆ ಹಣಕ್ಕಾಗಿ ಪತಿ ಪೀಡಿಸುತ್ತಿದ್ದ. ಬಾಣಂತನಕ್ಕಾಗಿ ತವರು ಮನೆಗೆ ಬಂದಾಗಲೂ ಮಾನಸಿಕ ಕಿರುಕುಳ ನೀಡಿದ್ದ.
ಇದಲ್ಲದರ, ಬೇರೊಬ್ಬ ಯುವತಿ ಜೊತೆ ಸಂಬಂಧ ಹೊಂದಿದ್ದು ಇದನ್ನು ಮಗಳು ಪ್ರಶ್ನಿಸಿದ್ದಕ್ಕೆ ಕಿರುಕುಳ ನೀಡಲಾರಂಭಿಸಿದ್ದ. ಮೇ 22ರಂದು ತನ್ನ ಮಗಳು ವಾಟ್ಸಾಪ್ನಲ್ಲಿ ಮೊಬೈಲ್ ಪಾಸ್ವರ್ಡ್ ಕಳುಹಿಸಿ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಸಂಬಂಧ ರಾಜೇಶ್ ಹಾಗೂ ಆತನ ಮನೆಯವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮೃತಳ ತಂದೆ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ರಾಜೇಶ್ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm