ಬ್ರೇಕಿಂಗ್ ನ್ಯೂಸ್
25-05-26 04:26 pm HK News Staffer ಕ್ರೈಂ
ಕಾಸರಗೋಡು, ಮೇ 25: ಪೊಲೀಸ್ ಇಲಾಖೆಯ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಒಳಗೊಂಡ ವಾಟ್ಸಾಪ್ ಗ್ರೂಪಿನಲ್ಲಿ ವಿವಾದಾತ್ಮಕ ಸಂದೇಶವನ್ನು ಪೋಸ್ಟ್ ಮಾಡಿದ ಆರೋಪದಲ್ಲಿ ವೆಳ್ಳರಿಕುಂಡು ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಸುಜಿತ್ ಅವರನ್ನು ಅಮಾನತು ಮಾಡಲಾಗಿದೆ.
ರಾಜಕೀಯ ಪ್ರೇರಿತ ಸಂದೇಶದ ಸ್ಕ್ರೀನ್ಶಾಟ್ಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿ ತೀವ್ರ ವಿವಾದಕ್ಕೆ ಕಾರಣವಾಗುತ್ತಲೇ ಕಾಸರಗೋಡು ಜಿಲ್ಲಾ ಪೊಲೀಸ್ ಮುಖ್ಯಸ್ಥ ಬಿ.ವಿ.ವಿಜಯ ಭರತ್ ರೆಡ್ಡಿ ಅವರು ವಿಚಾರಣೆ ಬಾಕಿ ಇರಿಸಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಕಾಸರಗೋಡು ಜಿಲ್ಲಾ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ‘ಪೊಲೀಸ್ ಫ್ರೆಂಡ್ಸ್’ ಎಂಬ ವಾಟ್ಸಾಪ್ ಗ್ರೂಪಿನಲ್ಲಿ ಸಿಪಿಒ ಸುಜಿತ್ ಅವರು ವಿವಾದಾತ್ಮಕ ಸಂದೇಶ ಪೋಸ್ಟ್ ಮಾಡಿದ್ದರು ಎಂದು ಆರೋಪಿಸಲಾಗಿದೆ. ಕಾಂಗ್ರೆಸ್ ಸರ್ಕಾರದ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಉಲ್ಲೇಖಿಸಿ ಪೋಸ್ಟ್ ಹಾಕಿದ್ದು, ಸ್ಥಳೀಯ ಮುಸ್ಲಿಂ ಲೀಗ್ ನಾಯಕ ಕೆ.ಎಂ. ಶಾಜಿ ಅವರನ್ನು ಗುರಿಯಾಗಿಸಿ ‘ಕಮ್ಯುನಲಿಸ್ಟ್ ‘ ಎಂದು ಸಂದೇಶದಲ್ಲಿ ಕರೆಯಲಾಗಿತ್ತು.
ಸರ್ಕಾರದ ಪೊಲೀಸ್ ಇಲಾಖೆಗೆ ಸಂಬಂಧಿಸಿದ ಅಧಿಕೃತ ಗ್ರೂಪ್ನಲ್ಲಿ ಸರ್ಕಾರಿ ನೌಕರನೊಬ್ಬ ಇಂತಹ ರಾಜಕೀಯ ಹೇಳಿಕೆ ನೀಡಿರುವುದನ್ನು ಗ್ರೂಪ್ನಲ್ಲಿದ್ದ ಇತರ ಪೊಲೀಸ್ ಅಧಿಕಾರಿಗಳು ಪ್ರಶ್ನಿಸಿದ್ದರು. ಇದರ ಸಂಭಾಷಣೆಯ ಸ್ಕ್ರೀನ್ಶಾಟ್ಗಳು ಲೀಕ್ ಆಗಿ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ವಿಷಯ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಸ್ಪಿ ಭರತ್ ರೆಡ್ಡಿ ನಿರ್ದೇಶನದ ಮೇರೆಗೆ ಜಿಲ್ಲಾ ಅಪರಾಧ ವಿಭಾಗದ ಡಿವೈಎಸ್ಪಿ ಬಾಲಚಂದ್ರನ್ ಪ್ರಾಥಮಿಕ ತನಿಖೆ ನಡೆಸಿ ವರದಿ ಸಲ್ಲಿಸಿದ್ದರು. ಪೊಲೀಸ್ ಸಿಬ್ಬಂದಿ ಯಾವುದೇ ಕಾರಣಕ್ಕೂ ರಾಜಕೀಯ ಹೇಳಿಕೆಗಳನ್ನು ನೀಡಬಾರದು ಮತ್ತು ಇಲಾಖೆಯ ಶಿಸ್ತು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ. ಅಂದಹಾಗೆ, ಈ ಹಿಂದೆ ಅಳಿಕೋಡ್ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮುಸ್ಲಿಂ ಲೀಗ್ ನಾಯಕ ಕೆ.ಎಂ. ಶಾಜಿ ಅವರು ಸದ್ಯ ಮಲಪ್ಪುರಂ ಜಿಲ್ಲೆಯ ವೆಂಗಾರ ಕ್ಷೇತ್ರದ ಶಾಸಕನಾಗಿದ್ದು ಅವರ ವಿರುದ್ಧ ಪೋಸ್ಟ್ ಹಾಕಿದ್ದು ಪೊಲೀಸ್ ಅಧಿಕಾರಿಗೆ ದುಬಾರಿಯಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm