ಬ್ರೇಕಿಂಗ್ ನ್ಯೂಸ್
25-05-26 09:40 pm HK News Staffer ಕ್ರೈಂ
ಭಟ್ಕಳ, ಮೇ 25: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ‘ಮುರಿನಕಟ್ಟೆ’ ತೆರವು ವಿಚಾರ ಕೋಮು ಸಂಘರ್ಷಕ್ಕೆ ತಿರುಗಿದ್ದು ಉದ್ವಿಗ್ನತೆ ಸೃಷ್ಟಿಸಿದೆ. ಪರಿಸ್ಥಿತಿ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿದೆ. ಭಟ್ಕಳ ನಗರ ಹಾಗೂ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮೇ 25ರಿಂದ 27ರ ವರೆಗೆ ಬಿಎನ್ಎಸ್ಎಸ್ ಕಲಂ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ.
ಭಟ್ಕಳ ನಗರದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ‘ಮುರಿನಕಟ್ಟೆ’ ಸ್ಥಳೀಯರ ಪಾಲಿಗೆ ಧಾರ್ಮಿಕ ಮಹತ್ವ ಹೊಂದಿದ ಸ್ಥಳವಾಗಿದೆ. ನಗರದ ಮಾರಿಕಾಂಬೆ ದೇವಸ್ಥಾನಕ್ಕೆ ಸಂಬಂಧಿಸಿದ ‘ಅಮ್ಮನವರ ಹೊರೆ’ ಇಡುವ ಸ್ಥಳವನ್ನೇ ಸ್ಥಳೀಯವಾಗಿ ‘ಮುರಿನಕಟ್ಟೆ’ ಎಂದು ಕರೆಯಲಾಗುತ್ತದೆ. ಹೆದ್ದಾರಿ ಅಗಲೀಕರಣ ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳ ಹಿಂದೆ ಹಳೆಯ ಕಟ್ಟೆಯನ್ನು ತೆರವುಗೊಳಿಸಲಾಗಿತ್ತು. ಬಳಿಕ ಸಂಚಾರಕ್ಕೆ ತೊಂದರೆಯಾಗದಂತೆ ಸಮೀಪದ ಸರ್ಕಾರಿ ಜಾಗದಲ್ಲಿ ಸ್ಥಳೀಯರು ಹೊಸ ಕಟ್ಟೆ ನಿರ್ಮಿಸಿದ್ದರು. ಆದರೆ, ಈ ಹೊಸ ಕಟ್ಟೆಗೆ ಮತ್ತೊಂದು ಸಮುದಾಯ ಆಕ್ಷೇಪ ವ್ಯಕ್ತಪಡಿಸಿದ್ದು, ಅದನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿತ್ತು.

ಮೇ 24ರಂದು ಹೊಸದಾಗಿ ನಿರ್ಮಿಸಿದ್ದ ಕಟ್ಟೆಯನ್ನು ಕಿಡಿಗೇಡಿಗಳು ಏಕಾಏಕಿ ತೆರವುಗೊಳಿಸಿರುವುದು ಬೆಳಕಿಗೆ ಬಂದ ಬಳಿಕ ಎರಡು ಗುಂಪುಗಳ ನಡುವೆ ಘರ್ಷಣೆ ತಲೆದೋರಿದ್ದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ನಿಯಂತ್ರಣ ತಪ್ಪುವ ಲಕ್ಷಣ ಕಂಡುಬಂದ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಧಾವಿಸಿ ಲಘು ಲಾಠಿ ಪ್ರಹಾರ ನಡೆಸಿ ಗುಂಪುಗಳನ್ನು ಚದುರಿಸಿದ್ದರು. ಪೊಲೀಸರು ಕಟ್ಟೆ ತೆರವು ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ. ಶಾಂತಿ ಕಾಪಾಡುವ ಉದ್ದೇಶದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕ ಸಭೆ, ಗುಂಪು ಸೇರುವುದನ್ನು ನಿಷೇಧಿಸಲು ಸೆಕ್ಷನ್ ವಿಧಿಸಲಾಗಿದೆ.
ಇದಲ್ಲದೆ, ಮೇ 25ರ ಬೆಳಗ್ಗೆ 6 ಗಂಟೆಯಿಂದ ಮೇ 27ರ ಬೆಳಗ್ಗೆ 6 ಗಂಟೆಯ ವರೆಗೆ ಭಟ್ಕಳ ನಗರ ಹಾಗೂ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲಾ ಮದ್ಯದಂಗಡಿ ಮತ್ತು ಬಾರ್ಗಳನ್ನು ಬಂದ್ ಮಾಡಲು ಜಿಲ್ಲಾಡಳಿತ ಆದೇಶಿಸಿದೆ. ಮದ್ಯ ಸಾಗಣೆ ಮತ್ತು ಮಾರಾಟಕ್ಕೂ ಸಂಪೂರ್ಣ ನಿಷೇಧ ಹೇರಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ಪ್ರಚೋದನಕಾರಿ ಸಂದೇಶಗಳನ್ನು ಹಂಚದಂತೆ ಸಾರ್ವಜನಿಕರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಿದೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm