ಬ್ರೇಕಿಂಗ್ ನ್ಯೂಸ್
25-05-26 09:40 pm HK News Staffer ಕ್ರೈಂ
ಭಟ್ಕಳ, ಮೇ 25: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ‘ಮುರಿನಕಟ್ಟೆ’ ತೆರವು ವಿಚಾರ ಕೋಮು ಸಂಘರ್ಷಕ್ಕೆ ತಿರುಗಿದ್ದು ಉದ್ವಿಗ್ನತೆ ಸೃಷ್ಟಿಸಿದೆ. ಪರಿಸ್ಥಿತಿ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿದೆ. ಭಟ್ಕಳ ನಗರ ಹಾಗೂ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮೇ 25ರಿಂದ 27ರ ವರೆಗೆ ಬಿಎನ್ಎಸ್ಎಸ್ ಕಲಂ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ.
ಭಟ್ಕಳ ನಗರದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ‘ಮುರಿನಕಟ್ಟೆ’ ಸ್ಥಳೀಯರ ಪಾಲಿಗೆ ಧಾರ್ಮಿಕ ಮಹತ್ವ ಹೊಂದಿದ ಸ್ಥಳವಾಗಿದೆ. ನಗರದ ಮಾರಿಕಾಂಬೆ ದೇವಸ್ಥಾನಕ್ಕೆ ಸಂಬಂಧಿಸಿದ ‘ಅಮ್ಮನವರ ಹೊರೆ’ ಇಡುವ ಸ್ಥಳವನ್ನೇ ಸ್ಥಳೀಯವಾಗಿ ‘ಮುರಿನಕಟ್ಟೆ’ ಎಂದು ಕರೆಯಲಾಗುತ್ತದೆ. ಹೆದ್ದಾರಿ ಅಗಲೀಕರಣ ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳ ಹಿಂದೆ ಹಳೆಯ ಕಟ್ಟೆಯನ್ನು ತೆರವುಗೊಳಿಸಲಾಗಿತ್ತು. ಬಳಿಕ ಸಂಚಾರಕ್ಕೆ ತೊಂದರೆಯಾಗದಂತೆ ಸಮೀಪದ ಸರ್ಕಾರಿ ಜಾಗದಲ್ಲಿ ಸ್ಥಳೀಯರು ಹೊಸ ಕಟ್ಟೆ ನಿರ್ಮಿಸಿದ್ದರು. ಆದರೆ, ಈ ಹೊಸ ಕಟ್ಟೆಗೆ ಮತ್ತೊಂದು ಸಮುದಾಯ ಆಕ್ಷೇಪ ವ್ಯಕ್ತಪಡಿಸಿದ್ದು, ಅದನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿತ್ತು.

ಮೇ 24ರಂದು ಹೊಸದಾಗಿ ನಿರ್ಮಿಸಿದ್ದ ಕಟ್ಟೆಯನ್ನು ಕಿಡಿಗೇಡಿಗಳು ಏಕಾಏಕಿ ತೆರವುಗೊಳಿಸಿರುವುದು ಬೆಳಕಿಗೆ ಬಂದ ಬಳಿಕ ಎರಡು ಗುಂಪುಗಳ ನಡುವೆ ಘರ್ಷಣೆ ತಲೆದೋರಿದ್ದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ನಿಯಂತ್ರಣ ತಪ್ಪುವ ಲಕ್ಷಣ ಕಂಡುಬಂದ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಧಾವಿಸಿ ಲಘು ಲಾಠಿ ಪ್ರಹಾರ ನಡೆಸಿ ಗುಂಪುಗಳನ್ನು ಚದುರಿಸಿದ್ದರು. ಪೊಲೀಸರು ಕಟ್ಟೆ ತೆರವು ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ. ಶಾಂತಿ ಕಾಪಾಡುವ ಉದ್ದೇಶದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕ ಸಭೆ, ಗುಂಪು ಸೇರುವುದನ್ನು ನಿಷೇಧಿಸಲು ಸೆಕ್ಷನ್ ವಿಧಿಸಲಾಗಿದೆ.
ಇದಲ್ಲದೆ, ಮೇ 25ರ ಬೆಳಗ್ಗೆ 6 ಗಂಟೆಯಿಂದ ಮೇ 27ರ ಬೆಳಗ್ಗೆ 6 ಗಂಟೆಯ ವರೆಗೆ ಭಟ್ಕಳ ನಗರ ಹಾಗೂ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲಾ ಮದ್ಯದಂಗಡಿ ಮತ್ತು ಬಾರ್ಗಳನ್ನು ಬಂದ್ ಮಾಡಲು ಜಿಲ್ಲಾಡಳಿತ ಆದೇಶಿಸಿದೆ. ಮದ್ಯ ಸಾಗಣೆ ಮತ್ತು ಮಾರಾಟಕ್ಕೂ ಸಂಪೂರ್ಣ ನಿಷೇಧ ಹೇರಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ಪ್ರಚೋದನಕಾರಿ ಸಂದೇಶಗಳನ್ನು ಹಂಚದಂತೆ ಸಾರ್ವಜನಿಕರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm