ಬ್ರೇಕಿಂಗ್ ನ್ಯೂಸ್
06-01-21 01:01 pm Headline Karnataka News Network ಕ್ರೈಂ
ಕಾಸರಗೋಡು, ಜ.6 : ತಾಯಿಯೇ ತನ್ನ ಒಂದೂವರೆ ವರ್ಷದ ಮಗುವನ್ನು ಬಾವಿಗೆಸೆದು ಕೊಲೆಗೈದ ಪ್ರಕರಣ ಬದಿಯಡ್ಕ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಬದಿಯಡ್ಕ ಠಾಣೆ ಪೊಲೀಸರು ಪ್ರಕರಣ ಸಂಬಂಧಿಸಿ ಪೆರ್ಲತ್ತಡ್ಕ ನಿವಾಸಿ ಶಾರದಾ (25) ಮಬ ಮಹಿಳೆಯನ್ನು ಬಂಧಿಸಿದ್ದಾರೆ.
ಡಿ.4ರಂದು ಈಕೆಯ ಪುತ್ರ, ಒಂದೂವರೆ ವರ್ಷದ ಸ್ವಸ್ತಿಕ್ ಎಂಬ ಮಗುವಿನ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿತ್ತು. ಪತಿ ಬಾಬು ಕೂಲಿ ಕೆಲಸಕ್ಕೆ ತೆರಳಿದ್ದ ಸಂದರ್ಭ ಘಟನೆ ನಡೆದಿತ್ತು. ಮಗು ನಾಪತ್ತೆಯಾದುದರಿಂದ ಪರಿಸರವಾಸಿಗಳು ಶೋಧ ನಡೆಸಿದಾಗ ಮನೆಯ ಅಲ್ಪ ದೂರದ ಪಾಳು ಬಾವಿಯಲ್ಲಿ ಮೃತದೇಹ ಪತ್ತೆಯಾಗಿತ್ತು.
ಮೃತದೇಹವನ್ನು ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಮಗುವನ್ನು ಬಾವಿಗೆಸೆದು ಕೊಲೆಗೈದಿರುವ ಸಂಶಯ ಬಂದಿತ್ತು. ಈ ವೇಳೆ, ಪೊಲೀಸರು ಪುತ್ತೂರಿನಲ್ಲಿರುವ ತಾಯಿ ಮನೆಗೆ ತೆರಳಿದ್ದ ಶಾರದಾಳನ್ನ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಪೊಲೀಸರ ಪ್ರಶ್ನೆಗಳಿಗೆ ತಡವರಿಸಿದ ಶಾರದಾ ಕೊನೆಗೆ ತಾನೇ ಮಗುವನ್ನು ಬಾವಿಗೆಸೆದು ಕೊಲೆಗೈದಿರುವುದಾಗಿ ಒಪ್ಪಿಕೊಂಡಿದ್ದಾಳೆ. ಕೌಟುಂಬಿಕ ಕಲಹದ ಕಾರಣ ಮಗುವನ್ನೇ ಕೊಲೆ ಮಾಡಿದ್ದಾಳೆ ಎನ್ನುವ ವಿಚಾರ ಬಯಲಿಗೆ ಬಂದಿದೆ.
ಆರಂಭದಲ್ಲಿ ಮಗು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿರುವುದಾಗಿ ಸಂಶಯ ಪಡಲಾಗಿತ್ತು. ಮರಣೋತ್ತರ ಪರೀಕ್ಷೆಯಿಂದ ಕೊಲೆ ಎಂಬ ಬಗ್ಗೆ ಸಂಶಯ ಬಂದಿತ್ತು. ಶಾರದಾ ಮಾನಸಿಕ ಅಸ್ವಸ್ಥಳಂತೆ ವರ್ತಿಸುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಆರೋಪಿಗೆ ಕಾಸರಗೋಡು ನ್ಯಾಯಾಲಯ , 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
connection with the recovery of the body of an 18-month-old baby from a well, Badiadka police have arrested the mother of the baby, who happens to be the accused.
22-04-25 01:00 pm
Bangalore Correspondent
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm