ಬ್ರೇಕಿಂಗ್ ನ್ಯೂಸ್
06-01-21 01:01 pm Headline Karnataka News Network ಕ್ರೈಂ
ಕಾಸರಗೋಡು, ಜ.6 : ತಾಯಿಯೇ ತನ್ನ ಒಂದೂವರೆ ವರ್ಷದ ಮಗುವನ್ನು ಬಾವಿಗೆಸೆದು ಕೊಲೆಗೈದ ಪ್ರಕರಣ ಬದಿಯಡ್ಕ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಬದಿಯಡ್ಕ ಠಾಣೆ ಪೊಲೀಸರು ಪ್ರಕರಣ ಸಂಬಂಧಿಸಿ ಪೆರ್ಲತ್ತಡ್ಕ ನಿವಾಸಿ ಶಾರದಾ (25) ಮಬ ಮಹಿಳೆಯನ್ನು ಬಂಧಿಸಿದ್ದಾರೆ.
ಡಿ.4ರಂದು ಈಕೆಯ ಪುತ್ರ, ಒಂದೂವರೆ ವರ್ಷದ ಸ್ವಸ್ತಿಕ್ ಎಂಬ ಮಗುವಿನ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿತ್ತು. ಪತಿ ಬಾಬು ಕೂಲಿ ಕೆಲಸಕ್ಕೆ ತೆರಳಿದ್ದ ಸಂದರ್ಭ ಘಟನೆ ನಡೆದಿತ್ತು. ಮಗು ನಾಪತ್ತೆಯಾದುದರಿಂದ ಪರಿಸರವಾಸಿಗಳು ಶೋಧ ನಡೆಸಿದಾಗ ಮನೆಯ ಅಲ್ಪ ದೂರದ ಪಾಳು ಬಾವಿಯಲ್ಲಿ ಮೃತದೇಹ ಪತ್ತೆಯಾಗಿತ್ತು.
ಮೃತದೇಹವನ್ನು ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಮಗುವನ್ನು ಬಾವಿಗೆಸೆದು ಕೊಲೆಗೈದಿರುವ ಸಂಶಯ ಬಂದಿತ್ತು. ಈ ವೇಳೆ, ಪೊಲೀಸರು ಪುತ್ತೂರಿನಲ್ಲಿರುವ ತಾಯಿ ಮನೆಗೆ ತೆರಳಿದ್ದ ಶಾರದಾಳನ್ನ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಪೊಲೀಸರ ಪ್ರಶ್ನೆಗಳಿಗೆ ತಡವರಿಸಿದ ಶಾರದಾ ಕೊನೆಗೆ ತಾನೇ ಮಗುವನ್ನು ಬಾವಿಗೆಸೆದು ಕೊಲೆಗೈದಿರುವುದಾಗಿ ಒಪ್ಪಿಕೊಂಡಿದ್ದಾಳೆ. ಕೌಟುಂಬಿಕ ಕಲಹದ ಕಾರಣ ಮಗುವನ್ನೇ ಕೊಲೆ ಮಾಡಿದ್ದಾಳೆ ಎನ್ನುವ ವಿಚಾರ ಬಯಲಿಗೆ ಬಂದಿದೆ.
ಆರಂಭದಲ್ಲಿ ಮಗು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿರುವುದಾಗಿ ಸಂಶಯ ಪಡಲಾಗಿತ್ತು. ಮರಣೋತ್ತರ ಪರೀಕ್ಷೆಯಿಂದ ಕೊಲೆ ಎಂಬ ಬಗ್ಗೆ ಸಂಶಯ ಬಂದಿತ್ತು. ಶಾರದಾ ಮಾನಸಿಕ ಅಸ್ವಸ್ಥಳಂತೆ ವರ್ತಿಸುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಆರೋಪಿಗೆ ಕಾಸರಗೋಡು ನ್ಯಾಯಾಲಯ , 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
connection with the recovery of the body of an 18-month-old baby from a well, Badiadka police have arrested the mother of the baby, who happens to be the accused.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm