ಬ್ರೇಕಿಂಗ್ ನ್ಯೂಸ್
06-01-21 01:01 pm Headline Karnataka News Network ಕ್ರೈಂ
ಕಾಸರಗೋಡು, ಜ.6 : ತಾಯಿಯೇ ತನ್ನ ಒಂದೂವರೆ ವರ್ಷದ ಮಗುವನ್ನು ಬಾವಿಗೆಸೆದು ಕೊಲೆಗೈದ ಪ್ರಕರಣ ಬದಿಯಡ್ಕ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಬದಿಯಡ್ಕ ಠಾಣೆ ಪೊಲೀಸರು ಪ್ರಕರಣ ಸಂಬಂಧಿಸಿ ಪೆರ್ಲತ್ತಡ್ಕ ನಿವಾಸಿ ಶಾರದಾ (25) ಮಬ ಮಹಿಳೆಯನ್ನು ಬಂಧಿಸಿದ್ದಾರೆ.
ಡಿ.4ರಂದು ಈಕೆಯ ಪುತ್ರ, ಒಂದೂವರೆ ವರ್ಷದ ಸ್ವಸ್ತಿಕ್ ಎಂಬ ಮಗುವಿನ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿತ್ತು. ಪತಿ ಬಾಬು ಕೂಲಿ ಕೆಲಸಕ್ಕೆ ತೆರಳಿದ್ದ ಸಂದರ್ಭ ಘಟನೆ ನಡೆದಿತ್ತು. ಮಗು ನಾಪತ್ತೆಯಾದುದರಿಂದ ಪರಿಸರವಾಸಿಗಳು ಶೋಧ ನಡೆಸಿದಾಗ ಮನೆಯ ಅಲ್ಪ ದೂರದ ಪಾಳು ಬಾವಿಯಲ್ಲಿ ಮೃತದೇಹ ಪತ್ತೆಯಾಗಿತ್ತು.
ಮೃತದೇಹವನ್ನು ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಮಗುವನ್ನು ಬಾವಿಗೆಸೆದು ಕೊಲೆಗೈದಿರುವ ಸಂಶಯ ಬಂದಿತ್ತು. ಈ ವೇಳೆ, ಪೊಲೀಸರು ಪುತ್ತೂರಿನಲ್ಲಿರುವ ತಾಯಿ ಮನೆಗೆ ತೆರಳಿದ್ದ ಶಾರದಾಳನ್ನ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಪೊಲೀಸರ ಪ್ರಶ್ನೆಗಳಿಗೆ ತಡವರಿಸಿದ ಶಾರದಾ ಕೊನೆಗೆ ತಾನೇ ಮಗುವನ್ನು ಬಾವಿಗೆಸೆದು ಕೊಲೆಗೈದಿರುವುದಾಗಿ ಒಪ್ಪಿಕೊಂಡಿದ್ದಾಳೆ. ಕೌಟುಂಬಿಕ ಕಲಹದ ಕಾರಣ ಮಗುವನ್ನೇ ಕೊಲೆ ಮಾಡಿದ್ದಾಳೆ ಎನ್ನುವ ವಿಚಾರ ಬಯಲಿಗೆ ಬಂದಿದೆ.
ಆರಂಭದಲ್ಲಿ ಮಗು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿರುವುದಾಗಿ ಸಂಶಯ ಪಡಲಾಗಿತ್ತು. ಮರಣೋತ್ತರ ಪರೀಕ್ಷೆಯಿಂದ ಕೊಲೆ ಎಂಬ ಬಗ್ಗೆ ಸಂಶಯ ಬಂದಿತ್ತು. ಶಾರದಾ ಮಾನಸಿಕ ಅಸ್ವಸ್ಥಳಂತೆ ವರ್ತಿಸುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಆರೋಪಿಗೆ ಕಾಸರಗೋಡು ನ್ಯಾಯಾಲಯ , 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
connection with the recovery of the body of an 18-month-old baby from a well, Badiadka police have arrested the mother of the baby, who happens to be the accused.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm