ಬ್ರೇಕಿಂಗ್ ನ್ಯೂಸ್
06-01-21 01:01 pm Headline Karnataka News Network ಕ್ರೈಂ
ಕಾಸರಗೋಡು, ಜ.6 : ತಾಯಿಯೇ ತನ್ನ ಒಂದೂವರೆ ವರ್ಷದ ಮಗುವನ್ನು ಬಾವಿಗೆಸೆದು ಕೊಲೆಗೈದ ಪ್ರಕರಣ ಬದಿಯಡ್ಕ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಬದಿಯಡ್ಕ ಠಾಣೆ ಪೊಲೀಸರು ಪ್ರಕರಣ ಸಂಬಂಧಿಸಿ ಪೆರ್ಲತ್ತಡ್ಕ ನಿವಾಸಿ ಶಾರದಾ (25) ಮಬ ಮಹಿಳೆಯನ್ನು ಬಂಧಿಸಿದ್ದಾರೆ.
ಡಿ.4ರಂದು ಈಕೆಯ ಪುತ್ರ, ಒಂದೂವರೆ ವರ್ಷದ ಸ್ವಸ್ತಿಕ್ ಎಂಬ ಮಗುವಿನ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿತ್ತು. ಪತಿ ಬಾಬು ಕೂಲಿ ಕೆಲಸಕ್ಕೆ ತೆರಳಿದ್ದ ಸಂದರ್ಭ ಘಟನೆ ನಡೆದಿತ್ತು. ಮಗು ನಾಪತ್ತೆಯಾದುದರಿಂದ ಪರಿಸರವಾಸಿಗಳು ಶೋಧ ನಡೆಸಿದಾಗ ಮನೆಯ ಅಲ್ಪ ದೂರದ ಪಾಳು ಬಾವಿಯಲ್ಲಿ ಮೃತದೇಹ ಪತ್ತೆಯಾಗಿತ್ತು.
ಮೃತದೇಹವನ್ನು ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಮಗುವನ್ನು ಬಾವಿಗೆಸೆದು ಕೊಲೆಗೈದಿರುವ ಸಂಶಯ ಬಂದಿತ್ತು. ಈ ವೇಳೆ, ಪೊಲೀಸರು ಪುತ್ತೂರಿನಲ್ಲಿರುವ ತಾಯಿ ಮನೆಗೆ ತೆರಳಿದ್ದ ಶಾರದಾಳನ್ನ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಪೊಲೀಸರ ಪ್ರಶ್ನೆಗಳಿಗೆ ತಡವರಿಸಿದ ಶಾರದಾ ಕೊನೆಗೆ ತಾನೇ ಮಗುವನ್ನು ಬಾವಿಗೆಸೆದು ಕೊಲೆಗೈದಿರುವುದಾಗಿ ಒಪ್ಪಿಕೊಂಡಿದ್ದಾಳೆ. ಕೌಟುಂಬಿಕ ಕಲಹದ ಕಾರಣ ಮಗುವನ್ನೇ ಕೊಲೆ ಮಾಡಿದ್ದಾಳೆ ಎನ್ನುವ ವಿಚಾರ ಬಯಲಿಗೆ ಬಂದಿದೆ.
ಆರಂಭದಲ್ಲಿ ಮಗು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿರುವುದಾಗಿ ಸಂಶಯ ಪಡಲಾಗಿತ್ತು. ಮರಣೋತ್ತರ ಪರೀಕ್ಷೆಯಿಂದ ಕೊಲೆ ಎಂಬ ಬಗ್ಗೆ ಸಂಶಯ ಬಂದಿತ್ತು. ಶಾರದಾ ಮಾನಸಿಕ ಅಸ್ವಸ್ಥಳಂತೆ ವರ್ತಿಸುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಆರೋಪಿಗೆ ಕಾಸರಗೋಡು ನ್ಯಾಯಾಲಯ , 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
connection with the recovery of the body of an 18-month-old baby from a well, Badiadka police have arrested the mother of the baby, who happens to be the accused.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am