ಬ್ರೇಕಿಂಗ್ ನ್ಯೂಸ್
06-01-21 01:01 pm Headline Karnataka News Network ಕ್ರೈಂ
ಕಾಸರಗೋಡು, ಜ.6 : ತಾಯಿಯೇ ತನ್ನ ಒಂದೂವರೆ ವರ್ಷದ ಮಗುವನ್ನು ಬಾವಿಗೆಸೆದು ಕೊಲೆಗೈದ ಪ್ರಕರಣ ಬದಿಯಡ್ಕ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಬದಿಯಡ್ಕ ಠಾಣೆ ಪೊಲೀಸರು ಪ್ರಕರಣ ಸಂಬಂಧಿಸಿ ಪೆರ್ಲತ್ತಡ್ಕ ನಿವಾಸಿ ಶಾರದಾ (25) ಮಬ ಮಹಿಳೆಯನ್ನು ಬಂಧಿಸಿದ್ದಾರೆ.
ಡಿ.4ರಂದು ಈಕೆಯ ಪುತ್ರ, ಒಂದೂವರೆ ವರ್ಷದ ಸ್ವಸ್ತಿಕ್ ಎಂಬ ಮಗುವಿನ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿತ್ತು. ಪತಿ ಬಾಬು ಕೂಲಿ ಕೆಲಸಕ್ಕೆ ತೆರಳಿದ್ದ ಸಂದರ್ಭ ಘಟನೆ ನಡೆದಿತ್ತು. ಮಗು ನಾಪತ್ತೆಯಾದುದರಿಂದ ಪರಿಸರವಾಸಿಗಳು ಶೋಧ ನಡೆಸಿದಾಗ ಮನೆಯ ಅಲ್ಪ ದೂರದ ಪಾಳು ಬಾವಿಯಲ್ಲಿ ಮೃತದೇಹ ಪತ್ತೆಯಾಗಿತ್ತು.
ಮೃತದೇಹವನ್ನು ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಮಗುವನ್ನು ಬಾವಿಗೆಸೆದು ಕೊಲೆಗೈದಿರುವ ಸಂಶಯ ಬಂದಿತ್ತು. ಈ ವೇಳೆ, ಪೊಲೀಸರು ಪುತ್ತೂರಿನಲ್ಲಿರುವ ತಾಯಿ ಮನೆಗೆ ತೆರಳಿದ್ದ ಶಾರದಾಳನ್ನ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಪೊಲೀಸರ ಪ್ರಶ್ನೆಗಳಿಗೆ ತಡವರಿಸಿದ ಶಾರದಾ ಕೊನೆಗೆ ತಾನೇ ಮಗುವನ್ನು ಬಾವಿಗೆಸೆದು ಕೊಲೆಗೈದಿರುವುದಾಗಿ ಒಪ್ಪಿಕೊಂಡಿದ್ದಾಳೆ. ಕೌಟುಂಬಿಕ ಕಲಹದ ಕಾರಣ ಮಗುವನ್ನೇ ಕೊಲೆ ಮಾಡಿದ್ದಾಳೆ ಎನ್ನುವ ವಿಚಾರ ಬಯಲಿಗೆ ಬಂದಿದೆ.
ಆರಂಭದಲ್ಲಿ ಮಗು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿರುವುದಾಗಿ ಸಂಶಯ ಪಡಲಾಗಿತ್ತು. ಮರಣೋತ್ತರ ಪರೀಕ್ಷೆಯಿಂದ ಕೊಲೆ ಎಂಬ ಬಗ್ಗೆ ಸಂಶಯ ಬಂದಿತ್ತು. ಶಾರದಾ ಮಾನಸಿಕ ಅಸ್ವಸ್ಥಳಂತೆ ವರ್ತಿಸುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಆರೋಪಿಗೆ ಕಾಸರಗೋಡು ನ್ಯಾಯಾಲಯ , 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
connection with the recovery of the body of an 18-month-old baby from a well, Badiadka police have arrested the mother of the baby, who happens to be the accused.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm