ಬ್ರೇಕಿಂಗ್ ನ್ಯೂಸ್
01-06-26 08:16 pm HK News Staffer ಕ್ರೈಂ
ಬೈಂದೂರು, ಜೂನ್ 1: ಪ್ರವಾಸದ ಸಂಭ್ರಮದಲ್ಲಿದ್ದ ಕುಟುಂಬವೊಂದಕ್ಕೆ ಕ್ಷಣಾರ್ಧದಲ್ಲಿ ದುರಂತ ಆವರಿಸಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ಸಮೀಪದ ಶಿರೂರು ಸಂಕದಗುಂಡಿ ಹೊಳೆಯಲ್ಲಿ ನಡೆದಿದೆ. ಹಾವೇರಿ ಮೂಲದ 16 ವರ್ಷದ ವಿದ್ಯಾರ್ಥಿಯೊಬ್ಬ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಮೃತ ಬಾಲಕನನ್ನು ಆಯುಷ್ (16) ಎಂದು ಗುರುತಿಸಲಾಗಿದೆ. ಹಾವೇರಿ ಸಮೀಪದ ಕೃಷಿನಗರದ ಒಂದೇ ಕುಟುಂಬದ ಏಳು ಮಂದಿ ಮುರುಡೇಶ್ವರ ಹಾಗೂ ಕನ್ಯಾಕುಮಾರಿ ಪ್ರವಾಸಕ್ಕೆ ಆಗಮಿಸಿದ್ದರು. ಮುರುಡೇಶ್ವರ ಪ್ರವಾಸ ಮುಗಿಸಿ ಶಿರೂರು ಸಂಕದಗುಂಡಿ ಹೊಳೆಯ ಸಮೀಪ ವಿಶ್ರಾಂತಿಗಾಗಿ ವಾಹನ ನಿಲ್ಲಿಸಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಕುಟುಂಬದ ಸದಸ್ಯರು ಊಟದ ತಯಾರಿಯಲ್ಲಿ ನಿರತರಾಗಿದ್ದಾಗ ಆಯುಷ್ ಹಾಗೂ ಮತ್ತೋರ್ವ ಬಾಲಕ ಸಮೀಪದ ಹೊಳೆಗೆ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ನೀರಿನ ಆಳವಿರುವ ಭಾಗಕ್ಕೆ ಈಜಲು ಹೋದ ಆಯುಷ್ಗೆ ನೀರಿನ ಆಳದ ಅರಿವಾಗದೆ ಮುಳುಗಿದ್ದಾನೆ ಎನ್ನಲಾಗಿದೆ.
ಜೊತೆಗಿದ್ದ ಬಾಲಕ ತಕ್ಷಣ ಕುಟುಂಬ ಸದಸ್ಯರಿಗೆ ವಿಷಯ ತಿಳಿಸಿದ್ದು, ಸ್ಥಳೀಯರು ಹಾಗೂ ಸಂಬಂಧಿಕರು ರಕ್ಷಣೆಗೆ ಮುಂದಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಹೊಳೆಯಲ್ಲಿ ನೀರಿನ ಆಳ ಹೆಚ್ಚಿದ್ದ ಕಾರಣ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಶೋಧ ಕಾರ್ಯ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದರು.
ಮೃತ ಆಯುಷ್ನ ತಂದೆ-ತಾಯಿ ಗುಜರಾತ್ನಲ್ಲಿ ಸಣ್ಣ ವ್ಯಾಪಾರ ನಡೆಸುತ್ತಿದ್ದು, ಆಯುಷ್ ಅಲ್ಲಿಯೇ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ತಾಯಿ, ಸಹೋದರ ಸೇರಿದಂತೆ ಕುಟುಂಬದ ಏಳು ಮಂದಿ ಈ ಪ್ರವಾಸದಲ್ಲಿ ಭಾಗಿಯಾಗಿದ್ದರು.
ಘಟನೆ ಕುರಿತು ಬೈಂದೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm