ಬ್ರೇಕಿಂಗ್ ನ್ಯೂಸ್
01-06-26 08:16 pm HK News Staffer ಕ್ರೈಂ
ಬೈಂದೂರು, ಜೂನ್ 1: ಪ್ರವಾಸದ ಸಂಭ್ರಮದಲ್ಲಿದ್ದ ಕುಟುಂಬವೊಂದಕ್ಕೆ ಕ್ಷಣಾರ್ಧದಲ್ಲಿ ದುರಂತ ಆವರಿಸಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ಸಮೀಪದ ಶಿರೂರು ಸಂಕದಗುಂಡಿ ಹೊಳೆಯಲ್ಲಿ ನಡೆದಿದೆ. ಹಾವೇರಿ ಮೂಲದ 16 ವರ್ಷದ ವಿದ್ಯಾರ್ಥಿಯೊಬ್ಬ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಮೃತ ಬಾಲಕನನ್ನು ಆಯುಷ್ (16) ಎಂದು ಗುರುತಿಸಲಾಗಿದೆ. ಹಾವೇರಿ ಸಮೀಪದ ಕೃಷಿನಗರದ ಒಂದೇ ಕುಟುಂಬದ ಏಳು ಮಂದಿ ಮುರುಡೇಶ್ವರ ಹಾಗೂ ಕನ್ಯಾಕುಮಾರಿ ಪ್ರವಾಸಕ್ಕೆ ಆಗಮಿಸಿದ್ದರು. ಮುರುಡೇಶ್ವರ ಪ್ರವಾಸ ಮುಗಿಸಿ ಶಿರೂರು ಸಂಕದಗುಂಡಿ ಹೊಳೆಯ ಸಮೀಪ ವಿಶ್ರಾಂತಿಗಾಗಿ ವಾಹನ ನಿಲ್ಲಿಸಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಕುಟುಂಬದ ಸದಸ್ಯರು ಊಟದ ತಯಾರಿಯಲ್ಲಿ ನಿರತರಾಗಿದ್ದಾಗ ಆಯುಷ್ ಹಾಗೂ ಮತ್ತೋರ್ವ ಬಾಲಕ ಸಮೀಪದ ಹೊಳೆಗೆ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ನೀರಿನ ಆಳವಿರುವ ಭಾಗಕ್ಕೆ ಈಜಲು ಹೋದ ಆಯುಷ್ಗೆ ನೀರಿನ ಆಳದ ಅರಿವಾಗದೆ ಮುಳುಗಿದ್ದಾನೆ ಎನ್ನಲಾಗಿದೆ.
ಜೊತೆಗಿದ್ದ ಬಾಲಕ ತಕ್ಷಣ ಕುಟುಂಬ ಸದಸ್ಯರಿಗೆ ವಿಷಯ ತಿಳಿಸಿದ್ದು, ಸ್ಥಳೀಯರು ಹಾಗೂ ಸಂಬಂಧಿಕರು ರಕ್ಷಣೆಗೆ ಮುಂದಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಹೊಳೆಯಲ್ಲಿ ನೀರಿನ ಆಳ ಹೆಚ್ಚಿದ್ದ ಕಾರಣ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಶೋಧ ಕಾರ್ಯ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದರು.
ಮೃತ ಆಯುಷ್ನ ತಂದೆ-ತಾಯಿ ಗುಜರಾತ್ನಲ್ಲಿ ಸಣ್ಣ ವ್ಯಾಪಾರ ನಡೆಸುತ್ತಿದ್ದು, ಆಯುಷ್ ಅಲ್ಲಿಯೇ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ತಾಯಿ, ಸಹೋದರ ಸೇರಿದಂತೆ ಕುಟುಂಬದ ಏಳು ಮಂದಿ ಈ ಪ್ರವಾಸದಲ್ಲಿ ಭಾಗಿಯಾಗಿದ್ದರು.
ಘಟನೆ ಕುರಿತು ಬೈಂದೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm