ಬ್ರೇಕಿಂಗ್ ನ್ಯೂಸ್
04-06-26 12:49 pm HK News Staffer ಕ್ರೈಂ
ಉಡುಪಿ, ಜೂನ್ 4: ನೀರು ಸೇದುತ್ತಿದ್ದಾಗ ಆಕಸ್ಮಿಕವಾಗಿ 30 ಅಡಿ ಆಳದ ಬಾವಿಗೆ ಬಿದ್ದ ಪತ್ನಿಯನ್ನು ರಕ್ಷಿಸಲು 65 ವರ್ಷದ ಪತಿಯೇ ಸ್ವತಃ ಬಾವಿಗೆ ಹಾರಿದ್ದಲ್ಲದೆ, ಆಕೆಗೆ ಧೈರ್ಯ ತುಂಬಿ ಜೀವ ರಕ್ಷಿಸಿದ ಹೃದಯಸ್ಪರ್ಶಿ ಘಟನೆ ಇಲ್ಲಿನ ಕೆಮ್ಮಣ್ಣು ಎಂಬಲ್ಲಿ ನಡೆದಿದೆ.
ಕೆಮ್ಮಣ್ಣು ಸರ್ಕಾರಿ ಶಾಲೆ ಬಳಿಯ ನಿವಾಸಿಗಳಾದ ಗೋಪಾಲಕೃಷ್ಣ ಹೆಗ್ಡೆ (65) ಹಾಗೂ ಶ್ಯಾಮಲಾ (60) ಎಂಬವರೇ ಬಾವಿಗೆ ಬಿದ್ದು ಅಪಾಯದಿಂದ ಪಾರಾದ ದಂಪತಿ. ಬುಧವಾರ ಬೆಳಗ್ಗೆ ಶ್ಯಾಮಲಾ ಅವರು ಮನೆಯ ಬಾವಿಯಿಂದ ನೀರು ಸೇದಲು ಹೋಗಿದ್ದರು. ಬಾವಿಯ ಒಂದು ಬದಿಗೆ ಆವರಣ ಗೋಡೆ ಇರಲಿಲ್ಲ ಎನ್ನಲಾಗಿದೆ. ನೀರು ಸೇದುವ ಭರದಲ್ಲಿ ಕಾಲು ಜಾರಿ ಮಹಿಳೆ ಆಕಸ್ಮಿಕವಾಗಿ ಬಾವಿಯೊಳಗೆ ಬಿದ್ದಿದ್ದಾರೆ.
ಬಾವಿಗೆ ಬಿದ್ದು ಅಪಾಯದಲ್ಲಿರುವುದನ್ನು ಗಮನಿಸಿದ ಗೋಪಾಲಕೃಷ್ಣ ಹೆಗ್ಡೆ ಕೂಡಲೇ ಬೇರೇನೂ ಯೋಚಿಸದೆ ಆಕೆಯನ್ನು ರಕ್ಷಿಸಲು ತಾವೂ ಬಾವಿಗೆ ಧುಮುಕಿದ್ದಾರೆ. ಬಾವಿ ಆಳವಾಗಿದ್ದರಿಂದ ಇಬ್ಬರಿಗೂ ಮೇಲೆ ಬರಲು ಸಾಧ್ಯವಾಗದೆ ಒಳಗೇ ಬಂಧಿಯಾಗಿದ್ದಾರೆ. ನೀರು ಹೆಚ್ಚಿಲ್ಲದ ಕಾರಣ ಗೋಪಾಲಕೃಷ್ಣ ಅವರು ಬಾವಿಯ ತಳದಲ್ಲಿ ಪತ್ನಿಗೆ ಧೈರ್ಯ ತುಂಬುತ್ತಾ, ಯಾರಾದ್ರೂ ರಕ್ಷಣೆಗೆ ಬನ್ನಿ ಎಂದು ಕರೆಯತೊಡಗಿದ್ದಾರೆ.
ಇಬ್ಬರೂ ಬಾವಿಯೊಳಗೆ ಬಿದ್ದಿರುವುದನ್ನು ತಿಳಿದ ಮನೆಯಲ್ಲಿದ್ದ ಮತ್ತೊಬ್ಬ ಮಹಿಳೆ, ತಕ್ಷಣವೇ ಸಮೀಪದ ಶಾಲೆಗೆ ಓಡಿಹೋಗಿ ಅಲ್ಲಿನ ಶಿಕ್ಷಕರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಅಲ್ಲಿನ ಸಿಬಂದಿ ಬಂದಿದ್ದು ಅಗ್ನಿಶಾಮಕ ಸಿಬ್ಬಂದಿ ಹಾಗೂ ಆಪದ್ಬಾಂಧವ ಈಶ್ವರ ಮಲ್ಪೆ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡವು ಕಾರ್ಯಾಚರಣೆ ನಡೆಸಿ, ಶ್ಯಾಮಲಾ ಅವರನ್ನು ಹಲಗೆಯ ಸಹಾಯದಿಂದ ಹಾಗೂ ಗೋಪಾಲಕೃಷ್ಣ ಹೆಗ್ಡೆ ಅವರನ್ನು ಕುರ್ಚಿಗೆ ಕಟ್ಟಿ ಮೇಲಕ್ಕೆತ್ತಿದೆ.
ಬಾವಿಯಿಂದ ಮೇಲಕ್ಕೆ ತರುವಷ್ಟರಲ್ಲಿ ದಂಪತಿ ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ತಕ್ಷಣವೇ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೈ ಕಾಲಿಗೆ ಒಂದಷ್ಟು ಪೆಟ್ಟು ಬಿದ್ದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm