ಬ್ರೇಕಿಂಗ್ ನ್ಯೂಸ್
04-06-26 12:49 pm HK News Staffer ಕ್ರೈಂ
ಉಡುಪಿ, ಜೂನ್ 4: ನೀರು ಸೇದುತ್ತಿದ್ದಾಗ ಆಕಸ್ಮಿಕವಾಗಿ 30 ಅಡಿ ಆಳದ ಬಾವಿಗೆ ಬಿದ್ದ ಪತ್ನಿಯನ್ನು ರಕ್ಷಿಸಲು 65 ವರ್ಷದ ಪತಿಯೇ ಸ್ವತಃ ಬಾವಿಗೆ ಹಾರಿದ್ದಲ್ಲದೆ, ಆಕೆಗೆ ಧೈರ್ಯ ತುಂಬಿ ಜೀವ ರಕ್ಷಿಸಿದ ಹೃದಯಸ್ಪರ್ಶಿ ಘಟನೆ ಇಲ್ಲಿನ ಕೆಮ್ಮಣ್ಣು ಎಂಬಲ್ಲಿ ನಡೆದಿದೆ.
ಕೆಮ್ಮಣ್ಣು ಸರ್ಕಾರಿ ಶಾಲೆ ಬಳಿಯ ನಿವಾಸಿಗಳಾದ ಗೋಪಾಲಕೃಷ್ಣ ಹೆಗ್ಡೆ (65) ಹಾಗೂ ಶ್ಯಾಮಲಾ (60) ಎಂಬವರೇ ಬಾವಿಗೆ ಬಿದ್ದು ಅಪಾಯದಿಂದ ಪಾರಾದ ದಂಪತಿ. ಬುಧವಾರ ಬೆಳಗ್ಗೆ ಶ್ಯಾಮಲಾ ಅವರು ಮನೆಯ ಬಾವಿಯಿಂದ ನೀರು ಸೇದಲು ಹೋಗಿದ್ದರು. ಬಾವಿಯ ಒಂದು ಬದಿಗೆ ಆವರಣ ಗೋಡೆ ಇರಲಿಲ್ಲ ಎನ್ನಲಾಗಿದೆ. ನೀರು ಸೇದುವ ಭರದಲ್ಲಿ ಕಾಲು ಜಾರಿ ಮಹಿಳೆ ಆಕಸ್ಮಿಕವಾಗಿ ಬಾವಿಯೊಳಗೆ ಬಿದ್ದಿದ್ದಾರೆ.
ಬಾವಿಗೆ ಬಿದ್ದು ಅಪಾಯದಲ್ಲಿರುವುದನ್ನು ಗಮನಿಸಿದ ಗೋಪಾಲಕೃಷ್ಣ ಹೆಗ್ಡೆ ಕೂಡಲೇ ಬೇರೇನೂ ಯೋಚಿಸದೆ ಆಕೆಯನ್ನು ರಕ್ಷಿಸಲು ತಾವೂ ಬಾವಿಗೆ ಧುಮುಕಿದ್ದಾರೆ. ಬಾವಿ ಆಳವಾಗಿದ್ದರಿಂದ ಇಬ್ಬರಿಗೂ ಮೇಲೆ ಬರಲು ಸಾಧ್ಯವಾಗದೆ ಒಳಗೇ ಬಂಧಿಯಾಗಿದ್ದಾರೆ. ನೀರು ಹೆಚ್ಚಿಲ್ಲದ ಕಾರಣ ಗೋಪಾಲಕೃಷ್ಣ ಅವರು ಬಾವಿಯ ತಳದಲ್ಲಿ ಪತ್ನಿಗೆ ಧೈರ್ಯ ತುಂಬುತ್ತಾ, ಯಾರಾದ್ರೂ ರಕ್ಷಣೆಗೆ ಬನ್ನಿ ಎಂದು ಕರೆಯತೊಡಗಿದ್ದಾರೆ.
ಇಬ್ಬರೂ ಬಾವಿಯೊಳಗೆ ಬಿದ್ದಿರುವುದನ್ನು ತಿಳಿದ ಮನೆಯಲ್ಲಿದ್ದ ಮತ್ತೊಬ್ಬ ಮಹಿಳೆ, ತಕ್ಷಣವೇ ಸಮೀಪದ ಶಾಲೆಗೆ ಓಡಿಹೋಗಿ ಅಲ್ಲಿನ ಶಿಕ್ಷಕರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಅಲ್ಲಿನ ಸಿಬಂದಿ ಬಂದಿದ್ದು ಅಗ್ನಿಶಾಮಕ ಸಿಬ್ಬಂದಿ ಹಾಗೂ ಆಪದ್ಬಾಂಧವ ಈಶ್ವರ ಮಲ್ಪೆ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡವು ಕಾರ್ಯಾಚರಣೆ ನಡೆಸಿ, ಶ್ಯಾಮಲಾ ಅವರನ್ನು ಹಲಗೆಯ ಸಹಾಯದಿಂದ ಹಾಗೂ ಗೋಪಾಲಕೃಷ್ಣ ಹೆಗ್ಡೆ ಅವರನ್ನು ಕುರ್ಚಿಗೆ ಕಟ್ಟಿ ಮೇಲಕ್ಕೆತ್ತಿದೆ.
ಬಾವಿಯಿಂದ ಮೇಲಕ್ಕೆ ತರುವಷ್ಟರಲ್ಲಿ ದಂಪತಿ ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ತಕ್ಷಣವೇ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೈ ಕಾಲಿಗೆ ಒಂದಷ್ಟು ಪೆಟ್ಟು ಬಿದ್ದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm