ಬ್ರೇಕಿಂಗ್ ನ್ಯೂಸ್
05-06-26 09:58 pm HK News Staffer ಕ್ರೈಂ
ಬಂಟ್ವಾಳ, ಜೂನ್ 05: ಮೆಲ್ಕಾರ್ ಫ್ಲೈಓವರ್ ಸಮೀಪ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ಬಂಟ್ವಾಳ ನಗರ ಪೊಲೀಸರು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜೂನ್ 4ರಂದು ಸಂಜೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ನೇತೃತ್ವದ ತಂಡವು ಮೆಲ್ಕಾರ್ ಫ್ಲೈಓವರ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅನುಮಾನಾಸ್ಪದ ಕಾರೊಂದನ್ನು ತಡೆದು ಪರಿಶೀಲನೆ ನಡೆಸಿತು. ಈ ವೇಳೆ ಕಾರಿನೊಳಗೆ ಮಾದಕ ವಸ್ತು ಸೇವನೆಗೆ ಬಳಸುವ ಸಾಧನ ಪತ್ತೆಯಾಗಿದ್ದು, ಪ್ರಯಾಣಿಕರನ್ನು ವಿಚಾರಣೆಗೊಳಪಡಿಸಲಾಯಿತು.
ಮಾರಾಟಕ್ಕೆ ಸಾಗಿಸುತ್ತಿದ್ದ ಡ್ರಗ್ಸ್
ವಿಚಾರಣೆಯಲ್ಲಿ ಆರೋಪಿಗಳು ಬಂಟ್ವಾಳ ಪುದು ನಿವಾಸಿ ಎ. ಜುಬೈರ್ (39), ಸಜಿಪ ಮುನ್ನೂರು ನಿವಾಸಿ ಮೊಹಮ್ಮದ್ ಸವಾದ್ (36) ಹಾಗೂ ಬಿ. ಮೂಡ ನಿವಾಸಿ ಬಿ.ಎಂ. ರಶೀದ್ ಅಲಿಯಾಸ್ ಮಾರಿಮುತ್ತು ಎಂದು ಗುರುತಿಸಲಾಗಿದೆ.
ಆರೋಪಿಗಳು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಎಂಡಿಎಂಎ ಸಾಗಿಸುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
76 ಗ್ರಾಂ ಎಂಡಿಎಂಎ ವಶ
ತಪಾಸಣೆ ವೇಳೆ ಆರೋಪಿಗಳ ಬಳಿಯಿಂದ ಹಾಗೂ ಕಾರಿನೊಳಗಿಂದ ಅಂದಾಜು ₹7,64,000 ಮೌಲ್ಯದ 76 ಗ್ರಾಂ 40 ಮಿಲಿಗ್ರಾಂ ಎಂಡಿಎಂಎ ಮಾದಕ ವಸ್ತು ಪತ್ತೆಯಾಗಿದೆ. ಅಲ್ಲದೆ ಮಾದಕ ವಸ್ತು ಸೇವನೆಗೆ ಬಳಸುವ ಸಾಧನಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇದಕ್ಕೂ ಜೊತೆಗೆ ಆರೋಪಿಗಳ ಬಳಿಯಿದ್ದ ಮೂರು ಮೊಬೈಲ್ ಫೋನ್ಗಳು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ KA-19 MR-1997 ನೋಂದಣಿ ಸಂಖ್ಯೆಯ ಕಾರನ್ನು ಜಪ್ತಿ ಮಾಡಲಾಗಿದೆ.
ಬಂಧಿತ ಆರೋಪಿಗಳ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವಿಕಾರಿ ವಸ್ತುಗಳ ನಿಯಂತ್ರಣ ಕಾಯ್ದೆ (NDPS Act) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಎಂಡಿಎಂಎ ಎಲ್ಲಿಂದ ತರಲಾಗಿತ್ತು, ಯಾರಿಗೆ ಮಾರಾಟ ಮಾಡಲು ಯೋಜನೆ ರೂಪಿಸಲಾಗಿತ್ತು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
05-06-26 07:14 pm
HK News Staffer
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
ಡಿಕೆಶಿ ಸಂಪುಟದಲ್ಲಿ ಮೊದಲ ವಿಕೆಟ್ ಪತನ ; ಖಾತೆ ಹಂಚಿ...
05-06-26 10:29 am
ಖಾತೆ ಹಂಚಿಕೆ ಅಸಮಾಧಾನ ; ತನಗೆ ಸಚಿವ ಸ್ಥಾನವೇ ಬೇಡ !...
04-06-26 07:35 pm
05-06-26 02:34 pm
HK News Staffer
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
ನೀಟ್, ಸಿಬಿಎಸ್ಇ ಪರೀಕ್ಷೆ ಅಕ್ರಮ; ಸಚಿವ ಧರ್ಮೇಂದ್ರ...
02-06-26 10:40 am
ನಟ ವಿಜಯ್ ಹಾದಿಯಲ್ಲೇ ಅಣ್ಣಾಮಲೈ ! ಬಿಜೆಪಿ ಬಿಟ್ಟು ದ...
02-06-26 10:01 am
05-06-26 01:25 pm
HK News Staffer
ಪಿನಾಕಿನಿ ಹೊಳೆಯಲ್ಲಿ ಹೆಚ್ಚಾದ ಹೂಳು, ಬದಲಾದ ಹರಿವಿನ...
04-06-26 12:51 pm
ಇನ್ನು ವಿಧಾನಮಂಡಲದಲ್ಲೂ ಡಿಜಿಟಲ್ ಟಚ್ ! 6 ತಿಂಗಳಲ್ಲ...
02-06-26 04:18 pm
Mithun Rai, Dk Shivakumar CM, Mangalore: ಮುಂದ...
02-06-26 01:18 pm
Ut Khader, Mangalore: ಡಿಸಿಎಂ ಆಗೋದು ಮಾಧ್ಯಮದಲ್ಲ...
02-06-26 01:06 pm
05-06-26 09:58 pm
HK News Staffer
ಕೊಡಗಿನಲ್ಲಿ ಆನೆ ದಾಳಿ; ಕೇಂದ್ರ ಸರ್ಕಾರದ ಐಪಿಎಸ್ ಅಧ...
05-06-26 08:26 pm
Mangalore, Puneeth Kerehalli Threat: ನಿನಗೆ ಹೆ...
04-06-26 09:41 pm
ರಾಷ್ಟ್ರ ಮಟ್ಟದ ಪವರ್ ಲಿಫ್ಟರ್ ಸಂತೋಷ್ ಪೂಜಾರಿ ನಾಲ್...
04-06-26 05:31 pm
ದೆಹಲಿ ಹೋಟೆಲ್ ನಲ್ಲಿ ಭೀಕರ ಅಗ್ನಿ ಅವಘಡ ; 21 ಮಂದಿ...
04-06-26 03:29 pm