ಬ್ರೇಕಿಂಗ್ ನ್ಯೂಸ್
05-06-26 09:58 pm HK News Staffer ಕ್ರೈಂ
ಬಂಟ್ವಾಳ, ಜೂನ್ 05: ಮೆಲ್ಕಾರ್ ಫ್ಲೈಓವರ್ ಸಮೀಪ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ಬಂಟ್ವಾಳ ನಗರ ಪೊಲೀಸರು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜೂನ್ 4ರಂದು ಸಂಜೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ನೇತೃತ್ವದ ತಂಡವು ಮೆಲ್ಕಾರ್ ಫ್ಲೈಓವರ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅನುಮಾನಾಸ್ಪದ ಕಾರೊಂದನ್ನು ತಡೆದು ಪರಿಶೀಲನೆ ನಡೆಸಿತು. ಈ ವೇಳೆ ಕಾರಿನೊಳಗೆ ಮಾದಕ ವಸ್ತು ಸೇವನೆಗೆ ಬಳಸುವ ಸಾಧನ ಪತ್ತೆಯಾಗಿದ್ದು, ಪ್ರಯಾಣಿಕರನ್ನು ವಿಚಾರಣೆಗೊಳಪಡಿಸಲಾಯಿತು.
ಮಾರಾಟಕ್ಕೆ ಸಾಗಿಸುತ್ತಿದ್ದ ಡ್ರಗ್ಸ್
ವಿಚಾರಣೆಯಲ್ಲಿ ಆರೋಪಿಗಳು ಬಂಟ್ವಾಳ ಪುದು ನಿವಾಸಿ ಎ. ಜುಬೈರ್ (39), ಸಜಿಪ ಮುನ್ನೂರು ನಿವಾಸಿ ಮೊಹಮ್ಮದ್ ಸವಾದ್ (36) ಹಾಗೂ ಬಿ. ಮೂಡ ನಿವಾಸಿ ಬಿ.ಎಂ. ರಶೀದ್ ಅಲಿಯಾಸ್ ಮಾರಿಮುತ್ತು ಎಂದು ಗುರುತಿಸಲಾಗಿದೆ.
ಆರೋಪಿಗಳು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಎಂಡಿಎಂಎ ಸಾಗಿಸುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
76 ಗ್ರಾಂ ಎಂಡಿಎಂಎ ವಶ
ತಪಾಸಣೆ ವೇಳೆ ಆರೋಪಿಗಳ ಬಳಿಯಿಂದ ಹಾಗೂ ಕಾರಿನೊಳಗಿಂದ ಅಂದಾಜು ₹7,64,000 ಮೌಲ್ಯದ 76 ಗ್ರಾಂ 40 ಮಿಲಿಗ್ರಾಂ ಎಂಡಿಎಂಎ ಮಾದಕ ವಸ್ತು ಪತ್ತೆಯಾಗಿದೆ. ಅಲ್ಲದೆ ಮಾದಕ ವಸ್ತು ಸೇವನೆಗೆ ಬಳಸುವ ಸಾಧನಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇದಕ್ಕೂ ಜೊತೆಗೆ ಆರೋಪಿಗಳ ಬಳಿಯಿದ್ದ ಮೂರು ಮೊಬೈಲ್ ಫೋನ್ಗಳು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ KA-19 MR-1997 ನೋಂದಣಿ ಸಂಖ್ಯೆಯ ಕಾರನ್ನು ಜಪ್ತಿ ಮಾಡಲಾಗಿದೆ.
ಬಂಧಿತ ಆರೋಪಿಗಳ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವಿಕಾರಿ ವಸ್ತುಗಳ ನಿಯಂತ್ರಣ ಕಾಯ್ದೆ (NDPS Act) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಎಂಡಿಎಂಎ ಎಲ್ಲಿಂದ ತರಲಾಗಿತ್ತು, ಯಾರಿಗೆ ಮಾರಾಟ ಮಾಡಲು ಯೋಜನೆ ರೂಪಿಸಲಾಗಿತ್ತು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm