ಬ್ರೇಕಿಂಗ್ ನ್ಯೂಸ್
06-06-26 05:04 pm HK News Staffer ಕ್ರೈಂ
ಮಂಗಳೂರು, ಜೂನ್ 6: ನ್ಯಾಯಾಲಯದ ಮುಂದೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಾಗೂ ಜಾಮೀನು ರಹಿತ ವಾರಂಟ್ ಎದುರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಕದ್ರಿ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಬಂಧಿತರನ್ನು ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ಕೋಟೆ ಬಡಾವಣೆಯ ನಿವಾಸಿ ಶ್ರೀನಿವಾಸ ಸಿರಯಾನ್ (56) ಹಾಗೂ ಅರಕಲಗೂಡು ತಾಲೂಕಿನ ದೊಡ್ಡಗಾವನಹಳ್ಳಿ ಗ್ರಾಮದ ಉಪೇಂದ್ರ ಡಿ.ಸಿ. ಅಲಿಯಾಸ್ ಅಭಿಷೇಕ್ (28) ಎಂದು ಗುರುತಿಸಲಾಗಿದೆ.
ಶ್ರೀನಿವಾಸ ಸಿರಯಾನ್ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 6ನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಸಿ.ಸಿ. ನಂ.1108/2025 ಪ್ರಕರಣ ವಿಚಾರಣೆಯಲ್ಲಿತ್ತು. ನ್ಯಾಯಾಲಯಕ್ಕೆ ಹಾಜರಾಗದೇ ಇದ್ದ ಹಿನ್ನೆಲೆಯಲ್ಲಿ ಆತನ ವಿರುದ್ಧ ಹಲವು ಬಾರಿ ಜಾಮೀನು ರಹಿತ ವಾರಂಟ್ ಜಾರಿಗೊಳಿಸಲಾಗಿತ್ತು.
ಇನ್ನೋರ್ವ ಆರೋಪಿ ಉಪೇಂದ್ರ ಡಿ.ಸಿ. ಅಲಿಯಾಸ್ ಅಭಿಷೇಕ್ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ 2019ರಲ್ಲಿ ಕಳ್ಳತನ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಸಿ. ನಂ.815/2021ರ ಅಡಿಯಲ್ಲಿ ವಿಚಾರಣೆ ನಡೆಯುತ್ತಿದ್ದು, ನ್ಯಾಯಾಲಯಕ್ಕೆ ಗೈರಾಗಿದ್ದ ಕಾರಣ ಆತನ ವಿರುದ್ಧವೂ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು.
ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆ ;
ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಜೂನ್ 6ರಂದು ಕದ್ರಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಪತ್ತೆ ಹಚ್ಚಿ ಬಂಧಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm