ಬ್ರೇಕಿಂಗ್ ನ್ಯೂಸ್
08-06-26 03:14 pm HK News Staffer ಕ್ರೈಂ
ಬೆಂಗಳೂರು, ಜೂನ್ 8: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 5 ಕೋಟಿಗೂ ಹೆಚ್ಚು ಹಣ ಪಡೆದು ವಂಚಿಸಿದ ಆರೋಪದಲ್ಲಿ ತಂದೆ -ಮಗಳನ್ನು ಬೆಂಗಳೂರು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಆರೋಪಿಗಳು ನಕಲಿ ತರಬೇತಿ ಕೇಂದ್ರಗಳನ್ನು ಸ್ಥಾಪಿಸಿದ್ದರಲ್ಲದೆ, ಟ್ರೇನಿಂಗ್ ಹೆಸರಲ್ಲಿ ಶುಲ್ಕ ಪಡೆಯುತ್ತಿದ್ದರು. ಕೆಲವರಿಗೆ ಆಕಾಂಕ್ಷಿಗಳ ವಿಶ್ವಾಸ ಗಳಿಸಲು ನಾಲ್ಕು ತಿಂಗಳ ಸಂಬಳವನ್ನು ಸಹ ನೀಡಿದ್ದರು ಎಂದು ಆರೋಪಿಸಲಾಗಿದೆ. ಆರೋಪಿಗಳನ್ನು ಎಂಬಿಎ ಪದವೀಧರೆಯಾದ ಶಂಶಾದ್ ಬೇಗಂ ಮತ್ತು ಆಕೆಯ ತಂದೆ ಎಂಎ ಮನ್ಸೂರ್ ಅಹ್ಮದ್ ಎಂದು ಗುರುತಿಸಲಾಗಿದೆ.
ಸಂಗಮೇಶ್ ರಾಚಯ್ಯ ವಸ್ತ್ರದ್ ಎಂಬವರು 2025ರ ನವೆಂಬರ್ 17ರಂದು ಸಿಸಿಬಿಗೆ ದೂರು ದಾಖಲಿಸಿದ್ದು, ತಂದೆ- ಮಗಳು ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ರಾಜಕೀಯ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆಂದು ಹೇಳಿಕೊಂಡಿದ್ದಾರೆ ಎಂದಿದ್ದಾರೆ. ನಿರುದ್ಯೋಗಿ ಮತ್ತು ವಿದ್ಯಾವಂತ ಯುವಕರಿಗೆ ತಮ್ಮ ಪ್ರಭಾವದ ಮೂಲಕ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡುತ್ತಿದ್ದರು. ರೈಲ್ವೇ, ಆದಾಯ ತೆರಿಗೆ, ನೀರಾವರಿ, ಆರೋಗ್ಯ ಮತ್ತು ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನೇಮಕಾತಿಗಳ ಭರವಸೆ ನೀಡಿದ್ದರು. ಆದರೆ, ಹಣ ಸಂಗ್ರಹಿಸಿ ಯುವಕರಿಗೆ ವಂಚನೆ ಮಾಡಿದ್ದಾರೆ. ಉತ್ತರ ಕರ್ನಾಟಕದ 40ಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳಿಂದ ₹5.3 ಕೋಟಿ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. 2023 ಮತ್ತು 2025ರ ನಡುವೆ ನಡೆದಿದೆ ಎನ್ನಲಾದ ಹಣಕಾಸಿನ ವಹಿವಾಟುಗಳನ್ನು ಸಿಸಿಬಿ ಪೊಲೀಸರು ಪರಿಶೀಲಿಸಿದ್ದಾರೆ.
ವಿಜಯಪುರದಲ ಮೂಲದ ಒಬ್ಬರಿಗೆ ಮಾತ್ರ 2.5 ಕೋಟಿಗೂ ಹೆಚ್ಚು ವಂಚನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪಿಗಳು ನಕಲಿ ನೇಮಕಾತಿ ಪತ್ರಗಳನ್ನು ನೀಡಿ, ಬೆಂಗಳೂರು, ಮುಂಬೈ ಮತ್ತು ಕೋಲ್ಕತ್ತಾದಲ್ಲಿ ನಕಲಿ ತರಬೇತಿ ಕೇಂದ್ರಗಳನ್ನು ಸ್ಥಾಪಿಸಿದ್ದರು ಎಂದು ತಿಳಿದುಬಂದಿದೆ. ಪ್ರತಿಯೊಬ್ಬರಿಂದ 5 ಲಕ್ಷದಿಂದ ರೂ. 10 ಲಕ್ಷ ವರೆಗೆ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.
ತನಿಖೆಯ ನಂತರ, ಪೊಲೀಸರು ಜೂನ್ 4 ರಂದು ಇಬ್ಬರನ್ನು ಬಂಧಿಸಿದ್ದು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ವಂಚನೆಯಲ್ಲಿ ಭಾಗಿಯಾಗಿರಬಹುದಾದ ಇತರ ಕುಟುಂಬ ಸದಸ್ಯರು ಮತ್ತು ಸಹಚರರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
19-07-26 09:37 pm
HK News Staffer
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm