ಬ್ರೇಕಿಂಗ್ ನ್ಯೂಸ್
10-06-26 12:09 pm HK News Staffer ಕ್ರೈಂ
ಉಡುಪಿ, ಜೂನ್ 10: ಜಿಲ್ಲೆಯ ಪ್ರಸಿದ್ಧ ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಕ್ಕೆ ಸೈಡ್ ಕೊಡುವ ವಿಚಾರವಾಗಿ ತಡರಾತ್ರಿ ಪ್ರವಾಸಿಗರು ಹಾಗೂ ಸ್ಥಳೀಯ ವ್ಯಕ್ತಿಯ ನಡುವೆ ತೀವ್ರ ವಾಗ್ವಾದ ನಡೆದು ಬಳಿಕ ಮಾರಾಮಾರಿಯಾಗಿ ಮಾರ್ಪಟ್ಟ ಘಟನೆ ನಡೆದಿದೆ.
ಮಾಹಿತಿಯ ಪ್ರಕಾರ, ಆಂಧ್ರಪ್ರದೇಶದ ಹೈದರಾಬಾದ್ ಮೂಲದ ಪ್ರವಾಸಿಗರು ಕುಟುಂಬ ಸಮೇತರಾಗಿ ಶ್ರೀಕೃಷ್ಣ ಮಠಕ್ಕೆ ದರ್ಶನಕ್ಕೆ ಆಗಮಿಸಿದ್ದರು. ಇದೇ ವೇಳೆ ಉಡುಪಿಯ ಕೊರಂಗ್ರಪಾಡಿ ನಿವಾಸಿ ಸುಪ್ರೀತ್ ಕಾರು ಚಲಾಯಿಸುತ್ತಿದ್ದಾಗ ನಿಧಾನವಾಗಿ ವಾಹನ ಚಲಾಯಿಸುವಂತೆ ಪ್ರವಾಸಿಗರು ಸೂಚನೆ ನೀಡಿದ್ದರೆನ್ನಲಾಗಿದೆ. ಈ ವಿಚಾರವೇ ನಂತರ ಗಲಾಟೆಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ.
ಪ್ರವಾಸಿಗರ ಆರೋಪದ ಪ್ರಕಾರ, ಇದರಿಂದ ಆಕ್ರೋಶಗೊಂಡ ಸುಪ್ರೀತ್ ತಾನು ಸ್ಥಳೀಯ ವ್ಯಕ್ತಿ ಎಂದು ಹೇಳಿ ವಾಗ್ವಾದ ನಡೆಸಿದ್ದಲ್ಲದೆ, ಕಾರನ್ನು ಅವರತ್ತ ಚಲಾಯಿಸಲು ಯತ್ನಿಸಿದ್ದಾನೆ. ಅಲ್ಲದೆ, ತನ್ನ ವಾಹನದಲ್ಲಿದ್ದ ಕಬ್ಬಿಣದ ರೋಡ್ ತೆಗೆದು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಈ ಘಟನೆಯಲ್ಲಿ ಕೆಲ ಪ್ರವಾಸಿಗರಿಗೆ ಗಾಯಗಳಾಗಿವೆ.
ಇನ್ನೊಂದೆಡೆ, ಸುಪ್ರೀತ್ ಕೂಡ ಪ್ರತಿದೂರು ದಾಖಲಿಸಿದ್ದು, ಪ್ರವಾಸಿಗರೇ ಮೊದಲು ಗಲಾಟೆ ನಡೆಸಿ ತಮ್ಮ ಕಾರಿನ ಗಾಜು ಜಖಂಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಜೊತೆಗೆ ಚೇರ್ ಹಾಗೂ ಫೋಟೋ ಸ್ಟ್ಯಾಂಡ್ನಿಂದ ಹಲ್ಲೆ ನಡೆಸಿದ್ದು, ಅದರ ಪರಿಣಾಮವಾಗಿ ತಮಗೆ ಗಾಯವಾಗಿ ಬಾಯಿಯಿಂದ ರಕ್ತಸ್ರಾವವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಘಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆಯೇ ಸ್ಥಳದಲ್ಲಿದ್ದ ಸಾರ್ವಜನಿಕರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಮೂಲದ ಪವನ್ ಹಾಗೂ ಸ್ಥಳೀಯ ನಿವಾಸಿ ಸುಪ್ರೀತ್ ನೀಡಿದ ಪ್ರತ್ಯೇಕ ದೂರುಗಳ ಆಧಾರದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm