ಬ್ರೇಕಿಂಗ್ ನ್ಯೂಸ್
06-01-21 06:08 pm Mangalore Correspondent ಕ್ರೈಂ
Photo credits : DRA_MNG
ಮಂಗಳೂರು, ಜ.6: ದುಬೈನಿಂದ ಭಾರೀ ಪ್ರಮಾಣದ ಚಿನ್ನ ಕಳ್ಳಸಾಗಣಿಕೆ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಡಿಆರ್ ಐ ಅಧಿಕಾರಿಗಳು ಬಂಧಿಸಿದ್ದಾರೆ.
ಸೋಮವಾರ ಮಧ್ಯರಾತ್ರಿ 12.30 ಕ್ಕೆ ಮಂಗಳೂರು ನಿಲ್ದಾಣಕ್ಕೆ ಆಗಮಿಸಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಇವರು ಆಗಮಿಸಿದ್ದರು. ಕಂದಾಯ ಇಲಾಖೆಯ ಗುಪ್ತಚರ ಅಧಿಕಾರಿಗಳು ತಪಾಸಣೆ ನಡೆಸಿದಾಗ ಇಬ್ಬರು ಯುವಕರ ಮೈಯಲ್ಲಿ ಚಿನ್ನದ ಅಂಶ ಇರುವುದು ಪತ್ತೆಯಾಗಿದೆ. ಬಂಧಿತರನ್ನು ಭಟ್ಕಳ ಮತ್ತು ಕಾಸರಗೋಡಿನ ನಿವಾಸಿಗಳು ಎಂದು ಪತ್ತೆ ಮಾಡಿದ್ದು ತಮ್ಮ ಹೆಸರು, ವಿಳಾಸವನ್ನು ಸರಿಯಾಗಿ ನೀಡಿಲ್ಲ ಎಂದು ಡಿಆರ್ ಐ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಪಾಸಣೆ ನಡೆಸಿದಾಗ, ಇಬ್ಬರು ಕೂಡ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಮೈಯೊಳಗೆ ಅಡಗಿಸಿಟ್ಟಿದ್ದು ಪತ್ತೆಯಾಗಿದೆ.

ಭಟ್ಕಳದ ವ್ಯಕ್ತಿ ತನ್ನ ಗುದ ದ್ವಾರದಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಐದು ಉಂಡೆಗಳನ್ನಾಗಿಸಿ ತುರುಕಿಸಿದ್ದ. ಆತನಲ್ಲಿ ಒಟ್ಟು 809 ಗ್ರಾಂ ಭಾರದ ಐದು ಉಂಡೆಗಳಿದ್ದವು. ಅದನ್ನು ತಪಾಸಣೆಗೆ ಒಳಪಡಿಸಿದಾಗ 641 ಗ್ರಾಂ ಚಿನ್ನ ಪತ್ತೆಯಾಗಿದೆ.
ಕಾಸರಗೋಡಿನ ಯುವಕನ ಒಳಚಡ್ಡಿಯ ರಹಸ್ಯ ಜೇಬಿನಲ್ಲಿ ಚಿನ್ನ ಪತ್ತೆಯಾಗಿದೆ. ಜೇಬಿನಲ್ಲಿದ್ದ ಒಟ್ಟು 1008 ಗ್ರಾಂ ಭಾರದ ಪೇಸ್ಟ್ ನಲ್ಲಿ 646 ಗ್ರಾಂ ಚಿನ್ನ ಪತ್ತೆಯಾಗಿದೆ.
ಕಸ್ಟಮ್ಸ್ ಅಧಿಕಾರಿಗಳ ಕಣ್ಣು ತಪ್ಪಿಸಲು ಆರೋಪಿಗಳು ಈ ತಂತ್ರ ಹೂಡಿದ್ದರು. ಇಬ್ಬರಲ್ಲಿ ಒಟ್ಟು 1.200 ಕೇಜಿ ಚಿನ್ನ ಸಿಕ್ಕಿದ್ದು 67 ಲಕ್ಷ ಮೌಲ್ಯದ್ದೆಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

ಆರೋಪಿಗಳು ಭಟ್ಕಳ ಮತ್ತು ಕಾಸರಗೋಡಿನಲ್ಲಿ ಸಕ್ರಿಯವಾಗಿರುವ ಚಿನ್ನ ಸ್ಮಗ್ಲಿಂಗ್ ಗ್ಯಾಂಗ್ ಜೊತೆ ನಂಟು ಹೊಂದಿರುವ ಶಂಕೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ದುಬೈ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಲಿಂಕ್ ಇರುವ ಬಗ್ಗೆಯೂ ಸಂಶಯ ವ್ಯಕ್ತವಾಗಿದೆ. ಈ ಬಗ್ಗೆ ಇನ್ನಷ್ಟು ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.
ಲಾಕ್ಡೌನ್ ನಿರ್ಬಂಧಗಳನ್ನು ಲಾಭವಾಗಿಸ್ಕೊಂಡು ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಅಧಿಕಾರಿಗಳು ಶಂಕಿಸಿದ್ದು ಲಾಕ್ಡೌನ್ ಬಳಿಕ ಕಳ್ಳ ಸಾಗಾಣಿಕೆ ಪ್ರಕರಣಗಳು ಹೆಚ್ಚಿರುವುದನ್ನು ಪತ್ತೆ ಮಾಡಿದ್ದಾರೆ.
Two Persons arrested at the Mangalore International Airport for allegedly trying to smuggle gold worth 67 lakhs into the country by hiding in rectum, a Customs official said Wednesday.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm