ಬ್ರೇಕಿಂಗ್ ನ್ಯೂಸ್
12-06-26 11:58 am HK News Staffer ಕ್ರೈಂ
ಶಿವಮೊಗ್ಗ, ಜೂನ್ 12: ಜೈಲಿನಲ್ಲಿರುವ ವ್ಯಕ್ತಿಯೊಬ್ಬ ತನ್ನ ಪತ್ನಿಯ ಕೊಲೆಗೆ ಸುಪಾರಿ ನೀಡಿದ್ದು, ಬುರ್ಖಾ ಧರಿಸಿ ಮಹಿಳೆ ಹತ್ಯೆಗೆ ಬಂದಿದ್ದ ಮೂವರು ಯುವಕರನ್ನು ಸಾರ್ವಜನಿಕರೇ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗ ನಗರದ ಕೆ.ಆರ್ ಪುರಂ ರಸ್ತೆಯಲ್ಲಿ ನಡೆದಿದೆ.
ಕೊಲೆ ಪ್ರಕರಣವೊಂದರಲ್ಲಿ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯಾಗಿರುವ ವ್ಯಕ್ತಿಯೊಬ್ಬ ತನ್ನ ಪತ್ನಿಯ ಕೊಲೆಗೆ ಸುಪಾರಿ ನೀಡಿದ್ದ. ಆತನ ಸಹಚರರಾದ ಅಸ್ಲಾಂ(25), ಮಹೇಶ್ (20), ದರ್ಶನ್ (20) ಮತ್ತು ಮುನ್ನಾ(24) ಎಂಬ ನಾಲ್ವರು ಯುವಕರು ತಮ್ಮ ಗುರುತು ತಿಳಿಯದಂತೆ ಬುರ್ಖಾ ಧರಿಸಿ ಕೆ.ಆರ್. ಪುರಂನಲ್ಲಿರುವ ಮಹಿಳೆಯ ಮನೆ ಬಳಿ ಬಂದಿದ್ದಾರೆ.
ಆದರೆ, ಇವರ ವಿಚಿತ್ರ ನಡವಳಿಕೆ ಮತ್ತು ಚಲನವಲನಗಳನ್ನು ಗಮನಿಸಿದ ಸ್ಥಳೀಯ ನಿವಾಸಿಗಳಿಗೆ ಅನುಮಾನ ಬಂದಿದೆ. ಕೂಡಲೇ ಸಾರ್ವಜನಿಕರು ಒಟ್ಟು ಸೇರಿ ನಾಲ್ವರನ್ನು ಸುತ್ತುವರೆದು ತರಾಟೆಗೆ ತೆಗೆದುಕೊಂಡಿದ್ದಾರೆ. ತಪಾಸಣೆ ನಡೆಸಿದಾಗ ಬುರ್ಖಾ ಒಳಗಿದ್ದ ಗಂಡಸರ ಅಸಲಿ ಮುಖವಾಡ ಬಯಲಾಗಿದ್ದು, ನಾಲ್ವರಿಗೂ ರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಈ ನಡುವೆ ಮುನ್ನಾ ಎಂಬಾತ ಸ್ಥಳದಿಂದ ಪರಾರಿಯಾಗಿದ್ದಾನೆ. ಉಳಿದ ಮೂವರು ಆರೋಪಿಗಳಾದ ಅಸ್ಲಾಂ, ಮಹೇಶ್ ಮತ್ತು ದರ್ಶನ್ನನ್ನು ಹಿಡಿದು ದೊಡ್ಡಪೇಟೆ ಪೊಲೀಸರಿಗೆ ಒಪ್ಪಿಸಲಾಗಿದೆ. ಸ್ಥಳೀಯರ ಸಮಯಪ್ರಜ್ಞೆಯಿಂದಾಗಿ ಮಹಿಳೆಯ ಪ್ರಾಣ ಉಳಿದಿದೆ ಎಂದು ಕುಟುಂಬದವರು ಹೇಳಿದ್ದಾರೆ. ಬುರ್ಖಾ ಧರಿಸಿ ಇಂತಹ ಅಪರಾಧ ಕೃತ್ಯಗಳಿಗೆ ಮುಂದಾಗಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.
ಪತ್ನಿ ತನ್ನನ್ನು ನೋಡಲು ಜೈಲಿಗೆ ಬರುತ್ತಿಲ್ಲ ಮತ್ತು ಖರ್ಚಿಗೆ ಹಣ ನೀಡುತ್ತಿಲ್ಲ ಎಂಬ ಕಾರಣಕ್ಕೆ ಜೈಲಿನಲ್ಲಿರುವ ಪತಿ, ತನ್ನ ಪತ್ನಿ ತಬಸ್ಸುಮ್ ಬಾನು ವಿರುದ್ಧ ತೀವ್ರ ಆಕ್ರೋಶಗೊಂಡಿದ್ದ. ಸೇಡು ತೀರಿಸಿಕೊಳ್ಳಲು ಜೈಲಿನಿಂದಲೇ ತನ್ನ ಸಹಚರರಿಗೆ ಪತ್ನಿಯ ಹತ್ಯೆಗೆ ಸುಪಾರಿ ನೀಡಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತಲೆಮರೆಸಿಕೊಂಡ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm