ಬ್ರೇಕಿಂಗ್ ನ್ಯೂಸ್
12-06-26 11:58 am HK News Staffer ಕ್ರೈಂ
ಶಿವಮೊಗ್ಗ, ಜೂನ್ 12: ಜೈಲಿನಲ್ಲಿರುವ ವ್ಯಕ್ತಿಯೊಬ್ಬ ತನ್ನ ಪತ್ನಿಯ ಕೊಲೆಗೆ ಸುಪಾರಿ ನೀಡಿದ್ದು, ಬುರ್ಖಾ ಧರಿಸಿ ಮಹಿಳೆ ಹತ್ಯೆಗೆ ಬಂದಿದ್ದ ಮೂವರು ಯುವಕರನ್ನು ಸಾರ್ವಜನಿಕರೇ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗ ನಗರದ ಕೆ.ಆರ್ ಪುರಂ ರಸ್ತೆಯಲ್ಲಿ ನಡೆದಿದೆ.
ಕೊಲೆ ಪ್ರಕರಣವೊಂದರಲ್ಲಿ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯಾಗಿರುವ ವ್ಯಕ್ತಿಯೊಬ್ಬ ತನ್ನ ಪತ್ನಿಯ ಕೊಲೆಗೆ ಸುಪಾರಿ ನೀಡಿದ್ದ. ಆತನ ಸಹಚರರಾದ ಅಸ್ಲಾಂ(25), ಮಹೇಶ್ (20), ದರ್ಶನ್ (20) ಮತ್ತು ಮುನ್ನಾ(24) ಎಂಬ ನಾಲ್ವರು ಯುವಕರು ತಮ್ಮ ಗುರುತು ತಿಳಿಯದಂತೆ ಬುರ್ಖಾ ಧರಿಸಿ ಕೆ.ಆರ್. ಪುರಂನಲ್ಲಿರುವ ಮಹಿಳೆಯ ಮನೆ ಬಳಿ ಬಂದಿದ್ದಾರೆ.
ಆದರೆ, ಇವರ ವಿಚಿತ್ರ ನಡವಳಿಕೆ ಮತ್ತು ಚಲನವಲನಗಳನ್ನು ಗಮನಿಸಿದ ಸ್ಥಳೀಯ ನಿವಾಸಿಗಳಿಗೆ ಅನುಮಾನ ಬಂದಿದೆ. ಕೂಡಲೇ ಸಾರ್ವಜನಿಕರು ಒಟ್ಟು ಸೇರಿ ನಾಲ್ವರನ್ನು ಸುತ್ತುವರೆದು ತರಾಟೆಗೆ ತೆಗೆದುಕೊಂಡಿದ್ದಾರೆ. ತಪಾಸಣೆ ನಡೆಸಿದಾಗ ಬುರ್ಖಾ ಒಳಗಿದ್ದ ಗಂಡಸರ ಅಸಲಿ ಮುಖವಾಡ ಬಯಲಾಗಿದ್ದು, ನಾಲ್ವರಿಗೂ ರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಈ ನಡುವೆ ಮುನ್ನಾ ಎಂಬಾತ ಸ್ಥಳದಿಂದ ಪರಾರಿಯಾಗಿದ್ದಾನೆ. ಉಳಿದ ಮೂವರು ಆರೋಪಿಗಳಾದ ಅಸ್ಲಾಂ, ಮಹೇಶ್ ಮತ್ತು ದರ್ಶನ್ನನ್ನು ಹಿಡಿದು ದೊಡ್ಡಪೇಟೆ ಪೊಲೀಸರಿಗೆ ಒಪ್ಪಿಸಲಾಗಿದೆ. ಸ್ಥಳೀಯರ ಸಮಯಪ್ರಜ್ಞೆಯಿಂದಾಗಿ ಮಹಿಳೆಯ ಪ್ರಾಣ ಉಳಿದಿದೆ ಎಂದು ಕುಟುಂಬದವರು ಹೇಳಿದ್ದಾರೆ. ಬುರ್ಖಾ ಧರಿಸಿ ಇಂತಹ ಅಪರಾಧ ಕೃತ್ಯಗಳಿಗೆ ಮುಂದಾಗಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.
ಪತ್ನಿ ತನ್ನನ್ನು ನೋಡಲು ಜೈಲಿಗೆ ಬರುತ್ತಿಲ್ಲ ಮತ್ತು ಖರ್ಚಿಗೆ ಹಣ ನೀಡುತ್ತಿಲ್ಲ ಎಂಬ ಕಾರಣಕ್ಕೆ ಜೈಲಿನಲ್ಲಿರುವ ಪತಿ, ತನ್ನ ಪತ್ನಿ ತಬಸ್ಸುಮ್ ಬಾನು ವಿರುದ್ಧ ತೀವ್ರ ಆಕ್ರೋಶಗೊಂಡಿದ್ದ. ಸೇಡು ತೀರಿಸಿಕೊಳ್ಳಲು ಜೈಲಿನಿಂದಲೇ ತನ್ನ ಸಹಚರರಿಗೆ ಪತ್ನಿಯ ಹತ್ಯೆಗೆ ಸುಪಾರಿ ನೀಡಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತಲೆಮರೆಸಿಕೊಂಡ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm