ಬ್ರೇಕಿಂಗ್ ನ್ಯೂಸ್
13-06-26 06:14 pm HK News Staffer ಕ್ರೈಂ
ಕಾರವಾರ, ಜೂನ್ 13: ಕಾಲೇಜು ಶುಲ್ಕ ಪಾವತಿಸಲು ತಂದೆ ನೀಡಿದ್ದ 10 ಸಾವಿರ ಹಣವನ್ನು ಪರಿಚಯಸ್ಥನೊಬ್ಬನಿಗೆ ಸಾಲವಾಗಿ ನೀಡಿ, ಬಳಿಕ ಆ ಹಣ ಮರಳಿ ಸಿಗದೇ ಮನನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ನಡೆದಿದೆ.
ಭಟ್ಕಳದಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಗಾಯತ್ರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಕಾಲೇಜಿನ ಶುಲ್ಕ ಪಾವತಿಸಲು ತಂದೆ ನಾಗರಾಜ ಲಚ್ಚಯ್ಯ ನಾಯ್ಕ ಮಗಳಿಗೆ ₹10 ಸಾವಿರ ನೀಡಿದ್ದರು. ಇದೇ ವೇಳೆ ಗ್ರಾಮದ ಪರಿಚಯಸ್ಥ ಸಂತೋಷ ಮಾಧೇದ ನಾಯ್ಕ ಎಂಬಾತ, ನಿಗದಿತ ಸಮಯದಲ್ಲಿ ಹಣವನ್ನು ಮರಳಿಸುವುದಾಗಿ ಭರವಸೆ ನೀಡಿ ಗಾಯತ್ರಿಯಿಂದ 10 ಸಾವಿರ ಸಾಲ ಪಡೆದಿದ್ದಾನೆ ಎನ್ನಲಾಗಿದೆ.
ಆದರೆ, ನಿಗದಿಪಡಿಸಿದ ಅವಧಿ ಮುಗಿದರೂ ಸಂತೋಷ ಹಣವನ್ನು ಹಿಂದಿರುಗಿಸಿಲ್ಲ. ಪರಿಣಾಮ ಗಾಯತ್ರಿಗೆ ಕಾಲೇಜಿನ ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ. ಶುಲ್ಕ ಬಾಕಿ ಉಳಿದ ಕಾರಣ ಪರೀಕ್ಷೆಗೆ ಅಗತ್ಯವಾಗಿದ್ದ ಹಾಲ್ಟಿಕೆಟ್ ಕೂಡ ಆಕೆಗೆ ದೊರಕಿರಲಿಲ್ಲ ಎಂದು ತಿಳಿದುಬಂದಿದೆ.
ಪರೀಕ್ಷೆ ಬರೆಯುವ ಅವಕಾಶ ಕಳೆದುಕೊಂಡ ನೋವು ಹಾಗೂ ಹಣದ ಸಮಸ್ಯೆಯಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾದ ಗಾಯತ್ರಿ, ಕೊನೆಗೆ ಗ್ರಾಮದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ದುರ್ಘಟನೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರನ್ನು ಆಘಾತಕ್ಕೀಡು ಮಾಡಿದೆ.
ಘಟನೆ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿನಿಯ ಸಾವಿಗೆ ಕಾರಣವಾದ ಎಲ್ಲಾ ಆಯಾಮಗಳ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಗಾಯತ್ರಿಗೆ ನೀಡಬೇಕಿದ್ದ ಹಣವನ್ನು ಮರಳಿಸದೇ ಇದ್ದ ಆರೋಪದ ಬಗ್ಗೆಯೂ ವಿಚಾರಣೆ ನಡೆಸಲಾಗುತ್ತಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm