ಬ್ರೇಕಿಂಗ್ ನ್ಯೂಸ್
13-06-26 08:43 pm HK News Staffer ಕ್ರೈಂ
ಬೆಂಗಳೂರು, ಜೂನ್ 13: ನಿವೇಶನ ಇರುವುದಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಹಕಾರಿ ಬ್ಯಾಂಕಿನಿಂದ 70 ಲಕ್ಷ ರೂಪಾಯಿ ಸಾಲ ಪಡೆದು ಕಂತು ಪಾವತಿಸದೆ ವಂಚಿಸಿದ ಆರೋಪದಡಿ ಸಾಲಗಾರ ಹಾಗೂ ಮಾಜಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಸೇರಿದಂತೆ ಮೂವರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಪ್ರಸನ್ನ ನೀಡಿದ ದೂರಿನ ಮೇರೆಗೆ ಸಾಲ ಪಡೆದಿದ್ದ ಪ್ರಕಾಶ್, ಹೆಚ್. ರಘು ಎಂ. ಆರ್., ಅಂದಿನ ಶಾಖಾ ವ್ಯವಸ್ಥಾಪಕ (ಪ್ರಭಾರ) ನಾಗರಾಜು ವಿರುದ್ಧ ಪ್ರಕರಣ ದಾಖಲಾಗಿದೆ.
ಸಹಕಾರಿ ಬ್ಯಾಂಕ್ ಸದಸ್ಯನಾಗಿದ್ದ ಪ್ರಕಾಶ್, 2023ರಲ್ಲಿ ಒಂದು ಕೋಟಿ ರೂಪಾಯಿ ಸಾಲ ನೀಡುವಂತೆ ಅರ್ಜಿ ಹಾಕಿದ್ದರು. ಈ ಕುರಿತು ಆಡಳಿತ ಮಂಡಳಿಯು ಸಭೆ ನಡೆಸಿ ಅರ್ಜಿಯನ್ನು ಭಾಗಶಃ ಪುರಸ್ಕರಿಸಿ ಕಾನೂನು ಅಭಿಪ್ರಾಯಕ್ಕೆ ಒಳಪಟ್ಟು ಮಂಜೂರು ಮಾಡಿತ್ತು. ದಾಖಲಾತಿ ಪರಿಶೀಲಿಸಿ ಸಾಲ ಮಂಜೂರು ಮಾಡದಂತೆ ಬ್ಯಾಂಕಿನ ಕಾನೂನು ಸಲಹೆಗಾರ ರಮೇಶ್ ವರದಿ ನೀಡಿದ್ದರು. ಈ ವರದಿಯನ್ನು ನಾಗರಾಜ್ ಅವರು ಆಡಳಿತ ಮಂಡಳಿ ಮುಂದೆ ಪ್ರಸ್ತಾಪಿಸದೆ ಎರಡನೇ ಕಾನೂನು ವರದಿಗಾಗಿ ಮತ್ತೋರ್ವ ಕಾನೂನು ಸಲಹೆಗಾರರನ್ನ ಸಂಪರ್ಕಿಸಿ ಅವರಿಂದ ತಮಗೆ ಪೂರಕ ರೀತಿ ವರದಿ ತರಿಸಿಕೊಂಡಿದ್ದರು.
ಸಾಲ ನೀಡುವಾಗ ಅರ್ಜಿದಾರರಿಂದ ಅಗತ್ಯ ದಾಖಲಾತಿ ಪಡೆಯದೆ 70 ಲಕ್ಷ ಸಾಲ ಮಂಜೂರು ಮಾಡಿದ್ದರು. ಸಾಲ ಪಡೆದ ಆರೋಪಿಯು ಮಾಸಿಕ ಕಂತು ಸರಿಯಾಗಿ ಕಟ್ಟದಿದ್ದಾಗ ಸಾಲ ಪಡೆಯಲು ಅಡ ಇಟ್ಟಿದ್ದ ನಿವೇಶನ ಪರಿಶೀಲನೆಗಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ಕಳುಹಿಸಲಾಗಿತ್ತು.
ಪರಿಶೀಲನೆ ವೇಳೆ ನಿವೇಶನವು ಅರ್ಜಿದಾರನ ಮಾಲೀಕತ್ವ ನಿವೇಶನ ಇಲ್ಲದಿರುವುದು ಗೊತ್ತಾಗಿದೆ. ಆರೋಪಿ ಪ್ರಕಾಶ್, ನಿವೇಶನವಿದೆ ಎಂದು ರಮೇಶ್ ಎಂಬುವರಿಂದ ನಕಲಿ ಆರ್ ಟಿಸಿ ಸೃಷ್ಟಿಸಿದರೆ, ರಘು ಎಂಬಾತನ ಮೂಲಕ ಕ್ರಯಪತ್ರ ತಯಾರಿಸಿಕೊಂಡಿದ್ದರು. ಆರ್.ಆರ್. ನಗರದ ಜಿಬಿಎ ಸಿಬ್ಬಂದಿಗಳೊಂದಿಗೆ ಶಾಮೀಲಾಗಿ ನಕಲಿ ಬಿಬಿಎಂಪಿ ಖಾತಾ ಮಾಡಿಸಿಕೊಂಡು ನಿವೇಶನ ಕೊಳ್ಳಲು ಬ್ಯಾಂಕಿಗೆ ಸಾಲಕ್ಕಾಗಿ ಅರ್ಜಿ ಸಲ್ಲಿಸಿರುವುದು ಕಂಡು ಬಂದಿದೆ.
ಜಾಗವೇ ಇಲ್ಲದ ನಿವೇಶನಕ್ಕೆ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕಿಗೆ ವಂಚನೆ ಮಾಡಲಾಗಿದ್ದು, ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಪ್ರಸನ್ನ ಅವರು ಕೋರಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ಧಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm