ಬ್ರೇಕಿಂಗ್ ನ್ಯೂಸ್
15-06-26 11:27 am HK News Staffer ಕ್ರೈಂ
ಹಾಸನ, ಜೂನ್ 15: ಧರ್ಮಸ್ಥಳದ ತೀರ್ಥಯಾತ್ರೆ ಮುಗಿಸಿ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದಾಗ ಮಾರ್ಗಮಧ್ಯೆ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಈಜಾಡಲು ಐಬ ಹೋಗಿದ್ದ ಮೂವರು ಯುವಕರು ನೀರು ಪಾಲಾಗಿದ್ದಾರೆ. ಹಾಸನ ತಾಲೂಕಿನ ಶೆಟ್ಟಿಹಳ್ಳಿ ಚರ್ಚ್ ಸಮೀಪ ಭಾನುವಾರ ಸಂಜೆ ದುರ್ಘಟನ ಸಂಭವಿಸಿದೆ.
ಬೆಂಗಳೂರಿನ ಗಿರಿನಗರದ ಮಣಿಕಂಠ ಚರಣ (20), ಮಿಲನ್ (23) ಹಾಗೂ ಬ್ಯಾಟರಾಯನಪುರದ (20) ಮೃತ ದುರ್ವೈವಿಗಳು. ಬೆಂಗಳೂರಿನ ವಿವಿಧ ಬಡಾವಣೆಗಳ 10 ಮಂದಿ ಸ್ನೇಹಿತರು ಟೆಂಪೋ ಟ್ರಾವೆರ್ಸ್ ನಲ್ಲಿ ಶನಿವಾರ ಧರ್ಮಸ್ಥಳಕ್ಕೆ ತೆರಳಿ ಮಂಜುನಾಥಸ್ವಾಮಿ ದರ್ಶನ ಪಡೆದು ಭಾನುವಾರ ಬರುವಾಗ ಮಾರ್ಗಮಧ್ಯೆ ಹಾಸನದಿಂದ 14 ಕಿ.ಮೀ. ದೂರದ ಶೆಟ್ಟಿಹಳ್ಳಿ ಬಳಿ ಹೇಮಾವತಿ ಜಲಾಶಯದ ಹಿನ್ನೀರಿನ ಐತಿಹಾಸಿಕ ಶೆಟ್ಟಿಹಳ್ಳಿ ಚರ್ಚ್ ವೀಕ್ಷಿಸಲು ತೆರಳಿದ್ದರು.
ಮಧ್ಯಾಹ್ನ 3 ಗಂಟೆಗೆ ತೆರಳಿದ್ದು ಬಳಿಕ ಚರ್ಚ್ ಸುತ್ತಲೂ ಆವರಿಸಿರುವ ಹಿನ್ನೀರಿನಲ್ಲಿ ಈಜಾಡಲು ನೀರಿಗಿಳಿದಿದ್ದಾರೆ. ನೀರಿನ ಆಳ ತಿಳಿಯದೆ, ಈಜಾಡುತ್ತಾ ಹೋದ ಮೂವರು ಯುವಕರು ಮುಳುಗಿದ್ದಾರೆ. ಅವರನ್ನು ಸ್ನೇಹಿತರು ರಕ್ಷಿಸಲು ಹರಸಾಹಸಪಟ್ಟರೂ ಸಾಧ್ಯವಾಗದೆ ಸಹಾಯಕ್ಕಾಗಿ ಕೂಗಿದ್ದಾರೆ. ಸ್ಥಳೀಯರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಮೂವರೂ ನೀರಿನಲ್ಲಿ ಕಣ್ಮರೆಯಾಗಿದ್ದರು. ಮಾಹಿತಿ ಪಡೆದ ಗೊರೂರು ಠಾಣೆ ಪೊಲೀಸರು ಅಗ್ನಿ ಶಾಮಕ ದಳದೊಂದಿಗೆ ತೆರಳಿ ಸಂಜೆ 6 ಗಂಟೆ ವೇಳೆಗೆ ಮೂವರ ಮೃತದೇಹಗಳನ್ನೂ ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ಹಾಸನದ ಹಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ತಲುಪಿಸಿದ್ದಾರೆ.
ನೀರಿಗೆ ಇಳಿದಿದ್ದ ಮೃತ ಮೂವರು ಯುವಕರಿಗೆ ಈಜು ಬರುತ್ತಿರಲಿಲ್ಲ ಎನ್ನಲಾಗಿದೆ. ನೀರಿನ ಆಳ, ಸುಳಿಯ ಅರಿವಿಲ್ಲದೆ ಅವರು ನದಿಯ ಆಳಕ್ಕೆ ಇಳಿದು ಮೃತಪಟ್ಟಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm