ಬ್ರೇಕಿಂಗ್ ನ್ಯೂಸ್
15-06-26 11:27 am HK News Staffer ಕ್ರೈಂ
ಹಾಸನ, ಜೂನ್ 15: ಧರ್ಮಸ್ಥಳದ ತೀರ್ಥಯಾತ್ರೆ ಮುಗಿಸಿ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದಾಗ ಮಾರ್ಗಮಧ್ಯೆ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಈಜಾಡಲು ಐಬ ಹೋಗಿದ್ದ ಮೂವರು ಯುವಕರು ನೀರು ಪಾಲಾಗಿದ್ದಾರೆ. ಹಾಸನ ತಾಲೂಕಿನ ಶೆಟ್ಟಿಹಳ್ಳಿ ಚರ್ಚ್ ಸಮೀಪ ಭಾನುವಾರ ಸಂಜೆ ದುರ್ಘಟನ ಸಂಭವಿಸಿದೆ.
ಬೆಂಗಳೂರಿನ ಗಿರಿನಗರದ ಮಣಿಕಂಠ ಚರಣ (20), ಮಿಲನ್ (23) ಹಾಗೂ ಬ್ಯಾಟರಾಯನಪುರದ (20) ಮೃತ ದುರ್ವೈವಿಗಳು. ಬೆಂಗಳೂರಿನ ವಿವಿಧ ಬಡಾವಣೆಗಳ 10 ಮಂದಿ ಸ್ನೇಹಿತರು ಟೆಂಪೋ ಟ್ರಾವೆರ್ಸ್ ನಲ್ಲಿ ಶನಿವಾರ ಧರ್ಮಸ್ಥಳಕ್ಕೆ ತೆರಳಿ ಮಂಜುನಾಥಸ್ವಾಮಿ ದರ್ಶನ ಪಡೆದು ಭಾನುವಾರ ಬರುವಾಗ ಮಾರ್ಗಮಧ್ಯೆ ಹಾಸನದಿಂದ 14 ಕಿ.ಮೀ. ದೂರದ ಶೆಟ್ಟಿಹಳ್ಳಿ ಬಳಿ ಹೇಮಾವತಿ ಜಲಾಶಯದ ಹಿನ್ನೀರಿನ ಐತಿಹಾಸಿಕ ಶೆಟ್ಟಿಹಳ್ಳಿ ಚರ್ಚ್ ವೀಕ್ಷಿಸಲು ತೆರಳಿದ್ದರು.
ಮಧ್ಯಾಹ್ನ 3 ಗಂಟೆಗೆ ತೆರಳಿದ್ದು ಬಳಿಕ ಚರ್ಚ್ ಸುತ್ತಲೂ ಆವರಿಸಿರುವ ಹಿನ್ನೀರಿನಲ್ಲಿ ಈಜಾಡಲು ನೀರಿಗಿಳಿದಿದ್ದಾರೆ. ನೀರಿನ ಆಳ ತಿಳಿಯದೆ, ಈಜಾಡುತ್ತಾ ಹೋದ ಮೂವರು ಯುವಕರು ಮುಳುಗಿದ್ದಾರೆ. ಅವರನ್ನು ಸ್ನೇಹಿತರು ರಕ್ಷಿಸಲು ಹರಸಾಹಸಪಟ್ಟರೂ ಸಾಧ್ಯವಾಗದೆ ಸಹಾಯಕ್ಕಾಗಿ ಕೂಗಿದ್ದಾರೆ. ಸ್ಥಳೀಯರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಮೂವರೂ ನೀರಿನಲ್ಲಿ ಕಣ್ಮರೆಯಾಗಿದ್ದರು. ಮಾಹಿತಿ ಪಡೆದ ಗೊರೂರು ಠಾಣೆ ಪೊಲೀಸರು ಅಗ್ನಿ ಶಾಮಕ ದಳದೊಂದಿಗೆ ತೆರಳಿ ಸಂಜೆ 6 ಗಂಟೆ ವೇಳೆಗೆ ಮೂವರ ಮೃತದೇಹಗಳನ್ನೂ ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ಹಾಸನದ ಹಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ತಲುಪಿಸಿದ್ದಾರೆ.
ನೀರಿಗೆ ಇಳಿದಿದ್ದ ಮೃತ ಮೂವರು ಯುವಕರಿಗೆ ಈಜು ಬರುತ್ತಿರಲಿಲ್ಲ ಎನ್ನಲಾಗಿದೆ. ನೀರಿನ ಆಳ, ಸುಳಿಯ ಅರಿವಿಲ್ಲದೆ ಅವರು ನದಿಯ ಆಳಕ್ಕೆ ಇಳಿದು ಮೃತಪಟ್ಟಿದ್ದಾರೆ.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm