ಬ್ರೇಕಿಂಗ್ ನ್ಯೂಸ್
15-06-26 11:27 am HK News Staffer ಕ್ರೈಂ
ಹಾಸನ, ಜೂನ್ 15: ಧರ್ಮಸ್ಥಳದ ತೀರ್ಥಯಾತ್ರೆ ಮುಗಿಸಿ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದಾಗ ಮಾರ್ಗಮಧ್ಯೆ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಈಜಾಡಲು ಐಬ ಹೋಗಿದ್ದ ಮೂವರು ಯುವಕರು ನೀರು ಪಾಲಾಗಿದ್ದಾರೆ. ಹಾಸನ ತಾಲೂಕಿನ ಶೆಟ್ಟಿಹಳ್ಳಿ ಚರ್ಚ್ ಸಮೀಪ ಭಾನುವಾರ ಸಂಜೆ ದುರ್ಘಟನ ಸಂಭವಿಸಿದೆ.
ಬೆಂಗಳೂರಿನ ಗಿರಿನಗರದ ಮಣಿಕಂಠ ಚರಣ (20), ಮಿಲನ್ (23) ಹಾಗೂ ಬ್ಯಾಟರಾಯನಪುರದ (20) ಮೃತ ದುರ್ವೈವಿಗಳು. ಬೆಂಗಳೂರಿನ ವಿವಿಧ ಬಡಾವಣೆಗಳ 10 ಮಂದಿ ಸ್ನೇಹಿತರು ಟೆಂಪೋ ಟ್ರಾವೆರ್ಸ್ ನಲ್ಲಿ ಶನಿವಾರ ಧರ್ಮಸ್ಥಳಕ್ಕೆ ತೆರಳಿ ಮಂಜುನಾಥಸ್ವಾಮಿ ದರ್ಶನ ಪಡೆದು ಭಾನುವಾರ ಬರುವಾಗ ಮಾರ್ಗಮಧ್ಯೆ ಹಾಸನದಿಂದ 14 ಕಿ.ಮೀ. ದೂರದ ಶೆಟ್ಟಿಹಳ್ಳಿ ಬಳಿ ಹೇಮಾವತಿ ಜಲಾಶಯದ ಹಿನ್ನೀರಿನ ಐತಿಹಾಸಿಕ ಶೆಟ್ಟಿಹಳ್ಳಿ ಚರ್ಚ್ ವೀಕ್ಷಿಸಲು ತೆರಳಿದ್ದರು.
ಮಧ್ಯಾಹ್ನ 3 ಗಂಟೆಗೆ ತೆರಳಿದ್ದು ಬಳಿಕ ಚರ್ಚ್ ಸುತ್ತಲೂ ಆವರಿಸಿರುವ ಹಿನ್ನೀರಿನಲ್ಲಿ ಈಜಾಡಲು ನೀರಿಗಿಳಿದಿದ್ದಾರೆ. ನೀರಿನ ಆಳ ತಿಳಿಯದೆ, ಈಜಾಡುತ್ತಾ ಹೋದ ಮೂವರು ಯುವಕರು ಮುಳುಗಿದ್ದಾರೆ. ಅವರನ್ನು ಸ್ನೇಹಿತರು ರಕ್ಷಿಸಲು ಹರಸಾಹಸಪಟ್ಟರೂ ಸಾಧ್ಯವಾಗದೆ ಸಹಾಯಕ್ಕಾಗಿ ಕೂಗಿದ್ದಾರೆ. ಸ್ಥಳೀಯರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಮೂವರೂ ನೀರಿನಲ್ಲಿ ಕಣ್ಮರೆಯಾಗಿದ್ದರು. ಮಾಹಿತಿ ಪಡೆದ ಗೊರೂರು ಠಾಣೆ ಪೊಲೀಸರು ಅಗ್ನಿ ಶಾಮಕ ದಳದೊಂದಿಗೆ ತೆರಳಿ ಸಂಜೆ 6 ಗಂಟೆ ವೇಳೆಗೆ ಮೂವರ ಮೃತದೇಹಗಳನ್ನೂ ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ಹಾಸನದ ಹಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ತಲುಪಿಸಿದ್ದಾರೆ.
ನೀರಿಗೆ ಇಳಿದಿದ್ದ ಮೃತ ಮೂವರು ಯುವಕರಿಗೆ ಈಜು ಬರುತ್ತಿರಲಿಲ್ಲ ಎನ್ನಲಾಗಿದೆ. ನೀರಿನ ಆಳ, ಸುಳಿಯ ಅರಿವಿಲ್ಲದೆ ಅವರು ನದಿಯ ಆಳಕ್ಕೆ ಇಳಿದು ಮೃತಪಟ್ಟಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm