ಬ್ರೇಕಿಂಗ್ ನ್ಯೂಸ್
15-06-26 04:54 pm HK News Staffer ಕ್ರೈಂ
ಕಾರವಾರ, ಜೂನ್ 15: ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್ ಚಿತ್ರೀಕರಣ ಮಾಡಲು ಹೋಗಿದ್ದ ಐಟಿ ಉದ್ಯೋಗಿಯೊಬ್ಬ ಸಮುದ್ರದ ಅಲೆಗಳಿಗೆ ಸಿಲುಕಿ ನಾಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಸಮುದ್ರ ತೀರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಪುಣೆ ಮೂಲದ ಹಾಗೂ ಖಾಸಗಿ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಜೀವನ್ ಭಟ್ಟರಾಯಿ (26) ಸಮುದ್ರದಲ್ಲಿ ಕೊಚ್ಚಿಹೋಗಿರುವ ಯುವಕ. ಪ್ರವಾಸದ ಭಾಗವಾಗಿ ಐವರು ಸ್ನೇಹಿತರೊಂದಿಗೆ ಕುಮಟಾ ಭಾಗಕ್ಕೆ ಬಂದಿದ್ದ ಅವರು ಕಳೆದ ಮೂರು ದಿನಗಳಿಂದ ಖಾಸಗಿ ರೆಸಾರ್ಟ್ನಲ್ಲಿ ತಂಗಿದ್ದರು.
ಭಾನುವಾರ ರೆಸಾರ್ಟ್ನಿಂದ ಚೆಕ್ಔಟ್ ಆಗುವ ಮುನ್ನ ಸ್ನೇಹಿತರೊಂದಿಗೆ ಕಡ್ಲೆ ಸಮುದ್ರ ತೀರಕ್ಕೆ ತೆರಳಿದ್ದ ಜೀವನ್, ರೀಲ್ಸ್ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಸಮುದ್ರದೊಳಗೆ ಇಳಿದಿದ್ದ ಅವರು ಪ್ರಬಲ ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದಾರೆ ಎನ್ನಲಾಗಿದೆ.
ಘಟನೆ ಗಮನಕ್ಕೆ ಬರುತ್ತಿದ್ದಂತೆಯೇ ಸ್ಥಳೀಯರು ಹಾಗೂ ಸ್ನೇಹಿತರು ಹುಡುಕಾಟ ಆರಂಭಿಸಿದ್ದು, ಬಳಿಕ ಕರಾವಳಿ ಕಾವಲುಪಡೆ, ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಆದರೆ ಸಂಜೆ ವೇಳೆಯಾದರೂ ಜೀವನ್ ಅವರ ಸುಳಿವು ಲಭ್ಯವಾಗಿಲ್ಲ. ಸಮುದ್ರದಲ್ಲಿ ನಿರಂತರ ಶೋಧ ಕಾರ್ಯ ಮುಂದುವರಿದಿದ್ದು, ಘಟನೆ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಲ ತೀರಗಳಲ್ಲಿ ಸೆಲ್ಫಿ ಹಾಗೂ ರೀಲ್ಸ್ ಚಿತ್ರೀಕರಣಕ್ಕಾಗಿ ಅಪಾಯಕಾರಿ ಪ್ರದೇಶಗಳಿಗೆ ತೆರಳುವ ಪ್ರವೃತ್ತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಘಟನೆ ಮತ್ತೊಮ್ಮೆ ಎಚ್ಚರಿಕೆಯ ಗಂಟೆ ಮೊಳಗಿಸಿದೆ. ಸಾರ್ವಜನಿಕರು ಸಮುದ್ರ ತೀರಗಳಲ್ಲಿ ಸುರಕ್ಷತಾ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm