ಬ್ರೇಕಿಂಗ್ ನ್ಯೂಸ್
15-06-26 09:21 pm HK News Staffer ಕ್ರೈಂ
ಬೆಂಗಳೂರು, ಜೂನ್ 15: ಆನ್ಲೈನ್ ಬೆಟ್ಟಿಂಗ್ ಚಟಕ್ಕೆ ಬಿದ್ದು ಸಂಸಾರವನ್ನೇ ಕಳೆದುಕೊಂಡ ವ್ಯಕ್ತಿಯೊಬ್ಬ, ತನ್ನೊಂದಿಗೆ ಮತ್ತೆ ಬದುಕಲು ನಿರಾಕರಿಸಿದ ಪತ್ನಿಯನ್ನು ಮಕ್ಕಳ ಕಣ್ಣೆದುರೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಮಹಾದೇವಪುರದ ಪುಷ್ಪಾಂಜಲಿ ಥಿಯೇಟರ್ ಸಮೀಪದ ಮನೆಯಲ್ಲಿ ನಡೆದಿದೆ. ಕೊಲೆಗೆ ಕೆಲವೇ ಕ್ಷಣಗಳ ಮೊದಲು ಆರೋಪಿ ವಿಡಿಯೋ ಮಾಡಿ ಬೆದರಿಕೆ ಹಾಕಿದ್ದ ಸಂಗತಿ ಪ್ರಕರಣಕ್ಕೆ ಮತ್ತಷ್ಟು ತೀವ್ರತೆ ನೀಡಿದೆ.
ಮಂಜುಳಾ (32) ಕೊಲೆಯಾದ ದುರ್ದೈವಿ. ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಹೋಂ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತ ಮಂಜುಳ ಇಬ್ಬರು ಮಕ್ಕಳನ್ನು ಸಾಕುತ್ತಿದ್ದರು. ಪ್ರದೀಪ್ ಕೊಲೆ ಆರೋಪಿಯಾಗಿ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬೆಟ್ಟಿಂಗ್ ಚಟದಿಂದ ಹಾಳಾದ ಸಂಸಾರ
ಸುಮಾರು 15 ವರ್ಷಗಳ ಹಿಂದೆ ಮಂಜುಳಾ ಮತ್ತು ಪ್ರದೀಪ್ ವಿವಾಹವಾಗಿದ್ದರು. ಆದರೆ ಕಳೆದ ಎರಡು-ಮೂರು ವರ್ಷಗಳಿಂದ ಪ್ರದೀಪ್ ಆನ್ಲೈನ್ ಬೆಟ್ಟಿಂಗ್ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ. ಇದರಿಂದ ಕುಟುಂಬದಲ್ಲಿ ನಿರಂತರ ಕಲಹ ಉಂಟಾಗಿತ್ತು. ಗಂಡನ ಕಿರುಕುಳ ಮತ್ತು ಆರ್ಥಿಕ ಸಂಕಷ್ಟದಿಂದ ಬೇಸತ್ತ ಮಂಜುಳಾ, ಇಬ್ಬರು ಮಕ್ಕಳೊಂದಿಗೆ ತವರು ಮನೆಗೆ ಬಂದು ವಾಸವಾಗಿದ್ದರು.
ಇದಾದ ಬಳಿಕ ಪ್ರದೀಪ್ ತನ್ನ ಪತ್ನಿಯ ಮೇಲೆ ಅನೈತಿಕ ಸಂಬಂಧದ ಆರೋಪ ಮಾಡುತ್ತಿದ್ದನು. ಮಕ್ಕಳೂ ತನ್ನವರಲ್ಲ ಎಂಬ ಅನುಮಾನ ವ್ಯಕ್ತಪಡಿಸುತ್ತಿದ್ದನೆಂದು ಕುಟುಂಬಸ್ಥರು ತಿಳಿಸಿದ್ದಾರೆ. ಜೊತೆಗೆ ಪತ್ನಿ ತನ್ನಿಂದ ದೂರವಾಗಲು ಅತ್ತೆ ಮತ್ತು ನಾದಿನಿಯೇ ಕಾರಣ ಎಂದು ಸಾರ್ವಜನಿಕವಾಗಿಯೂ ನಿಂದಿಸುತ್ತಿದ್ದ ಎನ್ನಲಾಗಿದೆ.
‘ಕ್ಷಮಿಸು’ ಎಂದು ನಾಟಕವಾಡಿ ಹತ್ಯೆ
ಭಾನುವಾರ ರಾತ್ರಿ ಸುಮಾರು 9 ಗಂಟೆ ವೇಳೆಗೆ ಪ್ರದೀಪ್ ಪತ್ನಿಯ ತವರು ಮನೆಗೆ ಬಂದಿದ್ದಾನೆ. “ನನ್ನಿಂದ ದೊಡ್ಡ ತಪ್ಪಾಗಿದೆ, ಕೊನೆಯ ಅವಕಾಶ ಕೊಡು, ನಿನ್ನ ಕಾಲಿಗೆ ಬೀಳುತ್ತೇನೆ” ಎಂದು ಹೇಳಿ ಮಂಜುಳಾಳನ್ನು ತಬ್ಬಿಕೊಂಡಿದ್ದಾನೆ.
ಆದರೆ ಅದು ಕ್ಷಮೆ ಕೇಳುವ ನಾಟಕವಾಗಿತ್ತು. ಏಕಾಏಕಿ ತನ್ನ ಜಾಕೆಟ್ನೊಳಗೆ ಅಡಗಿಸಿಟ್ಟಿದ್ದ ಚಾಕುವನ್ನು ಹೊರತೆಗೆದು ಮಂಜುಳಾಳ ಹೊಟ್ಟೆ ಮತ್ತು ದೇಹದ ಭಾಗಗಳಿಗೆ ಸುಮಾರು 20 ಬಾರಿ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಮಂಜುಳಾ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.
ಮಕ್ಕಳು ಅಳುತ್ತಿದ್ದರೂ ಕರಗದ ಹೃದಯ
ತಾಯಿಯ ಮೇಲೆ ದಾಳಿ ನಡೆಯುತ್ತಿದ್ದಂತೆ ಇಬ್ಬರು ಮಕ್ಕಳು ಜೋರಾಗಿ ಕಿರುಚಿ ಅಳಲು ಆರಂಭಿಸಿದ್ದಾರೆ. ಆದರೆ ಮಕ್ಕಳ ಕಣ್ಣೆದುರೇ ಪತ್ನಿಯ ಮೇಲೆ ನಿರಂತರವಾಗಿ ಹಲ್ಲೆ ನಡೆಸಿದ ಪ್ರದೀಪ್, ಆಕೆ ಬದುಕುಳಿಯುವುದಿಲ್ಲ ಎಂಬುದು ಖಚಿತವಾದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಕೊಲೆಗೆ ಮುನ್ನವೇ ವಿಡಿಯೋ ಬೆದರಿಕೆ
ಹತ್ಯೆಗೆ ಕೆಲವೇ ಕ್ಷಣಗಳ ಮೊದಲು ಪ್ರದೀಪ್ ವಿಡಿಯೋ ರೆಕಾರ್ಡ್ ಮಾಡಿದ್ದಾನೆ. ಅದರಲ್ಲಿ ತಾನು ಆನ್ಲೈನ್ ಬೆಟ್ಟಿಂಗ್ ಚಟಕ್ಕೆ ಬಿದ್ದು ಜೀವನ ಹಾಳು ಮಾಡಿಕೊಂಡಿರುವುದಾಗಿ ಹೇಳಿಕೊಂಡಿದ್ದಾನೆ. “ನನ್ನ ಹೆಂಡತಿ ಮಂಜುಳಾ ಮನೆಗೆ ಬರದಿದ್ದರೆ ಅವಳನ್ನೂ ಸಾಯಿಸುತ್ತೇನೆ, ನಾನೂ ಸಾಯುತ್ತೇನೆ” ಎಂದು ವಿಡಿಯೋದಲ್ಲಿ ಬೆದರಿಕೆ ಹಾಕಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಪ್ರಕರಣ ದಾಖಲು, ಆರೋಪಿಗಾಗಿ ಹುಡುಕಾಟ
ಘಟನೆಯ ಬಳಿಕ ಮಹಾದೇವಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಕೊಲೆ ಪ್ರಕರಣ ದಾಖಲಿಸಲಾಗಿದೆ. ಪರಾರಿಯಾಗಿರುವ ಆರೋಪಿ ಪ್ರದೀಪ್ ಬಂಧನಕ್ಕೆ ವಿಶೇಷ ತಂಡ ರಚಿಸಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ.
ಈ ಘಟನೆ ಆನ್ಲೈನ್ ಬೆಟ್ಟಿಂಗ್ ವ್ಯಸನ, ಕೌಟುಂಬಿಕ ಹಿಂಸೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳ ಗಂಭೀರ ಪರಿಣಾಮವನ್ನು ಮತ್ತೊಮ್ಮೆ ಬಯಲಿಗೆಳೆದಿದೆ.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm