ಬ್ರೇಕಿಂಗ್ ನ್ಯೂಸ್
15-06-26 09:21 pm HK News Staffer ಕ್ರೈಂ
ಬೆಂಗಳೂರು, ಜೂನ್ 15: ಆನ್ಲೈನ್ ಬೆಟ್ಟಿಂಗ್ ಚಟಕ್ಕೆ ಬಿದ್ದು ಸಂಸಾರವನ್ನೇ ಕಳೆದುಕೊಂಡ ವ್ಯಕ್ತಿಯೊಬ್ಬ, ತನ್ನೊಂದಿಗೆ ಮತ್ತೆ ಬದುಕಲು ನಿರಾಕರಿಸಿದ ಪತ್ನಿಯನ್ನು ಮಕ್ಕಳ ಕಣ್ಣೆದುರೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಮಹಾದೇವಪುರದ ಪುಷ್ಪಾಂಜಲಿ ಥಿಯೇಟರ್ ಸಮೀಪದ ಮನೆಯಲ್ಲಿ ನಡೆದಿದೆ. ಕೊಲೆಗೆ ಕೆಲವೇ ಕ್ಷಣಗಳ ಮೊದಲು ಆರೋಪಿ ವಿಡಿಯೋ ಮಾಡಿ ಬೆದರಿಕೆ ಹಾಕಿದ್ದ ಸಂಗತಿ ಪ್ರಕರಣಕ್ಕೆ ಮತ್ತಷ್ಟು ತೀವ್ರತೆ ನೀಡಿದೆ.
ಮಂಜುಳಾ (32) ಕೊಲೆಯಾದ ದುರ್ದೈವಿ. ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಹೋಂ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತ ಮಂಜುಳ ಇಬ್ಬರು ಮಕ್ಕಳನ್ನು ಸಾಕುತ್ತಿದ್ದರು. ಪ್ರದೀಪ್ ಕೊಲೆ ಆರೋಪಿಯಾಗಿ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬೆಟ್ಟಿಂಗ್ ಚಟದಿಂದ ಹಾಳಾದ ಸಂಸಾರ
ಸುಮಾರು 15 ವರ್ಷಗಳ ಹಿಂದೆ ಮಂಜುಳಾ ಮತ್ತು ಪ್ರದೀಪ್ ವಿವಾಹವಾಗಿದ್ದರು. ಆದರೆ ಕಳೆದ ಎರಡು-ಮೂರು ವರ್ಷಗಳಿಂದ ಪ್ರದೀಪ್ ಆನ್ಲೈನ್ ಬೆಟ್ಟಿಂಗ್ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ. ಇದರಿಂದ ಕುಟುಂಬದಲ್ಲಿ ನಿರಂತರ ಕಲಹ ಉಂಟಾಗಿತ್ತು. ಗಂಡನ ಕಿರುಕುಳ ಮತ್ತು ಆರ್ಥಿಕ ಸಂಕಷ್ಟದಿಂದ ಬೇಸತ್ತ ಮಂಜುಳಾ, ಇಬ್ಬರು ಮಕ್ಕಳೊಂದಿಗೆ ತವರು ಮನೆಗೆ ಬಂದು ವಾಸವಾಗಿದ್ದರು.
ಇದಾದ ಬಳಿಕ ಪ್ರದೀಪ್ ತನ್ನ ಪತ್ನಿಯ ಮೇಲೆ ಅನೈತಿಕ ಸಂಬಂಧದ ಆರೋಪ ಮಾಡುತ್ತಿದ್ದನು. ಮಕ್ಕಳೂ ತನ್ನವರಲ್ಲ ಎಂಬ ಅನುಮಾನ ವ್ಯಕ್ತಪಡಿಸುತ್ತಿದ್ದನೆಂದು ಕುಟುಂಬಸ್ಥರು ತಿಳಿಸಿದ್ದಾರೆ. ಜೊತೆಗೆ ಪತ್ನಿ ತನ್ನಿಂದ ದೂರವಾಗಲು ಅತ್ತೆ ಮತ್ತು ನಾದಿನಿಯೇ ಕಾರಣ ಎಂದು ಸಾರ್ವಜನಿಕವಾಗಿಯೂ ನಿಂದಿಸುತ್ತಿದ್ದ ಎನ್ನಲಾಗಿದೆ.
‘ಕ್ಷಮಿಸು’ ಎಂದು ನಾಟಕವಾಡಿ ಹತ್ಯೆ
ಭಾನುವಾರ ರಾತ್ರಿ ಸುಮಾರು 9 ಗಂಟೆ ವೇಳೆಗೆ ಪ್ರದೀಪ್ ಪತ್ನಿಯ ತವರು ಮನೆಗೆ ಬಂದಿದ್ದಾನೆ. “ನನ್ನಿಂದ ದೊಡ್ಡ ತಪ್ಪಾಗಿದೆ, ಕೊನೆಯ ಅವಕಾಶ ಕೊಡು, ನಿನ್ನ ಕಾಲಿಗೆ ಬೀಳುತ್ತೇನೆ” ಎಂದು ಹೇಳಿ ಮಂಜುಳಾಳನ್ನು ತಬ್ಬಿಕೊಂಡಿದ್ದಾನೆ.
ಆದರೆ ಅದು ಕ್ಷಮೆ ಕೇಳುವ ನಾಟಕವಾಗಿತ್ತು. ಏಕಾಏಕಿ ತನ್ನ ಜಾಕೆಟ್ನೊಳಗೆ ಅಡಗಿಸಿಟ್ಟಿದ್ದ ಚಾಕುವನ್ನು ಹೊರತೆಗೆದು ಮಂಜುಳಾಳ ಹೊಟ್ಟೆ ಮತ್ತು ದೇಹದ ಭಾಗಗಳಿಗೆ ಸುಮಾರು 20 ಬಾರಿ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಮಂಜುಳಾ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.
ಮಕ್ಕಳು ಅಳುತ್ತಿದ್ದರೂ ಕರಗದ ಹೃದಯ
ತಾಯಿಯ ಮೇಲೆ ದಾಳಿ ನಡೆಯುತ್ತಿದ್ದಂತೆ ಇಬ್ಬರು ಮಕ್ಕಳು ಜೋರಾಗಿ ಕಿರುಚಿ ಅಳಲು ಆರಂಭಿಸಿದ್ದಾರೆ. ಆದರೆ ಮಕ್ಕಳ ಕಣ್ಣೆದುರೇ ಪತ್ನಿಯ ಮೇಲೆ ನಿರಂತರವಾಗಿ ಹಲ್ಲೆ ನಡೆಸಿದ ಪ್ರದೀಪ್, ಆಕೆ ಬದುಕುಳಿಯುವುದಿಲ್ಲ ಎಂಬುದು ಖಚಿತವಾದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಕೊಲೆಗೆ ಮುನ್ನವೇ ವಿಡಿಯೋ ಬೆದರಿಕೆ
ಹತ್ಯೆಗೆ ಕೆಲವೇ ಕ್ಷಣಗಳ ಮೊದಲು ಪ್ರದೀಪ್ ವಿಡಿಯೋ ರೆಕಾರ್ಡ್ ಮಾಡಿದ್ದಾನೆ. ಅದರಲ್ಲಿ ತಾನು ಆನ್ಲೈನ್ ಬೆಟ್ಟಿಂಗ್ ಚಟಕ್ಕೆ ಬಿದ್ದು ಜೀವನ ಹಾಳು ಮಾಡಿಕೊಂಡಿರುವುದಾಗಿ ಹೇಳಿಕೊಂಡಿದ್ದಾನೆ. “ನನ್ನ ಹೆಂಡತಿ ಮಂಜುಳಾ ಮನೆಗೆ ಬರದಿದ್ದರೆ ಅವಳನ್ನೂ ಸಾಯಿಸುತ್ತೇನೆ, ನಾನೂ ಸಾಯುತ್ತೇನೆ” ಎಂದು ವಿಡಿಯೋದಲ್ಲಿ ಬೆದರಿಕೆ ಹಾಕಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಪ್ರಕರಣ ದಾಖಲು, ಆರೋಪಿಗಾಗಿ ಹುಡುಕಾಟ
ಘಟನೆಯ ಬಳಿಕ ಮಹಾದೇವಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಕೊಲೆ ಪ್ರಕರಣ ದಾಖಲಿಸಲಾಗಿದೆ. ಪರಾರಿಯಾಗಿರುವ ಆರೋಪಿ ಪ್ರದೀಪ್ ಬಂಧನಕ್ಕೆ ವಿಶೇಷ ತಂಡ ರಚಿಸಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ.
ಈ ಘಟನೆ ಆನ್ಲೈನ್ ಬೆಟ್ಟಿಂಗ್ ವ್ಯಸನ, ಕೌಟುಂಬಿಕ ಹಿಂಸೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳ ಗಂಭೀರ ಪರಿಣಾಮವನ್ನು ಮತ್ತೊಮ್ಮೆ ಬಯಲಿಗೆಳೆದಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
19-07-26 09:37 pm
HK News Staffer
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm